ಸ್ಮಾರ್ಟ್‌ಸಿಟಿಯಲ್ಲೀಗ ರಾರಾಜಿಸುತ್ತಿವೆ ಸ್ಟನ್‌ಪೋಲ್ಸ್‌


Team Udayavani, Nov 16, 2018, 5:09 PM IST

dvg-2.jpg

ದಾವಣಗೆರೆ: ಸ್ಮಾರ್ಟ್‌ಸಿಟಿ ದಾವಣಗೆರೆಗೆ ನಿರಂತರ ವಿದ್ಯುತ್‌ ಪೂರೈಸಲು ಬೆಸ್ಕಾಂ ಕಾರ್ಯೋನ್ಮುಖವಾಗಿದ್ದು, ಇದೀಗ
ಭೂಗತ ಕೇಬಲ್‌ ಜತೆಗೆ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಅಳವಡಿಸಲು ಸ್ಟನ್‌ಪೋಲ್ಸ್‌ ಬಳಸಲಾಗುತ್ತಿದ್ದು, ಬೃಹತ್‌ ಪೋಲ್‌ಗ‌ಳು ಈಗ ರಸ್ತೆಪಕ್ಕದಲ್ಲಿ ರಾರಾಜಿಸುತ್ತಿವೆ.

ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ದಾವಣಗೆರೆಯಲ್ಲಿ ಈಗ ಹೈಟೆಕ್‌ ಮಾದರಿ ಕಟ್ಟಡಗಳು, ಶಾಪಿಂಗ್‌ ಮಾಲ್‌ಗ‌ಳು ತಲೆ ಎತ್ತುತ್ತಿವೆ. ಬೆಳೆಯುತ್ತಿರುವ ನಗರಕ್ಕೆ ನಿರಂತರ ವಿದ್ಯುತ್‌ ಸರಬರಾಜು ನಿಟ್ಟಿನಲ್ಲಿ ಬೆಸ್ಕಾಂ ಮುಂದಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಇಂಟಿಗ್ರೇಟೆಡ್‌ ಪವರ್‌ ಡೆವಲಪ್‌ಮೆಂಟ್‌ ಸ್ಕೀಮ್‌ನಡಿ ಒಟ್ಟು 95 ಕೋಟಿ ರೂ. ವೆಚ್ಚದಲ್ಲಿ ದಾವಣಗೆರೆ ನಗರದಲ್ಲಿ ಯುಜಿ ಕೇಬಲ್‌ ಅಳವಡಿಸಲಾಗುತ್ತಿದೆ. ಹಳೇ ಪಿ.ಬಿ ರಸ್ತೆ, ಹದಡಿ ರಸ್ತೆ, ಡೆಂಟಲ್‌ ಕಾಲೇಜ್‌ ರಸ್ತೆ, ಶಾಮನೂರು ರಸ್ತೆ, ಬಾಪೂಜಿ ಆಸ್ಪತ್ರೆ, ಪಿ.ಜೆ. ಬಡಾವಣೆ ಸೇರಿ ನಗರದ ಹೊಸ ಭಾಗದ ಬಹುತೇಕ ಎಲ್ಲಾ ಕಡೆ ಈ ಸ್ಟನ್‌ಪೋಲ್ಸ್‌ ಅಳವಡಿಕೆ ಕಂಡು ಬರುತ್ತಿದೆ.

ನಗರದಲ್ಲಿ ಸ್ಟನ್‌ಪೋಲ್ಸ್‌ ಅಳವಡಿಕೆ ಗುತ್ತಿಗೆ ಎಲ್‌ ಆ್ಯಂಡ್‌ ಟಿ ಮಲ್ಟಿ ನ್ಯಾಷನಲ್‌ ಕಂಪನಿ ಪಡೆದಿದೆ. ಕಂಪನಿ ಅವಧಿಯೊಳಗೆ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ಕಾರ್ಯ ಭರದಿಂದ ಕೈಗೊಂಡಿದೆ. ಸ್ಟನ್‌ಪೋಲ್‌ ಮಾಮೂಲಿ ಕಂಬಕ್ಕಿಂತ ಭಾರ, ಉದ್ದ ಹಾಗೂ ಎತ್ತರವಿದೆ. ಈ ಕಂಬಗಳಲ್ಲಿ ಯುಜಿ ಕೇಬಲ್‌ಗೆ ಜಿಒಎಸ್‌ನ 3 ಸ್ವಿಚ್‌ಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ನಗರದಲ್ಲಿ ಸುಮಾರು 230ಕ್ಕೂ ಹೆಚ್ಚು ಸ್ಟನ್‌ ಪೋಲ್ಸ್‌ ಅಳವಡಿಸಿದ್ದು, ಶೇ. 80 ರಷ್ಟು ಕೆಲಸ ಆಗಿದೆ. ಬಾಕಿ ಇರುವ ಕಾಮಗಾರಿ ಐದಾರು ತಿಂಗಳಲ್ಲಿ ಮುಗಿಯಲಿದ್ದು, ಮುಂಬರುವ ಮಾರ್ಚ್‌ ವೇಳೆಗೆ ದಾವಣಗೆರೆ ವಿದ್ಯುತ್‌ ತಂತಿಮುಕ್ತ ನಗರ ಆಗಲಿದೆ. ಈ ಮೊದಲು ಟ್ರಾನ್ಸ್‌
ಫಾರ್ಮರ್‌ ಅಳವಡಿಸಲು ಸಾಮಾನ್ಯ ಕಂಬಗಳನ್ನು ಬಳಸಲಾಗುತ್ತಿತ್ತು. ಈಗ ಭಾರದ ಸ್ಟನ್‌ಪೋಲ್‌ ತರಿಸಲಾಗಿದೆ.

ಮಾಮೂಲಿ ಕಂಬದ ಬೆಲೆ ನಾಲ್ಕರಿಂದ ಐದು ಸಾವಿರ ರೂ. ಗಳಾದರೆ, ಸ್ಟನ್‌ಪೋಲ್‌ ಒಂದರ ಬೆಲೆ 16 ರಿಂದ 17 ಸಾವಿರ
ರೂ. ಇದೆ. ಶಾರ್ಟ್‌ಸರ್ಕಿಟ್‌ನಿಂದ ಕೆಲವು ಸಂದರ್ಭದಲ್ಲಿ ಟ್ರಾನ್ಸ್‌ಫಾರ್ಮರ್‌ ಇಲ್ಲವೇ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡು
ಅಪಾರ ಹಾನಿಯಾದ ಆದ ಉದಾಹರಣೆಗಳು ಸಾಕಷ್ಟಿವೆ. ಸ್ಟನ್‌ಪೋಲ್‌ ಬಳಕೆಯಿಂದ ಇಂತಹ ಅವಘಡ ತಪ್ಪಲಿದೆ ಎನ್ನುತ್ತಾರೆ ಬೆಸ್ಕಾಂ ಅಧಿಕಾರಿಗಳು. ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ರಭಸದ ಗಾಳಿ, ಮಳೆಗೆ ಸಾಧಾರಣ ವಿದ್ಯುತ್‌ ಕಂಬಗಳು ವಾಲುವುದು, ಮುರಿದು ಬೀಳುತ್ತಿದ್ದವು. ಆಗ ವಿದ್ಯುತ್‌ ಸಂಪರ್ಕ ಕಡಿತಗೊಳ್ಳುವುದು ಸರ್ವೆ ಸಾಮಾನ್ಯವಾಗಿತ್ತು. ಇದೀಗ ಭೂಗತ ವಿದ್ಯುತ್‌ ಕೇಬಲ್‌ ಅಳವಡಿಕೆಯಿಂದ ಈ ಹಿಂದಿದ್ದ ಕಂಬಗಳನ್ನು ಸಂಪೂರ್ಣ ತಗೆಯುವ ಉದ್ದೇಶವಿದೆ.

ತಪ್ಪಲಿದೆ ವಿದ್ಯುತ್‌ ಸಮಸ್ಯೆ ಸ್ಮಾರ್ಟ್‌ಸಿಟಿಗೆ ತಕ್ಕಂತೆ ನಗರದ 6 ಕಡೆ 11 ಕೆ.ವಿ. ಯು.ಜಿ. ಕೇಬಲ್‌ ಲೈನ್‌ ಅಳವಡಿಸಲಾಗಿದೆ. ಜತೆಗೆ 50 ಕೆ.ವಿ. ಸಾಮರ್ಥ್ಯದ 260 ಹೊಸ ಟ್ರಾನ್ಸಫಾರ್ಮರ್‌ಗಳನ್ನು ಹೆಚ್ಚುವರಿಯಾಗಿ ಅಳವಡಿಸಿದ್ದೇವೆ. ದಾವಣಗೆರೆಯಲ್ಲಿ ಇನ್ನೂ 30 ವರ್ಷ ಎಷ್ಟೇ ಫ್ಯಾಕ್ಟರಿ, ಮನೆ, ಶಾಪಿಂಗ್‌ ಮಾಲ್‌ಗ‌ಳು, ಅಪಾರ್ಟ್‌ಮೆಂಟ್‌ಗಳು ತಲೆ ಎತ್ತಿದರೂ ಕೂಡ ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ತೊಂದರೆ ಆಗಲ್ಲ. ನಿರಂತರ ವಿದ್ಯುತ್‌ ಸರಬರಾಜಿಗೆ ವ್ಯವಸ್ಥೆ ಮಾಡಲಾಗಿದೆ.
 ಎ.ಕೆ. ತಿಪ್ಪೇಸ್ವಾಮಿ, ಬೆಸ್ಕಾಂ ನಗರ ಉಪವಿಭಾಗದ 1ರ ಎಇಇ.

ವಿಜಯ ಕೆಂಗಲಹಳ್ಳಿ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.