ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ದಯಾನಂದ್‌


Team Udayavani, Jan 7, 2019, 7:43 AM IST

dvg-4.jpg

ದಾವಣಗೆರೆ: ಜೀವನದಲ್ಲಿ ಶಿಸ್ತುಬದ್ಧತೆ ಹಾಗೂ ನಿತ್ಯದ ಕರ್ತವ್ಯದ ಒತ್ತಡದ ನಿವಾರಣೆಗೆ ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಪೂರ್ವವಲಯ ಪ್ರಭಾರ ಪೊಲೀಸ್‌ ಮಹಾ ನಿರೀಕ್ಷಕ ಬಿ. ದಯಾನಂದ್‌ ಹೇಳಿದರು.

ಪೊಲೀಸ್‌ ಕವಾಯತು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪದಲ್ಲಿ ಮಾತನಾಡಿದ ಅವರು, ಪೊಲೀಸ್‌ ಸಿಬ್ಬಂದಿ ಕೇವಲ ದೇಹದಾಡ್ಯತೆ ಹೊಂದಿದರೆ ಸಾಲದು. ನಿತ್ಯ ಕರ್ತವ್ಯದ ಅವಧಿಯಲ್ಲಿ ಎದುರಾಗುವ ಒತ್ತಡಗಳನ್ನು ನಿರ್ವಹಿಸಲು ಮಾನಸಿಕ ಸ್ಥೈರ್ಯವನ್ನು ಹೊಂದಿರಬೇಕಾಗುತ್ತದೆ. ಅದಕ್ಕೆ ಕ್ರೀಡಾಕೂಟ ಸಹಕಾರಿಯಾಗುತ್ತವೆ ಎಂದರು.

ಪೊಲೀಸ್‌ ಇಲಾಖೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಒಂದು ರೀತಿಯಲ್ಲಿ ಸಂಪ್ರದಾಯಬದ್ಧವಾಗಿದ್ದು, ಈ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ನಡೆಸುತ್ತಿರುವ ಬಗ್ಗೆ ಮೆಚ್ಚುಗೆ ಇದೆ. ಜಿಲ್ಲಾ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಾದ ಪೊಲೀಸ್‌ ತಂಡದವರು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲೂ ಭಾಗವಹಿಸಲು ಅವಕಾಶವಿರುತ್ತದೆ. ಹಾಗಾಗಿ ಇನ್ನು ಕೆಲವೆ ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲೂ ಪ್ರತಿಭಾನ್ವಿತ ಪೊಲೀಸ್‌ ಕ್ರೀಡಾಪಟುಗಳು ಭಾಗವಹಿಸಿ ಹೆಚ್ಚಿನ ಪದಕಗಳನ್ನು ಪಡೆದು ಜಿಲ್ಲಾ ಪೊಲೀಸ್‌ ಇಲಾಖೆಗೆ ಕೀರ್ತಿ ತರಬೇಕು ಎಂದು ಹಾರೈಸಿದರು. 

ಇತರ ಜಿಲ್ಲೆಗಳಲ್ಲಿ ಈಗಾಗಲೇ ನಿವೃತ್ತ ಪೊಲೀಸ್‌ ಅಧಿಕಾರಿಗಳಿಗೆ ಕ್ರೀಡಾಕೂಟ ನಡೆಸಲಾಗುತ್ತದೆ. ಅದೇ ರೀತಿ ಜಿಲ್ಲೆಯಲ್ಲೂ ಸಾಕಷ್ಟು ನಿವೃತ್ತ ಪೊಲೀಸ್‌ ಅಧಿಕಾರಿಗಳಿದ್ದು, ಅವರಿಗೂ ಕೂಡ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಕ್ರೀಡಾಕೂಟ ಏರ್ಪಡಿಸಿ ಬಹುಮಾನ ವಿತರಣೆ ಮಾಡುವ ಪ್ರಯತ್ನವನ್ನು ಮುಂದಿನ ವರ್ಷಗಳಲ್ಲಿ ಮಾಡಬೇಕು ಎಂದು ಸಲಹೆ ನೀಡಿದರು.

ವಾರ್ಷಿಕ ಪೊಲೀಸ್‌ ಕ್ರೀಡಾಕೂಟವು ಇಲಾಖೆಯಲ್ಲಿಯೇ ಇರುವ ಪ್ರತಿಭಾನ್ವಿತರನ್ನು ಗುರುತಿಸಲು ಸಿದ್ಧ ವೇದಿಕೆಯಾಗಿದೆ. ಇಂತಹ ಕ್ರೀಡಾಕೂಟದಲ್ಲಿ ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರಲ್ಲದೇ, ಕ್ರೀಡಾಕೂಟದಲ್ಲಿ ತಂಡಗಳು ಉತ್ತಮವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದು, ಈ ಶಿಸ್ತು ತಮ್ಮ ನಿತ್ಯದ ಕರ್ತವ್ಯದಲ್ಲೂ ದಕ್ಷವಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌, ಶಶಿಕಲಾ ದಯಾನಂದ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಜೆ. ಉದೇಶ್‌, ಡಿವೈಎಸ್‌ಪಿ ಎಂ.ಕೆ. ಗಂಗಲ್‌, ಗೋಪಾಲಕೃಷ್ಣಗೌಡ್ರು, ಬಾಲಚಂದ್ರನ್‌, ಗಜೇಂದ್ರಪ್ಪ, ಟಿ.ವಿ. ದೇವರಾಜ್‌, ಸಿಇಎನ್‌ ಕ್ರೈಂ ವಿಭಾಗದ ದೇವರಾಜ್‌, ಸಿಪಿಐ ಉಮೇಶ್‌, ಬ್ರಿಜೇಶ್‌ ಮ್ಯಾಥ್ಯೂ, ಆರ್‌.ಆರ್‌. ಪಾಟೀಲ್‌, ಇ. ಆನಂದ್‌ ಸೇರಿದಂತೆ ನಿವೃತ್ತ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.  ಕ್ರೀಡಾಕೂಟದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಮಗ್ರ ಪಶಸ್ತಿ ಮುಡಿಗೇರಿಸಿಕೊಂಡಿತು.  

ವಿಜೇತರು: ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್‌) ತಂಡ (ಸಮಗ್ರ ಪ್ರಶಸ್ತಿ), ಗ್ರಾಮಾಂತರ ಉಪವಿಭಾಗದ ಹೊನ್ನಾಳಿ ಪೊಲೀಸ್‌ ತಂಡ (ಬೆಸ್ಟ್‌ ಡಿಟೆಕ್ಟಿವ್‌ ಪೊಲೀಸ್‌ ಠಾಣೆ ಪ್ರಶಸ್ತಿ), ಸಿಪಿಸಿ ನಗರ ಉಪವಿಭಾಗದ ಮಹಾಂತೇಶ್‌ ಬಿದರಿ ಹಾಗೂ ಡಿಎಆರ್‌ ಸಿಪಿಸಿ ವಿಭಾಗದ ಎ.ಪಿ. ಜಯಣ್ಣ (ಪ್ರಸಕ್ತ ಸಾಲಿನ ಪುರಷರ ವಿಭಾಗದ ಜಂಟಿ ಚಾಂಪಿಯನ್‌), ಮಹಿಳಾ ಕಬಡ್ಡಿ: ತೇಜಾವತಿ ಪಿಐ ನಿಸ್ತಂತು ತಂಡ (ವಿನ್ನರ್‌), ಬಸವನಗರ ಠಾಣೆ ಪಿಎಸ್‌ಐ ತಂಡ (ರನ್ನರ್‌), ಪುರಷರ ಕಬಡ್ಡಿ: ಹರಪನಹಳ್ಳಿ ಉಪವಿಭಾಗ (ವಿನ್ನರ್‌), ದಾವಣಗೆರೆ ನಗರ ಉಪ ವಿಭಾಗ (ರನ್ನರ್‌), ವಾಲೀಬಾಲ್‌: ಡಿಎಆರ್‌ (ವಿನ್ನರ್‌), ನಗರ ಉಪವಿಭಾಗ (ರನ್ನರ್‌). ಹಗ್ಗ ಜಗ್ಗಾಟ: ಡಿಎಆರ್‌ (ವಿನ್ನರ್‌), ಹರಪನಹಳ್ಳಿ ಉಪ ವಿಭಾಗ (ರನ್ನರ್‌), ಕ್ರಿಕೆಟ್‌: ಡಿಎಆರ್‌ (ವಿನ್ನರ್‌), ಜಿಲ್ಲಾ ಪೊಲೀಸ್‌ ಕಚೇರಿ (ರನ್ನರ್‌), 400 ಮೀ ರಿಲೇ: ಡಿಎಆರ್‌ (ವಿನ್ನರ್‌), ದಾವಣಗೆರೆ ಗ್ರಾಮಾಂತರ (ರನ್ನರ್‌), ಪೊಲೀಸ್‌ ಅಧಿಕಾರಿಗಳ ವಾಲಿಬಾಲ್‌: ಹೆಚ್ಚುವರಿ
ಎಸ್ಪಿ ಟಿ.ಜೆ. ಉದೇಶ್‌ ತಂಡ (ವಿನ್ನರ್‌), ಎಸ್ಪಿ ಆರ್‌. ಚೇತನ್‌ ತಂಡ (ರನ್ನರ್‌).

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.