ಶಿವಸಿಂಪಿ ಸಮಾಜದ ಹಾಸ್ಟೆಲ್‌, ಸಮುದಾಯ ಭವನಕ್ಕೆ ಅನುದಾನ


Team Udayavani, Jul 30, 2018, 3:23 PM IST

dvg-2.jpg

ದಾವಣಗೆರೆ: ಶಿವಸಿಂಪಿ ಸಮಾಜದ ಹಾಸ್ಟೆಲ್‌, ಸಮುದಾಯ ಭವನಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಭರವಸೆ ನೀಡಿದ್ದಾರೆ. ಭಾನುವಾರ ಶಿವಯೋಗಿ ಮಂದಿರದಲ್ಲಿ ದಾವಣಗೆರೆ ಜಿಲ್ಲಾ ಶಿವಸಿಂಪಿ ಸಮಾವೇಶ, ಕುಲಗುರು ಶರಣ ಶಿವದಾಸಿಮಯ್ಯ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಮೂಲಕ ಏನನ್ನಾದರೂ ಸಾಧಿಸಲು ಸಾಧ್ಯ. ಶಿವಸಿಂಪಿ ಸಮಾಜದವರು ಹಾಸ್ಟೆಲ್‌, ಸಮುದಾಯ ಭವನ ಮಾಡಿದರೆ ಅಗತ್ಯ ಅನುದಾನ ನೀಡುವುದಾಗಿ ಹೇಳಿದರು.

ಸಾಕ್ಷಾತ್‌ ಶಿವನಿಗೇ ಬಟ್ಟೆ ಹೊಲಿದು ಕೊಟ್ಟಿರುವ ಇತಿಹಾಸ ಹೊಂದಿರುವ ಶಿವಸಿಂಪಿ ಸಮಾಜ ಬಾಂಧವರು ಹಿಂದಿನಿಂದಲೂ ಬಟ್ಟೆ ಹೊಲೆಯುವ ವೃತ್ತಿ ಮಾಡುತ್ತಿದ್ದವರು. ಅವರಿಂದಲೇ ಬಟ್ಟೆ ಹೊಲಿಸುವುದೂ ಇತ್ತು. ಕಾಲಾನುಕ್ರಮೇಣ ಬೇರೆ ಬೇರೆ ವೃತ್ತಿ, ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದಿನ ಸಮಾಜದಲ್ಲಿ ಅಭಿವೃದ್ಧಿ ಆಗಬೇಕು ಎಂದಾದರೆ ಶಿಕ್ಷಣ ಅತಿ ಮುಖ್ಯ. ಹಾಗಾಗಿ ಶಿವಸಿಂಪಿ ಸಮಾಜದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು. 

ದೇಶದ ರಾಷ್ಟ್ರಪತಿಗಳಾಗಿದ್ದ ಅಬ್ದುಲ್‌ ಕಲಾಂರವರು ಬಡತನದಲ್ಲಿ ಬೆಳೆದವರು. ಬೀದಿ ದೀಪದ ಬೆಳಕಿನಲ್ಲಿ ಓದಿ, ಮುಂದೆ ದೊಡ್ಡ ವಿಜ್ಞಾನಿಯಾದವರು. ಪ್ರಧಾನಿ ನರೇಂದ್ರ ಮೋದಿಯವರು ಸಹ ಬಡ ಕುಟುಂಬದಿಂದ ಬಂದವರು. ಅವರ ತಾಯಿ ಬೇರೆಯವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮೋದಿ ಅವರು ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದವರು. ಶಿಕ್ಷಣದ ಮೂಲಕ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಬಡತನ, ಸಿರಿತನ ಶಾಶ್ವತ ಅಲ್ಲ, ವಿದ್ಯೆಯೇ ಶಾಶ್ವತ ಎಂದು ತಿಳಿಸಿದರು. 

ಉಪನ್ಯಾಸ ನೀಡಿದ ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎಂ. ಕೊಟ್ರೇಶ್‌, ಶಿವದಾಸಿಮಯ್ಯನವರೇ ಶಿವಸಿಂಪಿ ಸಮಾಜದ ಕುಲಗುರು ಎನ್ನುವುದಕ್ಕೆ ಸಾಕ್ಷ್ಯ ದೊರೆತಿದೆ. ಶಿವದಾಸಿಮಯ್ಯ ನಮ್ಮ ಸಮಾಜದ ಕುಲಗುರು ಎಂದು ಸಾಬೀತುಪಡಿಸುವ 16ನೇ ಶತಮಾನ ಹಸ್ತಪ್ರತಿ ದೊರೆತಿದೆ. ಆ ಪ್ರಕಾರ ಶಿವದಾಸಿಮಯ್ಯ ಬಸವಪೂರ್ವ ಅಂದರೆ 11ನೇ ಶತಮಾನದವರು. ವೇದಗಳಲ್ಲೂ ಚಿಂಪಿಗರು… ಎನ್ನುವ ಉಲ್ಲೇಖ ಇದೆ. ಇದು ನಮ್ಮ ಸಮಾಜಕ್ಕೆ ಹೆಮ್ಮೆಯ ವಿಚಾರ. ಈ ಎಲ್ಲ ವಿಚಾರಗಳ ಆಧಾರವಾಗಿಟ್ಟುಕೊಂಡು ಶಿವದಾಸಿಮಯ್ಯನವರ ಕುರಿತಾಗಿ ಹೊಸ ಚರಿತ್ರೆಯ ಕಟ್ಟಬೇಕಾಗಿದೆ ಎಂದರು.

ನಾಗರಿಕತೆಯ ಹುಟ್ಟಿನೊಂದಿಗೆ ಕಂಡು ಬರುವ ಶಿವಸಿಂಪಿ ಸಮಾಜದ ಕುಲಗುರು ಶಿವದಾಸಿಮಯ್ಯನವರ ಜಯಂತಿ ಸರ್ಕಾರ ಮಾಡಬೇಕು ಎಂದು ಭಿಕ್ಷೆ ಬೇಡುವ ಅಗತ್ಯ ಇಲ್ಲ. ಸರ್ಕಾರವೇ ಮುಂದಾಗಿ ಶಿವದಾಸಿಮಯ್ಯನವರ ಜಯಂತಿ ಉತ್ಸವವನ್ನು ರಾಷ್ಟ್ರೀಯ ಉತ್ಸವವನ್ನಾಗಿ ಮಾಡಬೇಕು. ಶಿವಸಿಂಪಿ ಸಮಾಜವನ್ನು ಪ್ರವರ್ಗ2 ಎ ಅಡಿ ಸೇರಿಸುವ ಮೂಲಕ ಸರ್ಕಾರ ಅನುಕೂಲ ಮಾಡಿಕೊಡಬೇಕು ಎಂದು ಆಶಿಸಿದರು. 

ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ, ಶಿವಸಿಂಪಿ ಸಮಾಜದ ಜಿಲ್ಲಾ ಅಧ್ಯಕ್ಷ ಗುರುಬಸಪ್ಪ ಬೂಸ್ನೂರ್‌ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ಮಲ್ಲಿಕಾರ್ಜುನ್‌ ಪ್ರಸ್ತಾವಿಕ ಮಾತುಗಳಾಡಿದರು. ಶಾಸಕ ಎಸ್‌.ಎ. ರವೀಂದ್ರನಾಥ್‌, ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಯುವ ಮುಖಂಡ ಎಚ್‌.ಎಸ್‌. ನಾಗರಾಜ್‌, ಚಿಂದೋಡಿ ಚಂದ್ರಧರ್‌, ಜಗದೀಶ್‌ ಬಾವಿಕಟ್ಟಿ, ಎಸ್‌. ಷಣ್ಮುಖಪ್ಪ, ವಸಂತ್‌ಕುಮಾರ್‌, ಪಿ.ಎಸ್‌. ಲಕ್ಕುಂಡಿ, ಇ.ಸಿ.ಎಸ್‌. ಮೂರ್ತಿ, ಎಸ್‌.ಡಿ. ಕೊಟ್ರೇಶ್‌, ಮೂರಲ್‌ ರಾಜು, ಲೋಕೇಶ್‌, ಉಮಾಪತಿ ಇತರರು ಇದ್ದರು. ಸುಜಾತ
ಬೂಸ್ನೂರ್‌ ಪ್ರಾರ್ಥಿಸಿದರು. ಜ್ಞಾನೇಶ್ವರ್‌ ಜವಳಿ ನಿರೂಪಿಸಿದರು. ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ನಡೆಯಿತು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.