ಧಾರ್ಮಿಕ ಶ್ರದ್ಧಾ ಕೇಂದ್ರಸಂಸ್ಕಾರದ ಮೂಲ: ರಾಮಪ್ಪ
Team Udayavani, Jul 7, 2020, 4:55 PM IST
ಹರಿಹರ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸಂಸ್ಕಾರ ಬೆಳೆಸುವ ಮೂಲವಾಗಿವೆ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು.
ನಗರದ ಬಜಾರ್ ಮೊಹಲ್ಲಾದ ಖದೀಮ್ ಮಸೀದಿಯಲ್ಲಿ ಸೋಮವಾರ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಪ್ರಗತಿಯಲ್ಲಿರುವ 3 ಲಕ್ಷ ರೂ. ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಮಂದಿರ, ಮಸೀದಿ, ಚರ್ಚ್, ಗುರುದ್ವಾರದಂತಹ ಶ್ರದ್ಧಾ ಕೇಂದ್ರಗಳು ಮನುಷ್ಯನಲ್ಲಿ ಮನುಷ್ಯತ್ವ ತುಂಬುತ್ತಿವೆ. ಶಾಲೆ, ಕಾಲೇಜು, ಮನೆಯಲ್ಲಿ ಸಿಗದಂತಹ ಮೌಲ್ಯಗಳನ್ನು ಶ್ರದ್ಧಾ ಕೇಂದ್ರಗಳಲ್ಲಿಕಲಿಸಲಾಗುತ್ತದೆ. ವಿದ್ಯಾವಂತ, ಅವಿದ್ಯಾವಂತ, ಬಡವ, ಬಲ್ಲಿದ, ಮಕ್ಕಳು, ಪುರುಷ, ಮಹಿಳೆ ಎನ್ನದೆ ಎಲ್ಲರಲ್ಲೂ ಸಂಸ್ಕಾರ ಮೂಡಿಸುವಮಹತ್ವದ ಕಾರ್ಯವನ್ನು ಮಾಡುತ್ತಿವೆ. ಈ ಮಸೀದಿಯಲ್ಲಿ ಪ್ರಾರ್ಥನೆಗೆ ಮುನ್ನ ನೆರವೇರಿಸುವ ವಜೂ ಖಾನಾ (ಮುಖ, ಕೈಕಾಲು ತೊಳೆಯುವ ಸ್ಥಳ) ನಿರ್ಮಾಣಕ್ಕಾಗಿ ಆಡಳಿತ ಮಂಡಳಿಯವರು ಬಹು ಹಿಂದೆಯೇ ಬೇಡಿಕೆ ಇಟ್ಟಿದ್ದರು.ಆ ಕಾಮಗಾರಿಗಾಗಿ ನನ್ನ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಕಾಂಗ್ರೆಸ್ ಮುಖಂಡರಾದ ನಜೀರ್ ಹುಸೇನ್, ರೆಹಮಾನ್, ಸ್ವಾಲೇಹ, ಮಸೀದಿ ಸಮಿತಿ ಅಧ್ಯಕ್ಷ ಶೇಖ್ ಜಹೀರುದ್ದೀನ್, ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಪತ್ತಾರಿ, ಇರ್ಷಾದ್ ಅಹ್ಮದ್ ಖಾದ್ರಿ, ಅಬ್ದುಲ್ ಬಾರಿ, ಪಿ. ಜಿಯಾಉಲ್ಲಾ, ಅಬ್ದುಲ್ ರೆಹಮಾನ್ ಪಂಜಾಬಿ, ಕುಲುಮಿ ಬಾಬುಸಾಬ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ