ಹಿರಿಯ ಉದ್ಯೋಗಿಗಳಿಂದ ಸ್ಟೇಟ್‌ ಬ್ಯಾಂಕ್‌ ಭದ್ರ: ರತನ್‌ಕುಮಾರ್‌

ಗ್ರಾಹಕರ ವಿಶ್ವಾಸ ಗಳಿಸಲು ಹಾಕಿಕೊಟ್ಟ ಮೇಲ್ಪಂಕ್ತಿ ಮರೆಯಲಾಗದು

Team Udayavani, Apr 8, 2022, 2:36 PM IST

state-bank

ದಾವಣಗೆರೆ: ವಾಣಿಜ್ಯ, ಶೈಕ್ಷಣಿಕ ನಗರ ದಾವಣಗೆರೆಯಲ್ಲಿ ಸ್ಟೇಟ್‌ ಬ್ಯಾಂಕ್‌ ಭದ್ರವಾಗಿ ನೆಲೆಯೂರಲು ಹಿರಿಯ ಸಹೋದ್ಯೋಗಿಗಳ ಕೊಡುಗೆ ಸಾಕಷ್ಟಿದೆ ಎಂದು ಸ್ಟೇಟ್‌ ಬ್ಯಾಂಕ್‌ ವಲಯ 3 ರ ಸಹಾಯಕ ಮಹಾಪ್ರಬಂಧಕ ರತನ್‌ ಕುಮಾರ್‌ ರತ್ನ ಹೇಳಿದರು.

ವಿದ್ಯಾನಗರ ಪಾರ್ಕ್‌ ಸಮೀಪದ ರೋಟರಿ ಭವನದಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಪೆನ್ಷನರ್ಸ್‌ ಕಮ್ಯೂನ್‌ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನ ಹಿರಿಯ ಅಧಿಕಾರಿಗಳು, ನೌಕರರು, ಸಿಬ್ಬಂದಿ ಶ್ರಮವಹಿಸಿ ಮೈಸೂರು ಬ್ಯಾಂಕನ್ನು ಗ್ರೇಟ್‌ ಮೈಸೂರು ಬ್ಯಾಂಕ್‌ ಆಗಿಸಿದವರು ಎಂದರು.

ಪ್ರಾರಂಭಿಕ ಹಂತದಲ್ಲಿ ಗ್ರಾಹಕರು ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವವರ ಮೇಲೆ ವಿಶ್ವಾಸವಿರಿಸಿ ವ್ಯವಹಾರ ಮಾಡುತ್ತಿದ್ದರು. ಆರಂಭದ ದಿನಗಳಲ್ಲಿ ಪ್ರತಿ ಹಳ್ಳಿಗೂ ಭೇಟಿ ನೀಡಿ ರೈತರು ಇರುವಲ್ಲಿಗೆ ಹೋಗಿ ಕೃಷಿ ಸಾಲ ನೀಡುತ್ತಿದ್ದ ಹಿರಿಯ ಉದ್ಯೋಗಿಗಳು ಶ್ರಮ ಹಾಗೂ ಶ್ರದ್ಧೆಯಿಂದ ಬ್ಯಾಂಕ್‌ ವಲಯವನ್ನೇ ಸದೃಢಗೊಳಿಸಿದ್ದಾರೆ ಎಂದರು.

ಸ್ಟೇಟ್‌ ಬ್ಯಾಂಕ್‌ ನಲ್ಲಿ ಹಿರಿಯ ಉದ್ಯೋಗಿಗಳು ಕಿರಿಯರನ್ನು ಎಂದೂ ಬೈಯುವುದಿಲ್ಲ. ಏರುಧ್ವನಿಯಲ್ಲಿ ಮಾತನಾಡುವುದಿಲ್ಲ. ಏನೇ ಸಮಸ್ಯೆ ಇದ್ದರೂ ಸಮಾಧಾನದಿಂದ ಬಗೆಹರಿಸುತ್ತಾರೆ. ಅಂತಹ ಶ್ರೀಮಂತಿಕೆಯ ಸಂಪ್ರದಾಯ ಆರಂಭಿಸಿದ್ದು ಸಹ ಹಿರಿಯ ಉದ್ಯೋಗಿಗಳು ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರಧಾನ ಕಾರ್ಯದರ್ಶಿ ಸಿ.ಎನ್‌. ಪ್ರಸಾದ್‌ ಮಾತನಾಡಿ, ಸಂಘ ಹಲವಾರು ಸಾಧನೆಗಳನ್ನು ಮಾಡುವ ಮೂಲಕ ಇತಿಹಾಸ ನಿರ್ಮಿಸಿಕೊಂಡು ಬರುತ್ತಿದೆ. ಜಗನ್ನಾಥನ್‌ ನೇತೃತ್ವದಲ್ಲಿ ಸುಂದರೇಶ್‌ ಸಂಘ ಪ್ರಾರಂಭಿಸಿದರು. 2009 ರಲ್ಲಿ 800 ರಿಂದ 900 ಸದಸ್ಯರಿದ್ದ ಸಂಘಟನೆ ಈಗ 8 ಸಾವಿರ ಸದಸ್ಯರ ಹೊಂದಿದೆ. ನಮ್ಮ ಸಂಘ ರಾಜ್ಯದ ಬ್ಯಾಂಕ್‌ ನಿವೃತ್ತರ ಸಂಘದಲ್ಲೇ ಅತ್ಯಂತ ಹಿರಿಯದು ಎಂದು ತಿಳಿಸಿದರು.

ಸಂಘವು ಈಗಾಗಲೇ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ. 1.8 ಕೋಟಿ ವೆಚ್ಚದಲ್ಲಿ ವಿಶ್ರಾಂತಿ ಗೃಹ ನಿರ್ಮಿಸಿದೆ. ಸಮಾವೇಶ, ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿದೆ. ಇನ್ನೂ ಹಲವು ಯೋಜನೆಗಳಿವೆ ಎಂದು ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್‌ ಎನ್‌. ಪೈ ಅಧ್ಯಕ್ಷತೆ ವಹಿಸಿದ್ದರು. ಎಸ್‌ ಬಿಐ ಟಿಸಿ ಅಧ್ಯಕ್ಷ ಶ್ರೀನಿವಾಸ್‌ರಾವ್‌, ಕಾರ್ಯಾಧ್ಯಕ್ಷ ಎಸ್‌. ಸಿದ್ಧಲಿಂಗಯ್ಯ, ಉಪಾಧ್ಯಕ್ಷ ಎ.ಎಸ್‌. ರಘುನಂದನ್‌ ಇತರರು ಇದ್ದರು. ತಾರಾಮಣಿ ಪ್ರಾರ್ಥಿಸಿದರು. ಅಜಿತ್‌ ಕುಮಾರ್‌ ನ್ಯಾಮತಿ ಸ್ವಾಗತಿಸಿದರು. ಸೂರ್ಯ ನಾರಾಯಣ್‌ ನಿರೂಪಿಸಿದರು. ಜೆ. ಬದ್ರಿ ನಾರಾಯಣ್‌ ವಂದಿಸಿದರು. ಹಿರಿಯ ನೌಕರರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.