ವಿವಿಧ ಕಾಮಗಾರಿಗೆ ಚಾಲನೆ
Team Udayavani, Jan 3, 2020, 11:26 AM IST
ಹೊನ್ನಾಳಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಹೊನ್ನಾಳಿ ನ್ಯಾಮತಿ ತಾಲೂಕುಗಳ ಅಭಿವೃದ್ಧಿಗೆ ಕ್ಷೇತ್ರದ ಶಾಸಕರ ಜತೆಗೂಡಿ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಸಂಸದ ಜಿ.ಎಂ ಸಿದ್ದೇಶ್ವರ ಭರವಸೆ ನೀಡಿದರು.
ನ್ಯಾಮತಿ ತಾಲೂಕು ಸುರಹೊನ್ನೆ, ಕುದುರೆಕೊಂಡ, ಯರಗನಾಳು, ಮಲ್ಲಿಗೇನಹಳ್ಳಿ, ಬೆಳಗುತ್ತಿ ಗ್ರಾಮಗಳಲ್ಲಿ ವಿವಿಧ ಯೋಜನೆಯಡಿ ಮಂಜೂರು ಮಾಡಿಸಿದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಅವರು ಬೆಳಗುತ್ತಿ ಗ್ರಾಮದಲ್ಲಿ ಮಾತನಾಡಿದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳ ಸುರಹೊನ್ನೆಯಿಂದ ಯರಗನಾಳು, ಬೆಳಗುತ್ತಿ, ತೀರ್ಥರಾಮೇಶ್ವರ ಮುಖ್ಯ ರಸ್ತೆಯನ್ನು ರೂ.7.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ಆಧುನಿಕ ರಸ್ತೆಯನ್ನಾಗಿ ಮಾರ್ಪಡಿಸಲು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.
ಬೆಳಗುತ್ತಿಯಿಂದ ಹರಳಹಳ್ಳಿ ರಸ್ತೆಯನ್ನು ರೂ.90 ಲಕ್ಷ ವೆಚ್ಚದಲ್ಲಿ ಮರು ಡಾಂಬರೀಕರಣ ಗೊಳಿಸಲಾಗುತ್ತಿದ್ದು, ಕಂಚಿನಹಳ್ಳಿಯಿಂದ ಗಂಜೀನಹಳ್ಳಿ ಮುಖ್ಯ ರಸ್ತೆಯನ್ನು 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಸುರಹೊನ್ನೆ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ರೂ.1.16ಕೋಟಿ, ಯರಗನಳ್ ಗ್ರಾಮಕ್ಕೆ ರೂ.76 ಲಕ್ಷ, ಕುದುರೆಕೊಂಡ ರೂ.53ಲಕ್ಷ, ರಾಮೇಶ್ವರ ರೂ.55ಲಕ್ಷ, ಬೆಳಗುತ್ತಿ ರೂ.98ಲಕ್ಷ, ಮಲ್ಲಿಗೇನಹಳ್ಳಿ ರೂ.79ಲಕ್ಷ ಮಂಜೂರು ಮಾಡಲಾಗಿದೆ ಎಂದರು. ಬೆಳಗುತ್ತಿ ಗ್ರಾ.ಪಂ ಅಧ್ಯಕ್ಷೆ ರೇಖಾ, ಜಿ.ಪಂ ಸದಸ್ಯರಾದ ಎಂ.ಆರ್. ಮಹೇಶ್, ನ್ಯಾಮತಿ ಜಿ.ಪಂ ಸದಸ್ಯೆ ಉಮಾ ರಮೇಶ್, ತಾ.ಪಂ ಪ್ರಭಾರಿ ಅಧ್ಯಕ್ಷ ಎಸ್.ಪಿ. ರವಿಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?