ಬೀದಿ ನಾಟಕ ಸಾಮಾಜಿಕ ಜಾಗೃತಿಯ ರಂಗಭೂಮಿ

•ವೈಚಾರಿಕ ಆಂದೋಲನವಾಗಿದ್ದ ಬೀದಿ ನಾಟಕ ಈಗ ಸಾಮಾಜಿಕ ಜನಾಂದೋಲನವಾಗಿದೆ

Team Udayavani, Jul 16, 2019, 3:34 PM IST

dg-tdy-3..

ದಾವಣಗೆರೆ: ನಗರಪಾಲಿಕೆ ಆವರಣದಲ್ಲಿ ಬೀದಿ ನಾಟಕದ ಪ್ರದರ್ಶನ ನಡೆಯಿತು.

ದಾವಣಗೆರೆ: ಬೀದಿ ನಾಟಕ ಸಾಮಾಜಿಕ ಜಾಗೃತಿಯ ರಂಗಭೂಮಿ ಎಂದು ಪ್ರಗತಿಪರ ಚಿಂತಕ ಡಾ| ಸಿದ್ದನಗೌಡ ಪಾಟೀಲ್ ವಿಶ್ಲೇಷಿಸಿದ್ದಾರೆ.

ಸೋಮವಾರ ಮಹಾನಗರ ಪಾಲಿಕೆ ಆವರಣದಲ್ಲಿ ರಾಜ್ಯ ಬೀದಿ ನಾಟಕ ಕಲಾವಿದರ ಅಧ್ಯಯನ ಶಿಬಿರದ ಸಮಾರೋಪದಲ್ಲಿ ಮಾತನಾಡಿದ ಅವರು, ದೇಶದಲ್ಲಿ ತುರ್ತು ಪರಿಸ್ಥಿತಿಯ ನಂತರ ಬೀದಿ ನಾಟಕಗಳ ಪ್ರಾಕಾರ ಚಾಲ್ತಿಗೆ ಬಂದಿದೆ. ಪ್ರಾರಂಭಿಕ ಹಂತದಲ್ಲಿ ವೈಚಾರಿಕ ಆಂದೋಲ ನವಾಗಿದ್ದ ಬೀದಿ ನಾಟಕ ಈಗ ಸಾಮಾಜಿಕ ಜನಾಂದೋಲನವಾಗಿದೆ ಎಂದರು.

ಬೀದಿ ನಾಟಕ ಕಲಾವಿದರು ಜನರ ಮಧ್ಯೆಯೇ ತೆರಳಿ ಜನರು ಅನುಭವಿಸುವ ಸಮಸ್ಯೆ, ಮೌಡ್ಯತೆ, ಅನಾಚಾರ, ವಿರುದ್ಧ ಧ್ವನಿಯೆತ್ತುವ ಆಂದೋಲನವಾಗಿದೆ. ಜನರ ಮಧ್ಯೆಯೇ ಹೋಗಿ ಜನರ ಸಮಸ್ಯೆಗೆ ಧ್ವನಿಯಾಗಿ ಸ್ಪಂದಿಸುವಂತಹ ಬೀದಿ ನಾಟಕ ಪ್ರಾಕಾರವೂ ಈಗ ಸಮಸ್ಯೆ ಎದುರಿಸುತ್ತಿದೆ ಎಂದು ತಿಳಿಸಿದರು.

1990 ರಲ್ಲಿ ಬೀದಿ ನಾಟಕ ಸಾಕ್ಷರತಾ ಆಂದೋಲನದ ಭಾಗವಾಗಿತ್ತು. ಈಗ ನೀರು, ಪರಿಸರ ಸಮಸ್ಯೆ ಮುಂದಿಟ್ಟು ಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಈಗ ಎಲ್ಲಾ ಕಡೆ ನೀರಿನ ಸಮಸ್ಯೆ ಸಾಮಾನ್ಯ ಎನ್ನುವಂತಾಗಿದೆ. ಇದೇ ಸ್ಥಿತಿ ಮುಂದುವರೆದಲ್ಲಿ ನೀರನ್ನು ಚಮಚೆಯಲ್ಲಿ ಬಳಸಬೇಕಾದ ಸ್ಥಿತಿ ಬರಬಹುದು. ಗಾಳಿಯೂ ಮಾಲಿನ್ಯವಾಗುತ್ತಿರುವ ಕಾರಣಕ್ಕೆ ಮುಂದೆ ಓಣಿಗಳಲ್ಲಿ ಗಾಳಿಕೇಂದ್ರ ಪ್ರಾರಂಭವಾದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಪ್ರಜಾಸತ್ತೆ ಯಾವ ಹಂತಕ್ಕೆ ಬಂದು ತಲುಪಿದೆ ಎಂದರೆ ಸರ್ಕಾರಗಳ ಬಜೆಟ್‌ಗಳೇ ಖಾಸಗೀಕರಣಕ್ಕೆ ಒತ್ತು ನೀಡುತ್ತಿವೆ. ಕಲ್ಯಾಣ ರಾಜ್ಯ ಹೋಗಿ ಮುಂದೆ ಕಂಪನಿ ರಾಜ್ಯ ನಿರ್ಮಾಣವಾಗಲಿದೆ. ನಮ್ಮದೇ ನೀರು, ಗಾಳಿಯನ್ನು ವಿವಿಧ ಬ್ರಾಂಡ್‌ಗಳ ಹೆಸರಲ್ಲಿ ನಮಗೆ ಮಾರಾಟ ಮಾಡುವಂತಹ ಸ್ಥಿತಿ ಬರಲಿದೆ ಎಂದು ಎಚ್ಚರಿಸಿದರು.

ಈಗಿನ ಅಭಿವೃದ್ಧಿ ಮತ್ತು ವೇಗದ ಬದುಕಿನಲ್ಲಿ ಮಾನವ ಜಗತ್ತು ಎತ್ತ ಕಡೆ ಹೋಗುತ್ತಿದೆ ಎಂಬುದನ್ನು ಬೀದಿ ನಾಟಕಗಳು ಜನರಿಗೆ ತಲುಪಿಸಬೇಕು. ಸರ್ಕಾರದ ಯೋಜನೆ, ಕಾರ್ಯಕ್ರಮಗಳ ಜೊತೆಗೆ ಭ್ರಷ್ಟಾಚಾರ, ಕಳಂಕ ರಹಿತ, ನಿಜವಾದ ಪ್ರಜಾಸತ್ತತೆ ಮೌಲ್ಯ ತಲುಪಿಸಬೇಕು. ಬೀದಿ ನಾಟಕ ಕಲಾವಿದರು ತಮ್ಮ ಕಲೆಯ ಮೂಲಕ ಅತ್ಯುತ್ತಮ ರೀತಿಯಲ್ಲಿ ಜನಾಂದೋಲನ ಮಾಡಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್‌ ಆರ್‌. ಬಳ್ಳಾರಿ ಮಾತನಾಡಿ, ಸರ್ಕಾರದ ಕಾರ್ಯಕ್ರಮ, ಯೋಜನೆಗಳ ಜೊತೆಗೆ ಸಾಮಾಜಿಕ ಅನಿಷ್ಠ ಪದ್ಧತಿಯ ವಿರುದ್ಧ ಬೀದಿ ನಾಟಕಗಳು ಸಂದೇಶ ನೀಡುವ ಗುರುತರ ಜವಾಬ್ದಾರಿ ಹೊತ್ತಿವೆ ಎಂದು ತಿಳಿಸಿದರು.

ಮೈಮ್‌ ಕಲಾವಿದ ಆರ್‌.ಟಿ. ಅರುಣ್‌ಕುಮಾರ್‌ ಮಾತನಾಡಿ, ಸಮಾಜದಲ್ಲಿ ಉತ್ತಮ ಮೌಲ್ಯ ಬಿತ್ತುವುದು ಕಲಾವಿದರ ಮುಖ್ಯ ಉದ್ದೇಶ ಆಗಬೇಕು. ಬೀದಿ ನಾಟಕಗಳಲ್ಲಿನ ಕಥೆ, ಹಾಡುಗಳಿಂದ ಪ್ರಭಾವಿತರಾಗಿ ಒಬ್ಬರೇ ಒಬ್ಬರು ಬದಲಾವಣೆಗೊಂಡರೆ ಬೀದಿ ನಾಟಕ ಸಾರ್ಥಕ ಎಂದರು.

ರಾಜ್ಯ ಮಟ್ಟದ ಅಧ್ಯಯನ ಶಿಬಿರದ ನಿರ್ದೇಶಕ ಡಾ| ರಾಜಪ್ಪ ದಳವಾಯಿ, ಡಾ| ಶಂಕರ ಹಲಗತ್ತಿ, ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ, ಮಹಾನಗರ ಪಾಲಿಕೆ ಮಾಜಿಸದಸ್ಯ ಆವರಗೆರೆ ಎಚ್.ಜಿ. ಉಮೇಶ್‌, ಮಲ್ಲೇಶ್‌, ಪಿ. ಷಣ್ಮುಖಸ್ವಾಮಿ, ಕೆ. ಬಾನಪ್ಪ, ಐರಣಿ ಚಂದ್ರು, ಅಂಜಿನಪ್ಪ ಲೋಕಿಕೆರೆ ಇತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.