ಬೈದಾಟ ನಿಲ್ಲಿಸಿ, ಏನು ಮಾಡುತ್ತೇವೆ ಎನ್ನುವುದು ತಿಳಿಸಿ


Team Udayavani, Jan 29, 2018, 3:15 PM IST

29-32.jpg

ಜಗಳೂರು: ನಮ್ಮ ರಾಜಕಾರಣಿಗಳು ಯಾರೇ ಆಗಿದ್ದರೂ ಒಬ್ಬರು ಮತ್ತೂಬ್ಬರನ್ನು ತೆಗಳುವುದನ್ನು ಬಿಟ್ಟು ತಾವು ಅಧಿಕಾರಕ್ಕೆ ಬಂದರೆ ಜನರಿಗೆ ಏನು ಮಾಡುತ್ತೇವೆ ಎಂಬುದನ್ನು ದೃಢ ಮಾತುಗಳಲ್ಲಿ ಹೇಳಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ
ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ಜಗಳೂರು ಪಟ್ಟಣದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಆರನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಚುನಾವಣೆಗಳು ಇನ್ನೇನು ಹತ್ತಿರ ಬರುತ್ತಿವೆ. ಒಬ್ಬರು ಮತ್ತೂಬ್ಬರನ್ನು ಬೈಯ್ಯುವ, ಕಾಲೆಳೆಯುವ ಕೆಲಸ ನಡೆಯುತ್ತಿದೆ. ಈ ದೇಶದಲ್ಲಿ ಘೋಷಣೆಗಳು ಮಿತಿಮೀರಿವೆ. ಪ್ರಜಾಪ್ರಭುತ್ವದ ಆಶಯಗಳು ಈಡೇರಿಲ್ಲ. ಜನಪ್ರತಿನಿಧಿಗಳು ನೀಡುವ ಆಶ್ವಾಸನೆ, ಭರವಸೆಗಳೆಲ್ಲ ಸುಳ್ಳಾಗದೆ ಅವುಗಳನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ನಮ್ಮ ಪುರಾತನರು ವಿಚ್ಛಿದ್ರಕಾರಿ ನೀತಿಯನ್ನು ಬೋಧಿಸಿಲ್ಲ. ಸಂವಿಧಾನವನ್ನು ರೂಪಿಸಿದ ಡಾ| ಅಂಬೇಡ್ಕರ್‌ ಸಹ ಧರ್ಮ
ನಿರಪೇಕ್ಷತೆಯನ್ನೇ ಬೋಧಿಸಿದ್ದಾರೆ. ಎಲ್ಲರನ್ನೂ ಸಮಾನವಾಗಿ ನೋಡುವುದೇ ಧರ್ಮ ನಿರಪೇಕ್ಷತೆ ಎಂಬುದಾಗಿ ಅವರು
ಹೇಳಿದ್ದಾರೆ. ಬಸವಣ್ಣನವರು ಹೇಳಿದ ಮಾತುಗಳು ಸಂವಿಧಾನದ ಭಾಗವಾಗಿವೆ. ಸಂವಿಧಾನ ಹೇಳಿರುವ ಆಶಯದ
ಮಾತುಗಳೆಲ್ಲವೂ ಬಸವಣ್ಣನವರ ಸಾಹಿತ್ಯದಲ್ಲಿ ಪ್ರತಿಬಿಂಬಿತವಾಗಿವೆ ಎಂದು ತಿಳಿಸಿದರು. ದಾವಣಗೆರೆಯ ನಮ್ಮ ಅನುಭವ ಮಂಟಪ
ಶಾಲೆಯಲ್ಲಿ ನರ್ಸರಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ಇಂದು ಅಮೆರಿಕಾ ದೇಶದಲ್ಲಿ ಬಹು ದೊಡ್ಡ ಹೆಸರು ಮಾಡಿರುವ ಪರಿಗೆ ನಾವು ಬೆಕ್ಕಸ ಬೆರಗಾಗಿದ್ದೇವೆ. ಹುಣ್ಣಿಮೆ ಮಹೋತ್ಸವದ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಭಕ್ತರಿಗೆ ಆರೋಗ್ಯದ ತಿಳಿವಳಿಕೆ ನೀಡಿರುವ ಇಬ್ಬರು ವೈದ್ಯರ ಸಾಧನೆ ಅಪೂರ್ವವಾದುದು. ಈ ಮಕ್ಕಳ ಸಾಧನೆಯನ್ನು ನಾವು ನರ್ಸರಿ ಶಾಲೆಯಿಂದಲೂ ಗಮನಿಸಿದ್ದೇವೆ. ಬಸಂತ ಕುಮಾರ್‌ ಅಮೆರಿಕಾದಲ್ಲಿ ನೆಲೆಸಿದ್ದರು. ಪ್ರತಿಭಾವಂತರಾದ ಅವರು ತಮ್ಮ ಆಶಯದಂತೆ ಅಮೆರಿಕಾ ಬಿಟ್ಟು ಬೆಂಗಳೂರಿನಲ್ಲಿ ಬಂದು ನೆಲೆಸಿ ವೈದ್ಯ ವೃತ್ತಿ ಮಾಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಧರ್ಮಗಳು ಜನಾಂಗ ಜನಾಂಗಗಳ ಮಧ್ಯೆ ವಿರಸಕ್ಕೆ ಕಾರಣವಾಗಿವೆ. ಒಬ್ಬ ಕಳ್ಳ ತನ್ನ ಕೈಯಲ್ಲಿರುವ ಚಾಕುವನ್ನು ದರೋಡೆಗೆ
ಬಳಸಿದರೆ ವೈದ್ಯನೊಬ್ಬ ಅದೇ ಚಾಕುವನ್ನು ಮನುಷ್ಯನ ಪ್ರಾಣ ರಕ್ಷಿಸಲು ಬಳಸುತ್ತಾನೆ ಎಂದು ಮಾರ್ಮಿಕವಾಗಿ ಹೇಳಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.