ಸಮಾಜವಾದಿ ಭಾರತ ಭಗತ್‌ ಸಿಂಗ್‌ ಕನಸು


Team Udayavani, Mar 24, 2021, 9:10 PM IST

್ಗನಹ್ಗದ್ಸ

ದಾವಣಗೆರೆ: ವಿದ್ಯಾರ್ಥಿ ಹಾಗೂ ಯುವ ಸಮೂಹ ಭಗತ್‌ ಸಿಂಗ್‌ರವರ ತತ್ವಾದರ್ಶವನ್ನು ಅಳವಡಿಸಿಕೊಳ್ಳ ಬೇಕು ಎಂದು ಅಖೀಲ ಭಾರತ ಯುವಜನ ಫೆಡರೇಷನ್‌(ಎಐವೈಎಫ್‌) ರಾಜ್ಯ ಉಪಾಧ್ಯಕ್ಷ ಆವರಗೆರೆ ವಾಸು ಕರೆ ನೀಡಿದರು.

ಮಂಗಳವಾರ ರೈಲ್ವೆ ನಿಲ್ದಾಣ ಮುಂದಿನ ಭಗತ್‌ ಸಿಂಗ್‌ ಪ್ರತಿಮೆ ಬಳಿ ನಡೆದ ಬಲಿದಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕ್ರಾಂತಿಕಾರಿ ಭಗತ್‌ ಸಿಂಗ್‌ ಮತ್ತು ಅವರ ಸಂಗಡಿಗರಾದ ಸುಖದೇವ್‌, ರಾಜಗುರು ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾಗಿ 90 ವರ್ಷ ಕಳೆದಿದೆ. ಅವರೆಲ್ಲರೂ ಇಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.

ಅನೇಕರು ಹುಟ್ಟುತ್ತಾರೆ, ಸಾಯುತ್ತಾರೆ. ಕೆಲವೇ ಕೆಲವರು ಮಾತ್ರ ಸಾವಿನ ನಂತರವೂ ಜೀವಂತವಾಗಿರುತ್ತಾರೆ. ಅಂತಹ ವಿರಳಾತಿ ವಿರಳರ ಸಾಲಿನಲ್ಲಿ, ಭಗತ್‌ ಸಿಂಗ್‌, ರಾಜಗುರು, ಸುಖದೇವ ಮೊದಲಿಗರಾಗಿ ನಿಲ್ಲುತ್ತಾರೆ. ತಲೆಮಾರಿನಿಂದ ತಲೆಮಾರಿಗೆ ಬೆಳಕು ನೀಡುತ್ತಾ, ನಿತ್ಯ ಸ್ಫೂರ್ತಿಯಾಗುತ್ತಾ ನಮ್ಮ ನಡುವೆಯೇ ಇದ್ದಾರೆ ಎಂದು ತಿಳಿಸಿದರು.

ಭಗತ್‌ ಸಿಂಗ್‌ ತಮ್ಮ 24ನೇ ವಯಸ್ಸಿನಲ್ಲೇ ನಗು ನಗುತ್ತಾ ನೇಣುಗಂಬಕ್ಕೇರಿದರು. ಅವರು ಓದಿದ್ದು, ರಚಿಸಿದ ಸಾಹಿತ್ಯ, ಬೌದ್ಧಿಕ ಮಟ್ಟ, ಆಲೋಚನಾ ಕ್ರಮ, ಪ್ರಕಟವಾಗದೇ ಉಳಿದ ಜೈಲಿನ ದಿನಚರಿಗಳನ್ನು ನೋಡಿದರೆ ಅಚ್ಚರಿ ಉಂಟಾಗುತ್ತದೆ. ಭಗತ್‌ ಸಿಂಗ್‌ ಗಲ್ಲಿಗೇರಿದ ಆರೇಳು ದಶಕಗಳ ನಂತರ ಅವರು ಬರೆದ ಲೇಖನಗಳು, ಪತ್ರಗಳು, ದಿನಚರಿಯ ಪುಟಗಳು ಒಂದೊಂದಾಗಿ ಹೊರ ಬರುತ್ತಿವೆ. ಭಗತ್‌ ಸಿಂಗ್‌ ಕನಸು ಕೇವಲ ಸ್ವತಂತ್ರ ಭಾರತ ಮಾತ್ರವಲ್ಲ, ಸಮಾಜವಾದಿ ಭಾರತವನ್ನು ನಿರ್ಮಾಣ ಮಾಡಬೇಕು ಎಂದು ಹಂಬಲಿಸಿದ್ದರು ಎಂದು ಸ್ಮರಿಸಿದರು.

ಭಗತ್‌ ಸಿಂಗ್‌ ಕೋಮುವಾದ ಮತ್ತು ಜಾತಿವಾದಗಳನ್ನು ಕಟುವಾಗಿ ವಿರೋ ಧಿಸುತ್ತಿದ್ದರು. ಗಲ್ಲಿಗೇರಿದ ದಿನ ಅವರನ್ನು ಭೇಟಿಯಾಗಲು ಬಂದ ಜೈಲರ್‌ ಗಮನಕ್ಕೆ ಭಗತ್‌ ಸಿಂಗ್‌ ಲೆನಿನ್‌ ಪುಸ್ತಕ ಓದುತ್ತಿರುವುದು ಕಂಡು ಬಂತು. ಗಲ್ಲಿಗೇರಿಸುವ ಸಮಯವಾಯಿತು ಎಂದು ಹೇಳಿದಾಗ ಕೊಂಚ ತಡೆಯಿರಿ, ಒಬ್ಬ ಕ್ರಾಂತಿಕಾರಿ ಇನ್ನೊಬ್ಬ ಕ್ರಾಂತಿಕಾರಿಯನ್ನು ಭೇಟಿಯಾಗುತ್ತಿದ್ದಾನೆ ಎಂದು ಲೆನಿನ್‌ ಪುಸ್ತಕ ಕೈಯಲ್ಲಿ ಹಿಡಿದುಕೊಂಡು ನೇಣುಗಂಬದತ್ತ ಸಾಗಿದಂತಹ ಮಹಾನ್‌ ಕ್ರಾಂತಿಕಾರಿ ಭಗತ್‌ ಎಂದು ಬಣ್ಣಿಸಿದರು. ಜಿಲ್ಲಾಧ್ಯಕ್ಷ ಕೆರನಹಳ್ಳಿ ರಾಜು, ಎ. ತಿಪ್ಪೇಶಿ, ಜೀವನ ನಿಟುವಳ್ಳಿ , ಫಜಲುಲ್ಲಾ, ಗದಿಗೇಶ್‌ ಪಾಳೇದ್‌, ಇರ್ಫಾನ್‌, ಎಚ್‌.ಎಂ. ಮಂಜುನಾಥ್‌ ಇದ್ದರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.