ದಾವಣಗೆರೆ: ಸಹೋದರಿಯರ ಜೋಡಿ ಕೊಲೆ, ಕೆಟ್ಟ ವಾಸನೆ ಬಂದಾಗಲೇ ತಿಳಿಯಿತು ವಿಚಾರ!
Team Udayavani, Jul 30, 2021, 10:30 AM IST
ದಾವಣಗೆರೆ: ಇಲ್ಲಿನ ಹೊರ ವಲಯದ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಸಹೋದರಿಯರ ಜೋಡಿ ಕೊಲೆ ನಡೆದಿದೆ. ಗೌರಮ್ಮ ಮತ್ತು ರಾಧಿಕ ಕೊಲೆಯಾದವರು.
ಇಬ್ಬರಿಗೂ ವಿವಾಹವಾಗಿತ್ತು. ಕಾರಣಾಂತರಗಳಿಂದ ವಿಚ್ಛೇದನ ಪಡೆದ ನಂತರ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡಿಕೊಂಡಿದ್ದರು. ಎರಡು ಮೂರು ದಿನಗಳಿಂದ ಕೆಲಸಕ್ಕೆ ಬಾರದೇ ಇರುವುದರಿಂದ ಅನುಮಾನಗೊಂಡ ಚಂದ್ರಮ್ಮ ಎಂಬುವರು ಕರೆ ಮಾಡಿದರೂ ಸ್ವೀಕರಿಸರಲಿಲ್ಲ.
ಇದನ್ನೂ ಓದಿ:ಬಂಟ್ವಾಳ: ರೈಲ್ವೆ ಹಳಿಯ ಮೇಲೆ ಯುವಕನ ಮೃತದೇಹ ಪತ್ತೆ
ಮನೆಯ ಬಳಿ ಹೋಗಿ ನೋಡಿದಾಗ ಕೆಟ್ಟ ವಾಸನೆ ಬರುತ್ತಿತ್ತು. ವಿದ್ಯಾನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯ ಬಾಗಿಲು ತೆರೆದು ಪರಿಶೀಲಿಸಿದಾಗ ಇಬ್ಬರು ಸಹೋದರಿಯರು ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್