ಚಿತ್ರಕಲೆಯಿಂದ ಸಾಮಾಜಿಕ ಜಾಗೃತಿ ಸಾಧ್ಯ


Team Udayavani, Mar 14, 2019, 10:26 AM IST

1.jpg

ದಾವಣಗೆರೆ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುವ, ಒಂದು ಚಿತ್ರದಲ್ಲೇ ಹತ್ತಾರು ಆಲೋಚನೆ, ಭಾವನೆಗಳ ಪ್ರತಿಬಿಂಬಿಸುವಂತಹ ಚಿತ್ರಕಲೆ ಶಿಕ್ಷಣ, ಸಾಮಾಜಿಕ ಕ್ಷೇತ್ರದ ವಿಶಿಷ್ಟ ಸಾಧನ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಆಯುಕ್ತರ ಕಚೇರಿಯ ನಿವೃತ್ತ ಸಹ ನಿರ್ದೇಶಕ ಡಿ.ಕೆ. ಶಿವಕುಮಾರ್‌ ಬಣ್ಣಿಸಿದ್ದಾರೆ.

ಬುಧವಾರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್‌)ನಲ್ಲಿ 2018-19ನೇ ಸಾಲಿನ ಜಿಲ್ಲಾ ಚಿತ್ರಕಲಾರತ್ನ ಪ್ರಶಸ್ತಿ ಪ್ರದಾನ ಮತ್ತು ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚಿತ್ರ ಕಲಾವಿದನ ಪರಿಕಲ್ಪನೆ, ಅಭಿಪ್ರಾಯದಲ್ಲಿ ಮೂಡಿ ಬರುವಂತಹ ಚಿತ್ರ ಹತ್ತಾರು ವಿಶ್ಲೇಷಣೆಯ ಪ್ರತೀಕವಾಗಿರುತ್ತದೆ. ಚಿತ್ರಕಲೆಯ ಮೂಲಕ ಎಲ್ಲಾ ವಿಷಯಗಳನ್ನ ಚೆನ್ನಾಗಿ ಕಲಿಸಬಹುದು. ಸಾಮಾಜಿಕವಾಗಿಯೂ ಜಾಗೃತಿ ಮೂಡಿಸಬಹುದು ಎಂದರು.

ಪ್ರಾಚೀನ ಕಾಲದಲ್ಲಿ ಚಿತ್ರಕಲೆಯ ಮೂಲಕ ಭಾವನೆ, ಆಲೋಚನೆ ಹಂಚಿಕೊಳ್ಳುವ ಪದ್ಧತಿ ಕಾಲಾನುಕ್ರಮೇಣ ವಿಶಿಷ್ಟ ಸಾಧನವಾಗಿ ರೂಪುಗೊಂಡಿದೆ. ಶಾಲಾ ಹಂತದಿಂದಲೇ ಮಕ್ಕಳಲ್ಲಿನ ಚಿತ್ರ ಕಲಾ ಪ್ರತಿಭೆ ಹೆಕ್ಕಿ ಹೊರತೆಗೆಯುವ ಕೆಲಸ ಮಾಡಲಾಗುತ್ತಿದೆ. ಚಿತ್ರಕಲೆ ಪಠ್ಯದ ವಿಷಯವಾಗಿದ್ದರೂ ಪರೀಕ್ಷಾ ವಿಷಯ ಅಲ್ಲ ಎಂಬ ಭಾವನೆ ಕೆಲವು ಚಿತ್ರಕಲಾ ಶಿಕ್ಷಕರಲ್ಲಿ ಕಂಡು ಬರುತ್ತದೆ. ವಾಸ್ತವವಾಗಿ ಚಿತ್ರಕಲೆ ಎಲ್ಲಾ ವಿಷಯಗಳ ಆಲ್‌ರೌಂಡರ್‌, ಆರು ವಿಷಯಗಳ ಲೀಡರ್‌ ಎಂದು ತಿಳಿಸಿದರು.

ಕನ್ನಡ, ಇಂಗ್ಲಿಷ್‌ ಭಾಷಾ ವಿಷಯಗಳ ಜೊತೆಗೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನದಂತಹ ಕೋರ್‌ ವಿಷಯಗಳನ್ನು
ಚಿತ್ರಕಲೆ ಒಳಗೊಂಡಿದೆ. ಸುಂದರವಾಗಿ ಭಾಷೆ, ಚಿತ್ರ ಬರೆಯುವುದಕ್ಕೆ ಇಂತಿಷ್ಟು ಅಂಕ ನೀಡಲಾಗುತ್ತದೆ. ಹಾಗಾಗಿ ಚಿತ್ರಕಲೆ ಶಿಕ್ಷಕರು ತಮಗೆ ಸೀಮಿತವಾದಂತ ತರಗತಿಯನ್ನ ಸದುಪಯೋಗಪಡಿಸಿಕೊಳ್ಳಬೇಕು. ಮಕ್ಕಳಿಗೆ ಚಿತ್ರಕಲೆಯ ಜೊತೆಗೆ ಇತರೆ ವಿಷಯಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ದಾವಣಗೆರೆ ಚಿತ್ರಕಲಾ ಶಿಕ್ಷಕರ ಸಂಘ 2012 ರಿಂದಲೂ ತುಂಬಾ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ತಾವು ಗಮನಿಸಿರುವಂತೆ ಹೊಸತನ ಕಂಡು ಬರುತ್ತಿದೆ. ಚುನಾವಣಾ, ರಾಷ್ಟ್ರೀಯ ಹಬ್ಬಗಳು, ಇತರೆ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರು ಉತ್ತಮ ಕೆಲಸದ ಮೂಲಕ ಒಳ್ಳೆಯ ಹೆಸರು ಗಳಿಸಬೇಕು ಎಂದು ಆಶಿಸಿದರು. 

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಆಯುಕ್ತರ ಕಚೇರಿಯ ನಿವೃತ್ತ ನಿರ್ದೇಶಕ ಎನ್‌.ಎಸ್‌. ಕುಮಾರ್‌ ಮಾತನಾಡಿ, ಮಕ್ಕಳ ಶೈಕ್ಷಣಿಕ ಕಲಿಕೆಗೆ ಪೂರಕವಾಗಿರುವ ಚಿತ್ರಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಬೇಕು. ಚಿತ್ರಕಲಾ ಶಿಕ್ಷಕರು ಶಿಕ್ಷಣ, ಸಾಮಾಜಿಕ ಕಾರ್ಯ ಚಟುವಟಿಕೆ, ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಅತ್ಯುತ್ತಮ ಕಾಣಿಕೆ ನೀಡುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ಸಂತೋಷದ ವಿಚಾರ ಎಂದರು.

ರವಿ ಕಾಣದ್ದನ್ನ ಕವಿ ಕಂಡ.. ಕವಿ ಕಾಣದ್ದನ್ನ ಚಿತ್ರಕಲಾವಿದ ಕಂಡ… ಎನ್ನುವಂತೆ ತಮ್ಮ ಕಲ್ಪನೆಯಲ್ಲಿ ಬರೆದಂತಹ
ಚಿತ್ರಗಳು ವಿದ್ಯಾರ್ಥಿಗಳು, ಸಾರ್ವಜನಿಕರ ಸ್ಮೃತಿಪಟಲದಲ್ಲಿ ಶಾಶ್ವತವಾಗಿರುತ್ತವೆ. ಚಿತ್ರಕಲಾ ಶಿಕ್ಷಕರು ಬೇರೆ ಕಡೆ ವರ್ಗಾವಣೆ, ನಿವೃತ್ತಿಯಾದರೂ ಅವರು ಮಾಡಿದಂತಹ ಕೆಲಸ ಸದಾ ನೆನಪಿನಲ್ಲಿ ಉಳಿಯುತ್ತವೆ. ನಾವು ಮಾಡಿದಂತಹ ಕೆಲಸಗಳು ಮಾತನಾಡಬೇಕು.

ಚಿತ್ರಕಲಾ ಶಿಕ್ಷಕರು ದೊರೆತಂತಹ ಅವಕಾಶವನ್ನ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು. ಸಕರಾತ್ಮಕ ಚಿಂತನೆಯ ಚಿತ್ರಗಳ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೂ ಕಾರಣೀಭೂತರಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್‌) ಪ್ರಾಚಾರ್ಯ ಎಚ್‌.ಕೆ. ಲಿಂಗರಾಜ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗಭೂಷಣ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್‌.ವಿಜಯ್‌ ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಸಿ. ಸಿದ್ದಪ್ಪ, ಜಿ. ಕೊಟ್ರೇಶ್‌, ಸೋಮಣ್ಣ ಚಿತ್ರಗಾರ್‌, ಉಮೇಶ್‌ಕುಮಾರ್‌ ಇದ್ದರು.

ಐಗೂರು ಗ್ರಾಮದ ಶ್ರೀ ಬಸವೇಶ್ವರ ವಸತಿಯುತ ಪ್ರೌಢಶಾಲೆಯ ಆರ್‌. ನಾಗಭೂಷಣ್‌, ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದ ಮಾರುತಿ ಪ್ರೌಢಶಾಲೆಯ ಚನ್ನಪ್ಪ ಸೂಗೂರು, ನೀಲಗುಂದ ಟಿಎಂಎಇಎಸ್‌ ಪ್ರೌಢಶಾಲೆಯ ಗದಗ್‌(ಮರಣೋತ್ತರ) ಅವರಿಗೆ 2018-19ನೇ ಸಾಲಿನ ಜಿಲ್ಲಾ ಚಿತ್ರಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. 

2018ರ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಹರಪನಹಳ್ಳಿಯ ಸರ್ಕಾರಿ ಪಿಯು ಕಾಲೇಜಿನ(ಪ್ರೌಢಶಾಲಾ ವಿಭಾಗ) ವಿಜಯ ಗುಳೇದಗುಡ್ಡ, ದಾವಣಗೆರೆಯ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಪ್ರೌಢಶಾಲೆಯ ಶಾಂತಯ್ಯ ಪರಡಿಮಠ್ಠ… ಅವರನ್ನ ಸನ್ಮಾನಿಸಲಾಯಿತು. ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಬಿ.ಅಚ್ಯುತಾನಂದ ಪ್ರಾರ್ಥಿಸಿದರು. ಪಿ. ನಾಗರಾಜ ಭಾನುವಳ್ಳಿ ಸ್ವಾಗತಿಸಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.