ರಸ್ತೆ ಕಾಮಗಾರಿಗೆ ಕೊನೆಗೂ ಚಾಲನೆ


Team Udayavani, Oct 7, 2019, 12:38 PM IST

dg-tdy-1

ಮಾಯಕೊಂಡ: ಹೆದ್ನ-ರಾಂಪುರ ರಸ್ತೆ ದುರಸ್ತಿಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಈಗ ಪ್ರತಿಫಲ ದೊರಕುತ್ತಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ್‌ ಹೇಳಿದರು.

ಮಾಯಕೊಂಡ ಹೋಬಳಿಯ ಹೆದ್ನ-ರಾಂಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಾನು ಸಂಸದನಾಗಿದ್ದರೂ ರಾಜ್ಯದಲ್ಲಿ ಬೇರೆ ಸರ್ಕಾರ ಇರುತ್ತಿತ್ತು. ಆದ್ದರಿಂದ ಕಾಮಗಾರಿಗೆ ತೊಡಕು ಉಂಟಾಗಿತ್ತು. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಈ ರಸ್ತೆ ಮೆಟಿಗ್‌ ಕಾಮಗಾರಿಗೆ 30-40 ಲಕ್ಷ ರೂ. ನೀಡಲಾಗಿತ್ತು. ಅಂದಿನಿಂದಲೂ ಡಾಂಬರೀಕರಣಕ್ಕೆ ಆಗ್ರಹಿಸಿ ಚುನಾವಣೆ ಬಹಿಷ್ಕರಿಸುತ್ತ ಹೋರಾಟ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಲಾಗಿತ್ತಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮತದಾನ ಮಾಡುವಂತೆ ಮನವೊಲಿಸಿದ್ದರು. ಈಗ ಹೆದ್ನ- ರಾಂಪುರ ರಸ್ತೆ ನಿರ್ಮಾಣಕ್ಕೆ 1.79 ಕೋಟಿ ರೂ. ಬಿಡುಗಡೆಯಾಗಿದೆ ಎಂದರು. ಈ ಮಧ್ಯೆ ಹೆದ್ನ ಗ್ರಾಮಸ್ಥರೊಬ್ಬರು ಮಾತನಾಡಿ, ಮಾಯಕೊಂಡ ರೈಲ್ವೆ ನಿಲ್ದಾಣದಿಂದ ಹೆದ್ನ ಗೆ ಬರುವ ರಸ್ತೆಗೆ ಹಣ ಬಿಡುಗಡೆಯಾಗಿದೆ. ಇನ್ನೂ ಸ್ವಲ್ಪ ರಸ್ತೆ ಆಗಲೀಕರಣ ಮಾಡುವಂತೆ ಕೋರಿದಾಗ, ಸಂಸದ ಮತ್ತು ಶಾಸಕರು ಸ್ಥಳದಲ್ಲಿದ್ದ ಎಂಜಿನಿಯರ್‌ಗೆ ರಸ್ತೆ ಆಗಲೀಕರಣ ಮಾಡುವಂತೆ ಸೂಚಿಸಿ, ಕಾಮಗಾರಿ ಕಳಪೆಯಾಗದಂತೆ ಎಚ್ಚರ ವಹಿಸಬೇಕು ಎಂದರು.

ಶಾಸಕ ಪ್ರೊ| ಎನ್‌. ಲಿಂಗಣ್ಣ ಮಾತನಾಡಿ, ಈಗಿನ ಕಾಲದಲ್ಲಿಯೂ ಇಂತಹ ರಸ್ತೆಗಳು ಇವೆ ಎಂಬುದನ್ನು ಉಹಿಸಿಕೊಳ್ಳಲೂ ಸಾಧ್ಯವಿಲ್ಲ. ರಸ್ತೆಗಾಗಿ ಹೋರಾಟ ಮಾಡಿದರೂ ಯಾರೂ ನಿಮ್ಮ ಮನವಿಗೆ ಸ್ಪಂದಿಸಲಿಲ್ಲ. ಈಗ ಕಾಲ ಕೂಡಿ ಬಂದಿದೆ ಎಂದರು.

ಸಂಸದ ಮತ್ತು ಶಾಸಕರು ಮಾಯಕೊಂಡದ ಉಪತಹಶೀಲ್ದಾರ್‌ ಕಚೇರಿ ನೂತನ ಕಟ್ಟಡಕ್ಕೆ ಮತ್ತು ಮುಖ್ಯ ರಸ್ತೆಯಿಂದ ಆಸ್ಪತ್ರೆವರೆಗೆ ಸಿಮೇಂಟ್‌ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಮಾಯಕೊಂಡ ರೈಲ್ವೆ ನಿಲ್ದಾಣದಿಂದ ಹೆದ್ನ ಗ್ರಾಮದವರೆಗೂ 2 ಕಿ.ಮೀ ಕಾಲ್ನಡಿಗೆಯಲ್ಲಿ ಬಂದ ಸಂಸದರು ಮತ್ತು ಶಾಸಕರು ಹೆದ್ನ-ರಾಂಪುರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಹೆದ್ನ ಮುರುಗೇಂದ್ರಪ್ಪ, ಬಸವಪುರ ರಮೇಶ್‌ ಮಾತನಾಡಿದರು. ದಾವಣಗೆರೆ ತಹಶೀಲ್ದಾರ್‌ ಸಂತೊಷ್‌ ಕುಮಾರ್‌, ಕಂದಾಯ ನಿರೀಕ್ಷಕ ರವಿಕುಮಾರ್‌, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಜೀವನಮೂರ್ತಿ, ಮಂಡಲ ಅಧ್ಯಕ್ಷ ಮೆಳ್ಳೆಕಟ್ಟೆ ನಾಗರಾಜು, ತಾ.ಪಂ ಸದಸ್ಯರಾದ ನಾಗರಾಜು, ಉಮೇಶ್‌ ನಾಯ್ಕ, ಎಪಿಎಂಸಿ ಸದಸ್ಯ ಸುಧಾ ರುದ್ರೇಶ್‌, ಮಾಯಕೊಂಡ ಗ್ರಾಪಂ ಅಧ್ಯಕ್ಷೆ ರೂಪ, ಹೆದೆ° ಗ್ರಾಂಪ ಆದ್ಯಕ್ಷ ಮಂಜುನಾಥ, ಸದಸ್ಯರಾದ ರುದ್ರೇಶ್‌, ಮಲ್ಲಿಕಾರ್ಜುನ, ಗಂಗಾಧರ ರಾಜಶೇಖರ್‌, ಸುಲೋಚನಮ್ಮ, ಗಿರಿಜಮ್ಮ, ಜಿಪಂ ಮಾಜಿ ಸದಸ್ಯ ಎಸ್‌. ವೆಂಕಟೇಶ್‌, ಮುಖಂಡರಾದ ದಿವಾಕರ, ನೀರಘಂಟಿ ಶ್ರೀನಿವಾಸ, ಜಯಪ್ರಕಾಶ್‌, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.