ಕೆಎಸ್ಸಾರ್ಟಿಸಿ 20 ಚಾಲಕರಿಗೆ ಬೆಳ್ಳಿ ಪದಕ


Team Udayavani, Mar 23, 2018, 10:48 AM IST

dav-3.jpg

ದಾವಣಗೆರೆ: ಸತತ ಐದು ವರ್ಷಗಳ ಕಾಲ ಯಾವುದೇ ರೀತಿಯ ಅಪಘಾತ ಮತ್ತು ಅಪರಾಧ ರಹಿತ ಚಾಲನೆ ಮಾಡಿದಂತಹ 20 ಚಾಲಕರಿಗೆ ಗುರುವಾರ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಬೆಳ್ಳಿ ಪದಕ ವಿತರಿಸಲಾಯಿತು. ದಾವಣಗೆರೆ ವಿಭಾಗದ 20 ಜನರಿಗೆ 32 ಗ್ರಾಂ ತೂಕದ ಬೆಳ್ಳಿಯ ಪದಕ, 2 ಸಾವಿರ ರೂಪಾಯಿ ನಗದು ಮತ್ತು ಇನ್ನು ಮುಂದೆ ಪ್ರತಿ ತಿಂಗಳು 50 ರೂಪಾಯಿ ವಿಶೇಷ ಭತ್ಯೆಯ ಆದೇಶ ಪತ್ರ ನೀಡಲಾಯಿತು.

ಬೆಳ್ಳಿ ಪದಕ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌, 5 ವರ್ಷಗಳಲ್ಲಿ ಯಾವುದೇ ರೀತಿಯ ಅಪಘಾತ ಮತ್ತು ಅಪರಾಧರಹಿತ ಚಾಲನೆಗೆ ಬೆಳ್ಳಿಪದಕ ಪಡೆದಂತಹ ಚಾಲಕರು ಇತರರಿಗೂ ಮಾದರಿಯಾಗಿದ್ದಾರೆ ಎಂದರು.

ಓರ್ವ ವೈದ್ಯ ಏಕ ಕಾಲಕ್ಕೆ ಒಬ್ಬರ ಜೀವ ಉಳಿಸಿದರೆ. ಒಬ್ಬ ಚಾಲಕ ಏಕ ಕಾಲಕ್ಕೆ ನೂರಾರು ಜನರ ಪ್ರಾಣ ಉಳಿಸಬಲ್ಲ. ಒಂದೇ ಒಂದು ಕ್ಷಣ ಕರ್ತವ್ಯದಿಂದ ವಿಚಲಿತರಾಗದೆ ಮಾಡುವ ಸೇವೆ ಶ್ಲಾಘನೀಯ. ಚಾಲಕರ ಒಂದು ಕ್ಷಣದ ಉದಾಸೀನತೆ ಅನೇಕರ ಸಾವು. ನೋವಿಗೆ ಕಾರಣವಾಗಬಲ್ಲದು. ಬೆಳ್ಳಿ ಪದಕ ಪಡೆದ ಚಾಲಕರ ಜೊತೆಗೆ ಇತರರೂ ಅಪಘಾತ ಮತ್ತು ಅಪರಾಧ ರಹಿತ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾರಕ್ಷಣಾಧಿಕಾರಿ ಆರ್‌. ಚೇತನ್‌ ಮಾತನಾಡಿ, ಚಾಲಕನನ್ನು ನಂಬಿ ನೂರಾರು ಜನರು ಬಸ್‌ನಲ್ಲಿ ಪ್ರತಿ ನಿತ್ಯ ಪ್ರಯಾಣಿಸುತ್ತಾರೆ. ಅಂತಹವರ ಜೀವ ಉಳಿಸುವ ಮಹತ್ತರ ಜವಾಬ್ದಾರಿ ಚಾಲಕರ ಮೇಲೆ ಇದೆ. 5 ವರ್ಷಗಳಲ್ಲಿ ಯಾವುದೇ ರೀತಿಯ ಅಪಘಾತ ಮತ್ತು ಅಪರಾಧರಹಿತ ಚಾಲನೆ ಮಾಡಿದವರಿಗೆ ಬೆಳ್ಳಿಪದಕ ನೀಡುತ್ತಿರುವುದು ಸಂಸತದ ವಿಚಾರ. ಬೆಳ್ಳಿ ಪದಕ ಪಡೆದವರು 15 ವರ್ಷಗಳ ಕಾಲ ಅಪಘಾತ ಮತ್ತು ಅಪರಾಧ ರಹಿತ ಚಾಲನೆ ಮಾಡಿ ಬಂಗಾರದ ಪದಕ ಪಡೆಯುವಂತಾಗಬೇಕು ಎಂದು ಆಶಿಸಿದರು.

ಕೆಎಸ್ಸಾರ್ಟಿಸಿ ಮಂಡಳಿ ನಿರ್ದೇಶಕ ಟಿ. ತಿಪ್ಪೇಸ್ವಾಮಿ ಮಾತನಾಡಿ, 5 ವರ್ಷಗಳ ಕಾಲ ಯಾವುದೇ ರೀತಿ ಅಪಘಾತ ಮತ್ತು ಅಪರಾಧರಹಿತ ಚಾಲನೆ ಮಾಡಿದವರಿಗೆ ಬೆಳ್ಳಿಪದಕ ನೀಡಬೇಕು ಎಂದು 6 ತಿಂಗಳ ಹಿಂದೆಯೇ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ 2013 ರಿಂದ ಈಚೆಗೆ ಉತ್ತಮ ಚಾಲನಾ ಕೆಲಸ ಮಾಡಿದವರಿಗೆ ಎಲ್ಲಾ ಕಡೆ ಬೆಳ್ಳಿ ಪದಕ ಪ್ರದಾನ ಸಮಾರಂಭ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಮಹಿಳಾ ದಿನಾಚರಣೆಯಂದು 250 ಚಾಲಕರಿಗೆ ಬಂಗಾರದ ಮತ್ತು ಬೆಳ್ಳಿ ಪದಕ ಪ್ರದಾನ ಮಾಡಲಾಗಿತ್ತು. ಪ್ರತಿಯೊಬ್ಬ ಚಾಲಕರು ಸಹ ಬಂಗಾರ, ಬೆಳ್ಳಿ ಪದಕ ಪಡೆಯುವಂತಾಗಬೇಕು ಎಂದರು.

ಕೆಎಸ್ಸಾರ್ಟಿಸಿ ಸಿಬ್ಬಂದಿಗೆ ಶೇ. 10 ರಷ್ಟು ಮೂಲ ವೇತನ ಹೆಚ್ಚಿಸಬೇಕು ಎಂದು ಮಂಡಳಿ ಸಭೆಯಲ್ಲಿ ನಾವೆಲ್ಲ ಒತ್ತಾಯ ಮಾಡಿದ್ದೆವು. 2015-16ನೇ ಸಾಲಿನಲ್ಲಿ ಮಂಡಳಿ 180 ಕೋಟಿ ರೂಪಾಯಿ ನಷ್ಟದಲ್ಲಿದ್ದ ಕಾರಣ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಒಪ್ಪಲಿಲ್ಲ, ಶೇ. 8ರಷ್ಟು ಮೂಲ ವೇತನ ಹೆಚ್ಚಿಸಲು ಸಚಿವರು ಒಪ್ಪಿದರು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೇ. 12.5 ರಷ್ಟು ಮೂಲ ವೇತನ ಹೆಚ್ಚಿಸಲು ಒಪ್ಪಿಗೆ ನೀಡಿದರು. ಜಯದೇವ ಹೃದಯಾಲಯದಲ್ಲಿ ಚಾಲಕರು, ನಿರ್ವಾಹಕರಿಗೆ ಉಚಿತವಾಗಿ ಚಿಕಿತ್ಸಾ ಸೌಲಭ್ಯ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

2015-16ನೇ ಸಾಲಿನಲ್ಲಿ ಮಂಡಳಿ 180 ಕೋಟಿ ರೂಪಾಯಿ ನಷ್ಟದಲ್ಲಿದ್ದ ಮಂಡಳಿ ಚಾಲಕರು, ನಿರ್ವಾಹಕರು, ಎಲ್ಲಾ ಹಂತದ ಅಧಿಕಾರಿಗಳ ಸತತ ಪರಿಶ್ರಮದಿಂದ ಈಗ ಮಂಡಳಿ 10.5 ಕೋಟಿ ಲಾಭದಲ್ಲಿದೆ. ಇನ್ನೂ ಹೆಚ್ಚಿನ ಲಾಭ ಗಳಿಸಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು ಅಧ್ಯಕ್ಷತೆ ವಹಿಸಿದ್ದರು. ಕೆಸ್ಸಾರ್ಟಿಸಿ ಹಿರಿಯ ಅಧಿಕಾರಿ ಇಂಗಳಗಿ, ಶಿವಮೊಗ್ಗ ಡಿಪೋ ವ್ಯವಸ್ಥಾಪಕ ಅಶ್ವತ್‌ ಇತರರು ಇದ್ದರು.
 
ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಅಬ್ದುಲ್‌ ಖುದ್ದೂಸ್‌ ಸ್ವಾಗತಿಸಿದರು. ಬೆಳ್ಳಿ ಪದಕ ಸ್ವೀಕರಿಸಿದ ಕೆಲವಾರು ಚಾಲಕರು, ತಡವಾಗಿಯಾದರೂ ಬೆಳ್ಳಿ ಪದಕ ನೀಡುತ್ತಿರುವುದು ಸಂತಸದ ವಿಚಾರ. 5 ವರ್ಷ ಸತತವಾಗಿ ಯಾವುದೇ ಅಪಘಾತ ಮತ್ತು ಅಪರಾಧ ರಹಿತ ಚಾಲನೆ ಮಾಡಿರುವುದು ಬೆಳ್ಳಿ ಪದಕಕ್ಕಿಂತಲೂ ಹೆಚ್ಚಿನ ಸಂತೋಷ ನೀಡಿದೆ ಎಂದರು. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.