ದುಗ್ಗಮ್ಮನಿಗೆ ಭಕ್ತರಿಂದ ಹರಕೆ ಸಲ್ಲಿಕೆ


Team Udayavani, Feb 28, 2018, 6:01 PM IST

s-4.jpg

ದಾವಣಗೆರೆ: ಎರಡು ವರ್ಷಕ್ಕೊಮ್ಮೆ ನಡೆಯುವ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ(ದುಗ್ಗಮ್ಮ) ಜಾತ್ರೆಯ ಸಂಭ್ರಮ ಇಡೀ ದಾವಣಗೆರೆಯಲ್ಲಿ ಮನೆ ಮಾಡಿದೆ. ದುಗ್ಗಮ್ಮನ ಜಾತ್ರೆ ಮುಗಿದ ಕೆಲ ದಿನಗಳ ನಂತರದಲ್ಲಿ ಅದೇ ಗುಂಗಿನಲ್ಲೇ ಇರುವ ಜನರು ಜಾತ್ರೆಗೆ ಇನ್ನೂ ಒಂದು ವರ್ಷ ಇದೆ ಎನ್ನುತ್ತಿದ್ದಂತೆ ಸಜ್ಜಾಗುತ್ತಾರೆ ಎಂಬುದಕ್ಕೆ ದಾವಣಗೆರೆ ಪೇಟೆ, ಗಲ್ಲಿ-ಗಲ್ಲಿಯಲ್ಲಿ ಕಂಡು ಬಂದ ಜನ ಸಂದಣಿ ಸಾಕ್ಷಿಯಾಗಿತ್ತು. ಸೋಮವಾರ ರಾತ್ರಿ ಶ್ರೀ ದುರ್ಗಾಂಬಿಕಾ ದೇವಿಗೆ ಕಂಕಣಧಾರಣೆ ನಂತರ ಸಾರು ಹಾಕಿದ ಕ್ಷಣದಿಂದಲೇ
ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆತು, ಧಾರ್ಮಿಕ ಕಾರ್ಯಕ್ರಮ ಪ್ರಾರಂಭವಾಗಿವೆ. ಮಂಗಳವಾರ ಭಕ್ತರು ದೀಡು ನಮಸ್ಕಾರ, ಬೇವಿನ ಉಡುಗೆ, ಉರುಳು ಸೇವೆ ಸಲ್ಲಿಸಿದರು. 

ಸಾವಿರಾರು ಭಕ್ತರ ಮಧ್ಯೆಯಿಂದ ಹೊರ ಬರುತ್ತಿದ್ದಂತೆ ದುಗ್ಗಮ್ಮ ನಿನ್ನಾಲ್ಕು ಉಧೋ… ಉಧೋ… ಎಂಬ ಘೋಷಣೆ ಇಡೀ ದೇವಸ್ಥಾನದ ಸುತ್ತಲೂ ಭಕ್ತಿಯಿಂದ ಹರಕೆ ತೀರಿಸುವ ದೃಶ್ಯ ಕಾಣುತ್ತಿತ್ತು. ಬೆಳಗಿನ ಜಾವದಿಂದಲೇ ದೇವಿಯ ದರ್ಶನ, ಹರಕೆ, ಕಾಣಿಕೆ ಸಲ್ಲಿಸುವುದಕ್ಕಾಗಿ ಉದ್ದನೆಯ ಸರತಿ ಸಾಲಲ್ಲಿ ನಿಂತಿದ್ದರು. ದೇವಿಯ ದರ್ಶನಕ್ಕಾಗಿಯೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಲ್ಲಬೇಕಾಗಿ ಬಂದರೂ ಭಕ್ತಾದಿಗಳು ಭಯ, ಭಕ್ತಿಯಿಂದ ಕಾಯುತ್ತಿದ್ದರು.
ಮೊದಲ ದಿನ ಹೋಳಿಗೆ ಒಳಗೊಂಡಂತೆ ಸಿಹಿ ಭಕ್ಷéಗಳು ಪ್ರಾಶ್ಯಸ್ತ. ಮನೆಗಳಲ್ಲಿ ವಿಶೇಷ ಪೂಜೆ ಮಾಡಿ, ನೈವೇದ್ಯ ಸಲ್ಲಿಸಿ, ನಂತರ ದೇವಸ್ಥಾನಕ್ಕೆ ತೆರಳಿ, ನೆಚ್ಚಿನ ದೇವತೆಗೆ ಉಡಕ್ಕಿ, ಕಾಣಿಕೆ ಸಲ್ಲಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ದಾವಣಗೆರೆ ಭೇಟಿ ಹಿನ್ನೆಲೆಯಲ್ಲಿ ಕೆಲವಾರು ಕಡೆ ಮುಕ್ತ ಸಂಚಾರಕ್ಕೆ ಅವಕಾಶ ಇಲ್ಲದ  ಕಾರಣ ಭಕ್ತಾದಿಗಳು ಸ್ವಲ್ಪ ತೊಂದರೆಯನ್ನೂ
ಅನುಭವಿಸುವಂತಾಯಿತು. ದುಗ್ಗಮ್ಮನ ದೇವಸ್ಥಾನದ ಸುತ್ತಮುತ್ತವೂ ಸಂಚಾರದ ನಿರ್ಬಂಧವೂ ಕಿರಿಕಿರಿಗೆ ಕಾರಣವಾಗಿತ್ತು.

ಹೊತ್ತೇರುತ್ತಿದ್ದಂತೆ ಹೆಚ್ಚಾದ ಬಿರು ಬಿಸಿಲು, ಬೇಗೆ, ಜನಸಂದಣಿ…ಹೀಗೆ ಏನೇ ಇದ್ದರೂ ಸಾವಿರಾರು ಸಂಖ್ಯೆಯಲ್ಲಿನ ಭಕ್ತಾದಿಗಳು ಆರಾಧ್ಯ ದೇವಿಯ ದರ್ಶನ ಮಾಡುವ ಮೂಲಕ ಧನ್ಯಭಾವದಲ್ಲಿ ಮುಳುಗಿದರು. ಏನೇ ಆದರೂ ನಮ್ಮವ್ವ ದುರ್ಗವ್ವ ಕೈ ಬಿಡೊಲ್ಲ…ಎನ್ನುತ್ತಲೇ ತಮಗೆ ಬೇಗ ದೇವಿಯ ದರ್ಶನವಾಗಿದ್ದು, ದೇವಸ್ಥಾನಕ್ಕೆ ಬರುವಾಗ ಆದಂತಹ ಕೆಲವಾರು ಸಮಸ್ಯೆ ಹಂಚಿಕೊಳ್ಳುತ್ತಲೇ ಮನೆಗೆ ತೆರಳುತ್ತಿದ್ದುದು ಸಾಮಾನ್ಯವಾಗಿತ್ತು. ದುಗ್ಗಮ್ಮನ ದೇವಸ್ಥಾನದ ಸುತ್ತಲೂ ಭಕ್ತಿಯ ಲೋಕವೇ ನಿರ್ಮಾಣವಾಗಿತ್ತು. ತಮ್ಮ ತಮ್ಮ ರೂಢಿ ಸಂಪ್ರದಾಯದಂತೆ ಹಬ್ಬದ ಆಚರಣೆ, ದೇವಿಯ ದರ್ಶನ, ಹರಕೆ ತೀರಿಸುವ ಪದ್ಧತಿ… ಸೋಜಿಗ ಉಂಟು ಮಾಡುವಂತಿತ್ತು. ರಾಜ್ಯದ ನಾನಾ ಮೂಲೆಗಳಿಂದ ಬಂದಿದ್ದ ಅಸಂಖ್ಯಾತ ಭಕ್ತರು ಪುಳಕಿತಗೊಂಡರು.
ಮಂಗಳವಾರ ಬೆಳಗ್ಗೆ ದಾಸೋಹದ ಮಹೋಪಕರಣ ಸಮಾರಂಭ ನಡೆಯಿತು.

ಕುರಿಗಳ ಖರೀದಿ ಜೋರು..
ದುಗ್ಗಮ್ಮನ ಜಾತ್ರೆ ಅತೀ ಮುಖ್ಯ ಘಟ್ಟ ಮಾಂಸದೂಟಕ್ಕೆ ಮಂಗಳವಾರವೂ ಕುರಿ ಖರೀದಿ ಭರ್ಜರಿಯಾಗಿಯೇ ಇತ್ತು. ಮಂಗಳವಾರ
ಹರಿಹರದಲ್ಲಿ ನಡೆಯುವ ಕುರಿ ಸಂತೆ, ಹರಪನಹಳ್ಳಿ, ಸುತ್ತಮುತ್ತಲ ಗ್ರಾಮಗಳಿಗೆ ತೆರಳಿ ಕುರಿ ಖರೀದಿಸಿದರು. ಬುಧವಾರದಿಂದ ಬಾಡೂಟಕ್ಕೆ ಅನುಕೂಲವಾಗುವಂತೆ ಮನೆ, ಸುತ್ತಮುತ್ತಲಿನ ಖಾಲಿ ಜಾಗದಲ್ಲಿ ಶಾಮಿಯಾನ ಇತರೆ ವ್ಯವಸ್ಥೆ ಕಂಡು ಬಂದಿತು. ಬಾಡೂಟಕ್ಕಾಗಿ ಬೇಕಾದ ಮಸಾಲೆ, ತರಕಾರಿ, ಹೂವು ಹಣ್ಣು ಖರೀದಿಗೆ ಕೆ.ಆರ್‌. ಮಾರ್ಕೆಟ್‌, ಗಡಿಯಾರ ಕಂಬ, ವಿಜಯಲಕ್ಷ್ಮಿರಸ್ತೆ,
ಜಿಲ್ಲಾಧಿಕಾರಿ ಹಳೇ ಕಚೇರಿ ಸುತ್ತಮುತ್ತಲು ಜನಸಂದಣಿ ಕಂಡು ಬಂದಿತು 

ವಿನೋಬ ನಗರದಲ್ಲೂ ಸಂಭ್ರಮ…
ದುಗ್ಗಮ್ಮನ ಜಾತ್ರೆಯ ಜೊತೆಗೆ ನಡೆಯುವ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಿನೋಬ ನಗರದಲ್ಲಿ ಸಂಭ್ರಮದ ವಾತಾವರಣ ಕಂಡು ಬಂದಿತು. 10ನೇ ಕ್ರಾಸ್‌ನಲ್ಲಿರುವ ದೇವಸ್ಥಾನಕ್ಕೆ ಬೆಳಗ್ಗೆಯಿಂದಲೇ ಸಾವಿರಾರು ಜನರು ಆಗಮಿಸಿ, ದೇವಿಗೆ ವಿಶೇಷ ಪೂಜೆ, ಹರಕೆ ಸಲ್ಲಿಸಿದರು. ಒಂದು ಕಡೆ ನಗರ ದೇವತೆ, ಇನ್ನೊಂದು ಕಡೆ ಮನೆಯ ಹತ್ತಿರ ದೇವಿಯ ಜಾತ್ರೆ. ಹೀಗಾಗಿ ವಿನೋಬ ನಗರದಲ್ಲಿ ಸಂಭ್ರಮವೋ ಸಂಭ್ರಮದ ವಾತಾವರಣ ಇದೆ. 

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.