ಯಾರಿಗೆ ಅಮೃತ ಸಂದೇಶ? ಇಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಜನ್ಮದಿನ ಸಮಾವೇಶ

ನಡೆದಿದೆ ಶಕ್ತಿ ಪ್ರದರ್ಶನದ ರಾಜಕೀಯ ಲಾಭದ ಲೆಕ್ಕಾಚಾರ

Team Udayavani, Aug 3, 2022, 7:30 AM IST

ಯಾರಿಗೆ ಅಮೃತ ಸಂದೇಶ? ಇಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಜನ್ಮದಿನ ಸಮಾವೇಶ

ದಾವಣಗೆರೆ: ಬಹುಚರ್ಚಿತ”ಸಿದ್ದರಾಮಯ್ಯ ಹುಟ್ಟುಹಬ್ಬ’ ಸಮಾವೇಶ ರಾಜಕೀಯವಾಗಿ ಯಾವ ಸಂದೇಶ ರವಾನಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಚುನಾವಣೆ ಹೊಸ್ತಿಲಲ್ಲಿ ನಡೆಯು ತ್ತಿರುವ ಈ ಸಮಾವೇಶ ಮತ್ತು ಇದರಲ್ಲಿ ರಾಹುಲ್‌ ಗಾಂಧಿಯವರ ಉಪಸ್ಥಿತಿಯ ಹಿಂದಿನ ಲೆಕ್ಕಾ ಚಾರಗಳೂ ರಾಜಕೀಯ ಲಾಭದ ನಿರೀಕ್ಷೆಯದ್ದೇ ಆಗಿವೆ. ರಾಹುಲ್‌ ಗಾಂಧಿಯವರು ಮಂಗಳವಾರವೇ  ರಾಜ್ಯಕ್ಕೆ ಆಗಮಿಸಿದ್ದಾರೆ.

ವ್ಯಕ್ತಿಪೂಜೆಯಲ್ಲ, ಪಕ್ಷ ಪೂಜೆ ಮಾಡಿ ಎನ್ನುತ್ತಿರುವ ಹೊತ್ತಿನಲ್ಲೇ ಈ “ಅಮೃತ ಮಹೋತ್ಸವ’ ನಾನಾ ರಾಜಕೀಯ ವ್ಯಾಖ್ಯಾನ ಗಳಿಗೆ ಎಡೆ ಮಾಡಿಕೊಟ್ಟಿದೆ.

ಚುನಾವಣೆ ಹತ್ತಿರ ಇರುವುದರಿಂದ ಈ ಸಮಾವೇಶ ಕಾಂಗ್ರೆಸ್‌ಗೆ ಲಾಭ ತಂದುಕೊಡಲಿದೆ ಎನ್ನುವ ನಿರೀಕ್ಷೆ ಪಕ್ಷದ ಹೈಕಮಾಂಡ್‌ಗೂ ಇದೆ. ಇದೇ ಕಾರಣದಿಂದ ರಾಹುಲ್‌ ಗಾಂಧಿ ಕಾರ್ಯಕ್ರಮಕ್ಕೆ ಬರಲು ಒಪ್ಪಿರುವುದು.

ಲಾಭದ ಲೆಕ್ಕಾಚಾರ
ಅಮೃತ ಮಹೋತ್ಸವ ಸಮಾವೇಶ ಒಂದು ರೀತಿಯಲ್ಲಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಎಂಬುದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಆದರೆ ಇದರ ರಾಜಕೀಯ ಲಾಭ ಯಾರಿಗೆ ಎಂಬ ಪ್ರಶ್ನೆಯೂ ಮೂಡಿದೆ. ಸಿದ್ದರಾಮಯ್ಯ ಅವರು ಈ ಸಮಾವೇಶದಿಂದ ಕಾಂಗ್ರೆಸ್‌ಗೆ ಶಕ್ತಿ ಬರಲಿದೆ, ಚುನಾವಣೆ ಹತ್ತಿರ ಇರುವಾಗ ಇದು ಸಂಘಟನೆಗೆ ನೆರವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ. ಇದು ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರಿಗೆ ಬಲ ತುಂಬಲಿದೆ.

ಜೆಡಿಎಸ್‌ ಮತ್ತು ಬಿಜೆಪಿಯ ಕೆಲವು ಶಾಸಕರು, ನಾಯಕರು ಪರೋಕ್ಷ ಸಹಕಾರ ನೀಡುತ್ತಿರುವುದು ಗುಟ್ಟೇನಲ್ಲ. ಕಾಂಗ್ರೆಸ್‌ನ ಬಹುತೇಕ ಶಾಸಕರು, ಮಾಜಿ ಶಾಸಕರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಹಿಂದುಳಿದ ಸಮುದಾಯದ ಮುಖಂಡರು ಸಮಾವೇಶದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಟಿಕೆಟ್‌ ಪಡೆಯಲು ಇದನ್ನೇ ಮುಂದಿಟ್ಟು ಒತ್ತಡ ಹೇರಬಹುದು. ರಾಜ್ಯ ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ಹುಟ್ಟುಹಬ್ಬ ವಿಚಾರದಲ್ಲಿ ಚರ್ಚೆಯಾದಷ್ಟು ಬೇರೆ ಯಾವುದೇ ನಾಯಕರ ಹುಟ್ಟುಹಬ್ಬ ಆಚರಣೆ ಬಗ್ಗೆ ಆಗಿಲ್ಲ. ಹೀಗಾಗಿ ದಾವಣಗೆರೆಯ ಸಮಾವೇಶ ರಾಜ್ಯ ರಾಜಕಾರಣದಲ್ಲಿ ಯಾವ ಧ್ರುವೀಕರಣಕ್ಕೆ ಕಾರಣವಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

“ಅಹಿಂದ’ ಸಮಾವೇಶ, “ಬಳ್ಳಾರಿ’ ಪಾದಯಾತ್ರೆ ಅನಂತರದ ಶಕ್ತಿ ಪ್ರದರ್ಶನ
ಸಿದ್ದರಾಮಯ್ಯ ಜೆಡಿಎಸ್‌ ತೊರೆದ ಅನಂತರ ರಾಜ ಕೀಯ ವಾಗಿ ಬಲ ಪ್ರದರ್ಶನಕ್ಕೆ ಕೈಗೊಂಡ “ಅಹಿಂದ ಸಮಾವೇಶ’, ಕಾಂಗ್ರೆಸ್‌ ಸೇರಿದ ಬಳಿಕ ವಿಪಕ್ಷ ನಾಯಕನಾಗಿ ಗಣಿ ಅಕ್ರಮ ವಿರುದ್ಧ ಕೈಗೊಂಡ “ಬಳ್ಳಾರಿ ಪಾದಯಾತ್ರೆ’ ಐತಿ ಹಾಸಿಕ. ಇವೆರಡೂ ಅವರಿಗೆ ರಾಜ ಕೀಯ ವಾಗಿ ಬಲ ತುಂಬಿವೆ. ಈಗ ದಾವಣಗೆರೆ ಸಮಾವೇಶವೂ ಅವರ ರಾಜಕೀಯ ಜೀವನದ ಮಹತ್ವದ ಘಟ್ಟ ಎಂದೇ ಬಿಂಬಿತ ವಾಗಿದೆ. ಇಲ್ಲಿಂದ ಅವರ ರಾಜಕೀಯ ನಡೆ ಬದ ಲಾಗುವ ಲಕ್ಷಣಗಳೂ ಕಂಡು ಬರುತ್ತಿವೆ.

ಕಾರ್ಯಕ್ರಮಕ್ಕೆ ಸಿದ್ಧತೆ ಪೂರ್ಣ
ದಾವಣಗೆರೆ: ಅಮೃತ ಮಹೋತ್ಸವ ಕಾರ್ಯಕ್ರಮದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಗರದ ಹೊರವಲಯದಲ್ಲಿರುವ ಶಾಮನೂರು ಅರಮನೆ ಮೈದಾನದಲ್ಲಿ ಸುಂದರ ಭವ್ಯ ವೇದಿಕೆ ನಿರ್ಮಾಣಗೊಂಡಿದೆ. ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಮಧ್ಯದ ವೇದಿಕೆಯಲ್ಲಿ ರಾಹುಲ್‌ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಮತ್ತಿತರ ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

-ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.