ಶೀಘ್ರದಲ್ಲೇ ಕಾಯಕ ದಾಸೋಹ ಮಂಟಪದ ಕೆಲಸ ಆರಂಭ


Team Udayavani, Oct 6, 2018, 5:55 PM IST

dvg-1.jpg

ದಾವಣಗೆರೆ: ಮಠ ಮತ್ತು ಪೀಠ ಎನ್ನುವ ನಾಮಾಂಕಿತಗಳು ಕೆಲವೇ ವರ್ಗಕ್ಕೆ ಸೀಮಿತವಾಗುವ ಕಾರಣ ಎಲ್ಲಾ ಜಾತಿ,
ಧರ್ಮ, ವರ್ಗದವರನ್ನೂ ಸೇರಿಸುವ ಸಲುವಾಗಿ ದಾವಣಗೆರೆಯಲ್ಲಿ ಕಾಯಕ ದಾಸೋಹ ಮಂಟಪ ಅರಂಭಿಸಲಾಗುತ್ತಿದೆ ಎಂದು ಕೂಡಲ ಸಂಗಮದ ಲಿಂಗಾಯುತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಶುಕ್ರವಾರ, ನಗರದ ಹೊರ ವಲಯದಲ್ಲಿನ ಬಾಡಾ ಕ್ರಾಸ್‌ ಬಳಿ ಆಯೋಜಿಸಲಾಗಿದ್ದ 135ನೇ ಬಸವ ಸಂಗಮ ಹಾಗೂ ಮಡಿವಾಳ ಮಾಚಿದೇವ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಅಂತರಂಗ ಮತ್ತು ಬಹಿರಂಗ ಎರಡನ್ನೂ ಶುದ್ಧಿ ಮಾಡುವುದು ಅನುಭವ ಮಂಟಪ. ಈ ಕಾಯಕ ಮಂಟಪ ಯಾವುದೇ ಜಾತಿಗೆ ಸೀಮಿತ ಆಗಬಾರದು, ಮಾತ್ರವಲ್ಲ
ಎಲ್ಲಾ ವರ್ಗಕ್ಕೂ ಸೇರಬೇಕು. ಎಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸುವ ನಿಟ್ಟಿನಲ್ಲಿ ಶೀಘ್ರವೇ ಸಮಿತಿ ರಚಿಸಿ, ಇದೇ ಸ್ಥಳದಲ್ಲಿ ಕಟ್ಟಡ ಕೆಲಸ ಆರಂಭಿಸಲಾಗುವುದು ಎಂದರು. 

12ನೇ ಶತಮಾನದಲ್ಲಿ ಎಲ್ಲಾ ಶರಣರಿಗಿಂತಲೂ ನಿಷ್ಠುರ ಹಾಗೂ ಕ್ರಾಂತಿಕಾರಿಯಾಗಿ ಕೆಲಸ ಮಾಡಿದಾತ ಮಡಿವಾಳ ಮಾಚಯ್ಯ. ವೀರ ಗಣಾಚಾರಿ ಮಾಚಿದೇವ ಕ್ರಾಂತಿ ಮೂಲಕ ಸಮಾಜ ಸುಧಾರಣೆಗೆ ಮುಂದಾದ ದಿಟ್ಟ ವ್ಯಕ್ತಿ. ಕ್ರಾಂತಿಯ ಮೂಲಕವೇ ಸಮಾಜದಲ್ಲಿನ ಕೆಟ್ಟ ಆಚರಣೆಗಳನ್ನು ಕಿತ್ತೂಗೆದು ಸಮಾನತೆ ಸಂದೇಶ ಸಾರಿ ಕ್ರಾಂತಿಯ ಕಿಡಿಯಾದವರೇ ಮಡಿವಾಳ ಮಾಚಿದೇವ ಎಂದು ಸ್ಮರಿಸಿದರು. 

ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಪಟ್ಟಭದ್ರ ಹಿತಾಸಕ್ತಿಗಳಿಂದ ನಾಶವಾಗಲಿದ್ದ ವಚನ ಸಾಹಿತ್ಯವನ್ನು ರಕ್ಷಿಸಿ, ಇಂದಿಗೂ ನಮಗೆಲ್ಲರಿಗೂ ಸಿಗುವಂತೆ ಮಾಡಿದ್ದು ಮಾಚಿದೇವ. ಇಂದು ಬಸವಣ್ಣ ಸೇರಿದಂತೆ 12ನೇ ಶತಮಾನದ ಶರಣರ ಬಗ್ಗೆ ನಾವು ತಿಳಿದುಕೊಳ್ಳುತ್ತಿದ್ದೇವೆ ಎಂದರೆ ಅದಕ್ಕೆಲ್ಲಾ ಮಾಚಿದೇವರು ಮಾಡಿದ ಹೋರಾಟದ ಫಲವೇ ಕಾರಣ ಎಂದು ಹೇಳಿದರು.

ದೇಶದ 16 ರಾಜ್ಯಗಳಲ್ಲಿ ಮಡಿವಾಳ ಸಮುದಾಯವು ಪರಿಶಿಷ್ಟ ಜಾತಿ ಪಟ್ಟಿಯಲ್ಲಿದೆ. ಅಂತೆಯೇ ಕರ್ನಾಟಕದಲ್ಲೂ ಪರಿಶಿಷ್ಟ ರ ಪಟ್ಟಿಗೆ ಸೇರಿಸುವಂತೆ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತು ರಾಜಕೀಯವಾಗಿ ಹಿಂದುಳಿದಿರುವ ಮಡಿವಾಳ ಸಮುದಾಯವನ್ನು ಪರಿಶಿಷ್ಟರ ಪಟ್ಟಿಗೆ ಸೇರಿಸುವುದು ಸೂಕ್ತ ಎಂದು ಹೇಳಿದರು.

ಮಹಾನಗರ ಪಾಲಿಕೆ ಸದಸ್ಯ, ಮಡಿವಾಳ ಸಮಾಜದ ಮುಖಂಡ ಎಚ್‌.ಜಿ. ಉಮೇಶ್‌ ಮಾತನಾಡಿ, ಬಸವಣ್ಣ ಸ್ಥಾಪಿಸಿದ ಅನುಭವ ಮಂಟಪದಿಂದ ಪ್ರೇರಿತರಾಗಿ ತನ್ನ ಕಾಯಕದ ಜೊತೆ ವಚನ ಸಾಹಿತ್ಯದಂತಹ ಅದ್ಭುತ ಜ್ಞಾನ
ಭಂಡಾರ ರಕ್ಷಿಸಿದ ಮಹಾನ್‌ ಗಣಾಚಾರಿ ಮಾಚಿದೇವರು ಎಂದು ಹೇಳಿದರು. 

ಬಸವ ಬಳಗದ ವಿ. ಸಿದ್ದರಾಮಣ್ಣ ಶರಣರು ಮಾತನಾಡಿ, ಮಡಿವಾಳ ಎನ್ನುವುದು ಒಂದು ಜಾತಿ ಸೂಚಕವಲ್ಲ, ಅದೊಂದು ಧರ್ಮದ ಜ್ಯೋತಿ. 12ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ಬಿತ್ತಿದ ಬಸವಣ್ಣನೆಂಬ ಬಳ್ಳಿ ಇದೀಗ ವಿಶ್ವಾದ್ಯಂತ ಹರಡಿದೆ. ಡಾ| ಬಿ.ಆರ್‌.ಅಂಬೇಡ್ಕರರು ಭಾರತದ ಸಂವಿಧಾನ ಶಿಲ್ಪಿಯಾದರೆ, ವಚನ ಸಾಹಿತ್ಯ ಬರೆದ ಬಸವಣ್ಣ ವಿಶ್ವಕ್ಕೆ ಸಂವಿಧಾನ ಶಿಲ್ಪಿ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಬಸವ ಬಳಗದ ಅಧ್ಯಕ್ಷ ವೀರಭದ್ರಪ್ಪ ದೇವಿಗೆರೆ, ಶಿವಾನಂದ ಗುರೂಜಿ, ಮಡಿವಾಳ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ. ನಾಗೇಂದ್ರಪ್ಪ ಇತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.