ಹತ್ತು ಕೆಜಿ ಅಕ್ಕಿ ನೀಡಲು ಈಗಲೂ ಬದ್ಧ: ಸಚಿವ ಆರ್.ಬಿ ತಿಮ್ಮಾಪುರ


Team Udayavani, Jun 22, 2023, 1:26 PM IST

r-b-timmapur

ದಾವಣಗೆರೆ: ರಾಜ್ಯ ಸರ್ಕಾರ ಹತ್ತು ಕೆಜಿ ಅಕ್ಕಿ ನೀಡಲು ಈಗಲೂ ಬದ್ದ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆಯಲು ಬದ್ಧವಿದೆ. ಆದರೆ, ಕೇಂದ್ರದ ಅಸಹಕಾರ ನೀತಿಯಿಂದ‌ ಕೊಡಲು ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿಯವರು ನಮ್ಮ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅವರಿಗೆ ಭೇಟಿಗೆ ಅವಕಾಶ ನೀಡದಿರುವುದು ಖಂಡನೀಯ. ರಾಜ್ಯದಲ್ಲಿ ತೊಂದರೆಯಾಗಿದೆ. ಕೇಂದ್ರದ ಗೋದಾಮಿನಲ್ಲಿ ಅಕ್ಕಿ ದಾಸ್ತಾನಿದ್ದರೂ ರಾಜ್ಯಕ್ಕೆ ಕೊಡುತ್ತಿಲ್ಲ. ಪುಕ್ಕಟೆ ಕೇಳುತ್ತಿಲ್ಲ, ದುಡ್ಡು ಕೊಡುತ್ತೇವೆ ಎಂದರೂ ಕೇಳುತ್ತಿಲ್ಲ. ಬಡವರ ಅನ್ನದ ಜೊತೆ ಆಟವಾಡುತ್ತಿರುವ ಪ್ರವೃತ್ತಿಯನ್ನು ಖಂಡಿಸುತ್ತೇನೆ ಎಂದು ದೂರಿದರು.

ಸರ್ಕಾರ ಹೇಗೆ ನಡೆಸಿಕೊಳ್ಳಬೇಕು ಎನ್ನುವುದು ನಮಗೆ ಗೊತ್ತಿದೆ. ಈಗ ಅಕ್ಕಿ ಕೊಡುತ್ತಿರುವುದು ನಮ್ಮ ಪಾಲು. ಕೇಂದ್ರದವರು ಕೊಡುತ್ತಾರೆ. ನಾವು ಸೇರಿಸಿ ಹತ್ತು ಕೆಜಿ ಕೊಡ್ತಿವಿ. ಆದರೆ‌, ಕೇಂದ್ರ ಸರ್ಕಾರ ಪುಕ್ಕಟೆ ಕೊಡುವ ರೀತಿ ಮಾಡುತ್ತಾ ಇರುವುದು ಸರಿಯಲ್ಲ. ಕೇಂದ್ರದ ಕೆಲವು ಸಚಿವರುಗಳು ಅದಾನಿ, ಅಂಬಾನಿ ಜೊತೆ ಬೆಳೆದವರು, ಬಡವರ ಕಷ್ಟ ಗೊತ್ತಾಗುತ್ತಿಲ್ಲ ಎಂದರು.

ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ‌ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು‌ ದರ ಏರಿಕೆ ಬಗ್ಗೆ ಅದು ಏರಿಕೆಯಾದ ನಂತರ ಮಾತನಾಡೋಣ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ. ಅದು ಚರ್ಚೆಯಾಗುತ್ತದೆ. ಮುಂಚಿತವಾಗಿಯೇ ನಾವು ಏನನ್ನು ಹೇಳುವುದಿಲ್ಲ ಎಂದರು.

ಇದನ್ನೂ ಓದಿ:ಹಸಿರು ವಜ್ರ, ಉಪನಿಷತ್ ಪುಸ್ತಕ, ದಶ ದಾನ..: ಬಿಡೆನ್ ದಂಪತಿಗೆ ಮೋದಿ ಕೊಟ್ಟ ಉಡುಗೊರೆಗಳೇನು?

ಕೈಗಾರಿಕಾ ಗಳ ಬಂದ್ ಘೋಷಣೆ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ಸಹಜವಾಗಿ ತೆರಿಗೆ ತೆಗೆದುಕೊಳ್ಳಲೇಬೇಕು. ಕೆಲವು ವಿಚಾರವಾಗಿ ಟ್ಯಾಕ್ಸ್ ಕಡಿಮೆ ಮಾಡುವುದು ಜಾಸ್ತಿ ಇದ್ದೇ ಇರುತ್ತದೆ. ಒಂದು ಕೈಯಲ್ಲಿ ಕೊಟ್ಟು ಒಂದು ಕೈಯಲ್ಲಿ ಕಿತ್ತುಕೊಳ್ಳುತ್ತಾರೆ ಎಂದು ಅವರರವ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ನಾವು ಮದ್ಯ ದರ ಏರಿಕೆ ಮಾಡಿಲ್ಲ ಎಂದರು.

ಸಿಎಂ‌ ಸಿದ್ದರಾಮಯ್ಯನವರು ಪೂರ್ಣವಧಿ ಅಧಿಕಾರ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಶಾಸಕಾಂಗ ಸಭೆ ಇದೆ, ಹೈಕಮಾಂಡ್ ಇದೆ ಅಲ್ಲಿ ನಿರ್ಧಾರವಾಗುತ್ತದೆ. ಈಗ ಏನು ಹೇಳುತ್ತಾ ಇದರೋ ಅದು ಅವರ ವೈಯಕ್ತಿಕ. ನಾನು ವೈಯಕ್ತಿಕ ಅಭಿಪ್ರಾಯ ನಾನು ಹೇಳುವುದಿಲ್ಲ ಎಂದರು

ಬಿಜೆಪಿ ವಿರೋಧ ಪಕ್ಷ ಆಯ್ಕೆ ಮಾಡದ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರು ಗೊಂದಲದಲ್ಲಿ ಇದ್ದಾರೆ ಸೋಲಿನಿಂದ ಹತಾಶರಾಗಿದ್ದಾರೆ.  ಯಡಿಯೂರಪ್ಪ ನವರು ಒತ್ತಡದಲ್ಲಿ ಇದ್ದಾರೆ, ಈ ವಯಸ್ಸಿನಲ್ಲಿ ಅವರಿಗೆ ಒತ್ತಡ ಇದೆ. ಬಿಜೆಪಿ ಪಕ್ಷದಲ್ಲಿ ಬಹಳ ಜನರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ಯಡಿಯೂರಪ್ಪನವರನ್ನು ಏಕೆ ತೆಗೆದರು ಈಗ ಏಕೆ ಪ್ರವಾಸ ಮಾಡುವಂತೆ ಹೇಳುತ್ತಿದಾರೆ ಗೊತ್ತಾಗುತ್ತಿಲ್ಲ. ಯಡಿಯೂರಪ್ಪನವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯವರು 600 ಭರವಸೆಗಳಲ್ಲಿ 50 ಕೂಡ ಈಡೇರಿಕೆ ಮಾಡಿಲ್ಲ. ಯೋಗ್ಯತೆ ಇಲ್ಲದವರು. ಈಗ ಮಾತನಾಡುತ್ತಿದ್ದಾರೆ. ಅವರು ಎಷ್ಟು ಭರವಸೆಗಳನ್ನು ಈಡೇರಿಕೆ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.