24ರಿಂದ ಆ.21ರ ವರೆಗೆ ಶ್ರಾವಣ ಕಾರ್ಯಕ್ರಮ
Team Udayavani, Jul 22, 2017, 1:47 PM IST
ದಾವಣಗೆರೆ: ಶ್ರಾವಣ ಮಾಸದ ಪ್ರಯುಕ್ತ ಜು.24 ರಿಂದ ಆ.21ರ ವರೆಗೆ ಕಲ್ಯಾಣ ದರ್ಶನ ಪ್ರವಚನ, ಶ್ರೀ ಜಯದೇವ
ಜೋಳಿಗೆ, ಹಾಲು ಕುಡಿಸುವ ಹಬ್ಬ, ಕಂಠ ಪಾಠ, ವೇಷಭೂಷಣ, ಭಾಷಣ, ವಚನ ಗಾಯನ ಒಳಗೊಂಡಂತೆ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.
ಶ್ರಾವಣ ಮಾಸದ ಅಂಗವಾಗಿ ದಾವಣಗೆರೆ ವಿರಕ್ತ ಮಠದಲ್ಲಿ 1911ರಲ್ಲಿ ಶ್ರೀ ಮೃತ್ಯುಂಜಯ ಅಪ್ಪ ಮತ್ತು ಹಡೇìಕರ್ ಮಂಜಪ್ಪನವರು ಪ್ರವಚನ ಕಾರ್ಯಕ್ರಮ ಪ್ರಾರಂಭಿಸಿದರು. ಅಂದಿನಿಂದ ಈವರೆಗೆ ಪ್ರವಚನ ಕಾರ್ಯಕ್ರಮ ಆಯೋಜಿಸ
ಲಾಗುತ್ತಿದೆ. ಶ್ರಾವಣ ಮಾಸದಲ್ಲಿ ಸದ್ವಿಚಾರ ಕೇಳುವುದು ಒಳ್ಳೆಯದು ಎಂಬ ಮಾತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜು. 24ರ ಸೋಮವಾರ ಸಂಜೆ 6ಕ್ಕೆ ನಡೆಯುವ ಪ್ರವಚನ ಉದ್ಘಾಟನಾ ಸಮಾರಂಭದಲ್ಲಿ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ| ಎಂ.ಎ. ಸಲೀಂ, ನಗರಸಭೆ ಮಾಜಿ ಅಧ್ಯಕ್ಷ ಬಿ. ವೀರಣ್ಣ, ಬಸವ ಕೇಂದ್ರದ ಅಧ್ಯಕ್ಷ ಎಂ. ಜಯಕುಮಾರ್ ಇತರರು ಭಾಗವಹಿಸುವರು. ಗದಗದ ಟಿ.ಎಂ. ಪಂಚಾಕ್ಷರಿಶಾಸ್ತ್ರಿಗಳು ಪ್ರವಚನ ನಡೆಸಿಕೊಡುವರು. ಪ್ರತಿ ದಿನ ಸಂಜೆ 6.30 ರಿಂದ ರಾತ್ರಿ 8ರ ವರೆಗೆ ಪ್ರವಚನ ನಡೆಯಲಿದೆ ಎಂದು ತಿಳಿಸಿದರು.
ಆ. 28, 29 ರಂದು ಕಲ್ಲು ನಾಗರಕ್ಕೆ ಹಾಕುವ ಹಾಲು ಮಕ್ಕಳ ಪಾಲಾಗಲಿ…ಎಂಬ ವೈಚಾರಿಕ ಚಿಂತನೆಯ ಬಸವ
ಪಂಚಮಿ, ಹಾಲು ಕುಡಿಸುವ ಹಬ್ಬ ದೊಡ್ಡಪೇಟೆಯ ಎಸ್.ಜೆ.ಎಂ. ಶಾಲೆಯಲ್ಲಿ ನಡೆಯಲಿದೆ. ಆ. 1ರಿಂದ ನಗರದ ವಿವಿಧ ಭಾಗದಲ್ಲಿ ಶ್ರೀ ಜಯದೇವ ಜೋಳಿಗೆ ಕಾರ್ಯಕ್ರಮ, ಆ. 14 ರಿಂದ 28ರ ವರೆಗೆ ವಿರಕ್ತ ಮಠದಲ್ಲಿ ಮಕ್ಕಳಿಗಾಗಿ ವಚನ ಕಂಠಪಾಠ ಸ್ಪರ್ಧೆ, ವಚನ ಗಾಯನ ಸ್ಪರ್ಧೆ, ಬಸವಾದಿ ಶರಣರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸ್ಪರ್ಧೆ, ಭಾಷಣ ಸ್ಪರ್ಧೆ ನಡೆಯಲಿವೆ. 1 ರಿಂದ 10ನೇ ತರಗತಿ ಮಕ್ಕಳು ಭಾಗವಹಿಸುವರು ಎಂದು ತಿಳಿಸಿದರು.
ಜು. 30, ಆ. 6,13 ಮತ್ತು 20 ರಂದು ಭಾನುವಾರಗಳಂದು ಬೆಳಗ್ಗೆ 7.30 ರಿಂದ 9.30ರ ವರೆಗೆ ವಿರಕ್ತ ಮಠದಲ್ಲಿ ಸಹಜ
ಶಿವಯೋಗ ಮತ್ತು ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು. ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ, ಎಂ. ಜಯಕುಮಾರ್, ಎಸ್. ಓಂಕಾರಪ್ಪ, ಪಲ್ಲಾಗಟ್ಟೆ ಕೊಟ್ಟೂರೇಶಪ್ಪ, ಎಂ.ಕೆ. ಬಕ್ಕಪ್ಪ, ಜೆ. ಸೋಮನಾಥ್, ಅಂದನೂರು ಮುಪ್ಪಣ್ಣ, ಕುಂಟೋಜಿ ಚನ್ನಪ್ಪ, ಚಂದ್ರಶೇಖರಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ