ಅಪರಾಧ ತಡೆಗೆ ಸುಬಾಹು ಇ-ಬೀಟ್‌ ಕಣ್ಗಾವಲು

ಇನ್ಮುಂದೆ ಪೊಲೀಸ್‌ ಇಲಾಖೆಯಿಂದ ರಾತ್ರಿ ಗಸ್ತು ಮತ್ತಷ್ಟು ಬಿಗಿ-ಸಾರ್ವಜನಿಕರಿಗೂ ಸಹಕಾರಿ

Team Udayavani, Sep 25, 2020, 7:18 PM IST

dg-tdy-1

ಸಾಂದರ್ಭಿಕ ಚಿತ್ರ

ದಾವಣಗೆರೆ: ಪೊಲೀಸ್‌ ಗಸ್ತು ಕಾರ್ಯವನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ರಾತ್ರಿ ವೇಳೆ ನಡೆಯುವ ಕಳ್ಳತನ, ದರೋಡೆ ಸೇರಿದಂತೆ ಇನ್ನಿತರ ಅಪರಾಧ ಚಟುವಟಿಕೆಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್‌ಇಲಾಖೆ ಸಹ ಆಧುನಿಕ ತಂತ್ರಾಂಶದ ಮೊರೆ ಹೋಗಿದೆ. ಸದ್ಯದಲ್ಲಿಯೇ “ಸುಬಾಹು ಇ-ಬೀಟ್‌’ ವ್ಯವಸ್ಥೆ ಜಿಲ್ಲೆಯಲ್ಲಿ ಜಾರಿಗೆ ಬರಲಿದೆ.

ಇದು ತಂತ್ರಾಂಶ ಆಧರಿಸಿದ ಹೊಸ ವ್ಯವಸ್ಥೆಯಾಗಿದ್ದು, ಎಲ್ಲ ಮಾಹಿತಿಯೂ ಡಿಜಿಟಲೀಕರಣಗೊಂಡು ಇಲಾಖೆಯ ಹಿರಿಯ ಅಧಿಕಾರಿಗಳು ತಾವಿದ್ದಲ್ಲಿಯೇ ಇಲಾಖಾ ಸಿಬ್ಬಂದಿಯರಾತ್ರಿ ಗಸ್ತು ಪಾಳಿಯನ್ನು ಪರಿಶೀಲಿಸಬಹುದಾಗಿದೆ. ಈ ಹಿಂದೆ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ನಿಗದಿತ ಸ್ಥಳದಲ್ಲಿಟ್ಟಿರುತ್ತಿದ್ದ ಪಟ್ಟಿಯಲ್ಲಿ ಕೈಬರಹದ ಮೂಲಕ ಸಹಿ ಹಾಕಿ ತಮ್ಮ ಕರ್ತವ್ಯ ಖಚಿತಪಡಿಸುತ್ತಿದ್ದರು. ಎಷ್ಟೋ ಬಾರಿ ಈ ಹಳೆಯ ವ್ಯವಸ್ಥೆಯಲ್ಲಿ ಗಸ್ತಿನಲ್ಲಿರುವ ಪೊಲೀಸರು ಕರ್ತವ್ಯ ಸ್ಥಳಕ್ಕೆ ಬರುವುದಿಲ್ಲ, ಸಹಿ ಮಾತ್ರ ಹಾಕುತ್ತಾರೆ ಎಂಬ ಸಾರ್ವಜನಿಕ ವಲಯದ ಆರೋಪಗಳಿಗೆ ಸುಬಾಹು ಇ-ಬೀಟ್‌ ವ್ಯವಸ್ಥೆಯಿಂದ ಕತ್ತರಿ ಬೀಳಲಿದೆ. ಈಗ ಸುಬಾಹು ಇ-ಬೀಟ್‌ ಜಾರಿಗೊಳಿಸುತ್ತಿರುವುದರಿಂದ ಕರ್ತವ್ಯದಲ್ಲಿರುವ ಸಿಬ್ಬಂದಿ ಸುಬಾಹು ಇ-ಬೀಟ್‌ ಆ್ಯಪ್‌ ತಮ್ಮ ಸ್ಮಾರ್ಟ್‌ ಫೋನ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಂಡು ಬೀಟ್‌ ಸ್ಥಳಕ್ಕೆ ಹೋಗಿ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ತಮ್ಮ ಕರ್ತವ್ಯ ಖಚಿತಪಡಿಸಲೇಬೇಕಾಗಿದೆ. ಇದರಿಂದ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆಯೋ ಇಲ್ಲವೋ ಎಂಬ ಮಾಹಿತಿ ಸಮಯ ಸಹಿತ ಇಲಾಖೆಯಲ್ಲಿ ದಾಖಲಾಗುತ್ತದೆ. ಈ ಡಿಜಿಟಲ್‌ ವ್ಯವಸ್ಥೆಯಿಂದ ಎಲ್ಲ ಪೊಲೀಸ್‌ ಸಿಬ್ಬಂದಿ ರಾತ್ರಿ ಗಸ್ತು ಕಡ್ಡಾಯವಾಗಿ ಮಾಡಲೇಬೇಕಾಗುತ್ತದೆ.

ಕಳ್ಳತನ, ದರೋಡೆಗೆ ಕಡಿವಾಣ: ಸುಬಾಹು ಇ-ಬೀಟ್‌ ವ್ಯವಸ್ಥೆ ಪೊಲೀಸ್‌ ಸಿಬ್ಬಂದಿ ರಾತ್ರಿ ಗಸ್ತು ಪಾಳಿಯನ್ನು ಕಡ್ಡಾಯವಾಗಿ ಮಾಡುವಂತೆ ಮಾಡುತ್ತದೆ. ಇದರಿಂದ ಸಹಜವಾಗಿ ಪೊಲೀಸರ ಗಸ್ತು ಕಾರ್ಯ ವಾಸ್ತವದಲ್ಲಿ ಇರುವುದರಿಂದ ಆ ಪ್ರದೇಶದಲ್ಲಿ ರಾತ್ರಿ ಕಳ್ಳತನ, ದರೋಡೆ ಸೇರಿದಂತೆ ಇನ್ನಿತರ ಅಪರಾಧ ಪ್ರಕರಣಗಳಿಗೂ ಕಡಿವಾಣ ಬೀಳಲಿದೆ. ಹೀಗಾಗಿ ಪೊಲೀಸ್‌ ಇಲಾಖೆ ಈ ತಂತ್ರಾಂಶವನ್ನು ಬಹುಪಯುಕ್ತವಾಗಿ ಬಳಸಿಕೊಳ್ಳಲು ಮುಂದಾಗಿದೆ. ಒಟ್ಟಾರೆ ಪೊಲೀಸ್‌ ಇಲಾಖೆ ರಾತ್ರಿ ಗಸ್ತು ಪಾಳಿಯನ್ನು ಬಿಗಿಗೊಳಿಸಲು ಸುಬಾಹು ತಂತ್ರಾಂಶ ಸಹಕಾರಿಯಾಲಿದೆ. ಜೊತೆಗೆ ಸಾರ್ವಜನಿಕರಿಗೆ ಹೆಚ್ಚಿನ ಭದ್ರತೆ, ರಕ್ಷಣೆಯ ಭರವಸೆಯನ್ನೂ ಮೂಡಿಸಿದೆ.

ರಾತ್ರಿ ವೇಳೆಯ ಪೊಲೀಸ್‌ ಗಸ್ತು ವ್ಯವಸ್ಥೆಯನ್ನು ಇನ್ನಷ್ಟು ಬಿಗಿಗೊಳಿಸಲು, ಸಾರ್ವಜನಿಕರ ಸುರಕ್ಷತೆ ಹೆಚ್ಚಿಸಲು ಹಾಗೂ ಅಪರಾಧಗಳನ್ನು ನಿಯಂತ್ರಿಸಲು ಸುಬಾಹು ತಂತ್ರಾಂಶ ಸಹಕಾರಿ. ಈ ನೂತನ ತಂತ್ರಾಂಶ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಶೀಘ್ರದಲ್ಲಿಯೇ ಅನುಷ್ಠಾನಗೊಳಿಸಲಾಗುವುದು. – ಹನುಮಂತರಾಯ, ಎಸ್ಪಿ

ನಾಗರಿಕರಿಗೂ ಅನುಕೂಲ : ಸುಬಾಹು ತಂತ್ರಾಂಶದಿಂದ ಸಾರ್ವಜನಿಕರಿಗೂ ಅನುಕೂಲವಾಗಲಿದೆ. ಸಾರ್ವಜನಿಕರು ಸಹ ಸುಬಾಹು ರೆಸಿಡೆಂಟ್‌ ಆ್ಯಪ್‌ ಅನ್ನು ಉಚಿತವಾಗಿ ಮೊಬೈಲ್‌ನಲ್ಲಿ ಡೌನ್‌ ಲೋಡ್‌ ಮಾಡಿಕೊಂಡು ದೂರದ ಊರಿಗೆ ತೆರಳುವ ಮುನ್ನ ಹತ್ತಿರದ ಪೊಲೀಸ್‌ ಠಾಣೆಗೆ ಈ ತಂತ್ರಾಂಶದ ಮೂಲಕ ಮಾಹಿತಿ ನೀಡಬಹುದಾಗಿದೆ. ಇದರಿಂದ ದೂರ ಪ್ರಯಣ ಕೈಗೊಂಡ ಸಂದರ್ಭದಲ್ಲಿ ಬೀಟ್‌ ಪೊಲೀಸರು ಮನೆಯ ಬಳಿಯೂ ಬಂದು ಗಸ್ತು ತಿರುಗಲಿದ್ದಾರೆ . ಇದರಿಂದ ಸಾರ್ವಜನಿಕರಿಗೂ ಹೆಚ್ಚಿನ ಭದ್ರತೆ ಸುಲಭವಾಗಿ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.