ಠಾಣೆಗೆ ಕರೆತಂದಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು: ಮೂವರು ಅಮಾನತು
Team Udayavani, Oct 7, 2020, 3:42 PM IST
ದಾವಣಗೆರೆ: ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಡಿ. ಪ್ರಕಾಶ್, ಮುಖ್ಯ ಪೇದೆ ನಾಗರಾಜ್, ಠಾಣೆ ಸೆಂಟ್ರಿ ಶೇರ್ ಅಲಿ ಎಂಬ ಮೂವರನ್ನು ಅಮಾನತುಗೊಳಿಸಲಾಗಿದೆ ಮತ್ತು ಕಸ್ಟೋಡಿಯನ್ ಪ್ರಕರಣದ ಹಿನ್ನೆಲೆಯಲ್ಲಿ ಮೂವರನ್ನೂ ದಸ್ತಗಿರಿ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.
ಮಾಯಕೊಂಡ ಸಮೀಪದ ವಿಠಲಾಪುರದ ಮರುಳಸಿದ್ದಪ್ಪ (46) ಯುವತಿಯೊಂದಿಗೆ ವಿವಾಹವಾಗಿದ್ದಾರೆ. ಹಾಗಾಗಿ ವಿಚಾರಣೆ ನಡೆಸಿ ಎಂದು ಮರುಳಸಿದ್ದಪ್ಪನ ಹೆಂಡತಿ ವೃಂದಮ್ಮ ಅ. 3 ರಂದು ಮಾಯಕೊಂಡ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಅಕ್ಟೋಬರ್ 5 ರಂದು ಮರುಳಸಿದ್ದಪ್ಪನನ್ನು ವಿಚಾರಣೆಗೆ ಕರೆಸಲಾಗಿತ್ತು. ವಿಚಾರಣೆ ನಂತರ ಅವರನ್ನು ಠಾಣೆಯಲ್ಲೇ ಇರಿಸಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.
ಮಂಗಳವಾರ ಮರುಳಸಿದ್ದಪ್ಪ ಬಸ್ ನಿಲ್ದಾಣ ಬಳಿ ಶವವಾಗಿ ಪತ್ತೆಯಾಗಿದ್ದು, ಕುಟುಂಬದ ಸದಸ್ಯರು ಲಾಕಪ್ ಡೆತ್ ಎಂದು ಆರೋಪಿಸಿ ಠಾಣೆ ಎದುರು ಹೋರಾಟ ನಡೆಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಘಟನೆಗೆ ಸಂಬಂಧಿಸಿದಂತೆ ಪಿಎಸ್ ಐ, ಮುಖ್ಯ ಪೇದೆ, ಸೆಂಟ್ರಿಯನ್ನು ಅಮಾನತು ಗೊಳಿಸಿದ್ದರು.
ಪ್ರಕರಣದ ತನಿಖಾಧಿಕಾರಿ ಗ್ರಾಮಾಂತರ ಡಿವೈಎಸ್ಪಿ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆ ದಾವಣಗೆರೆಯ ಜಿಲ್ಲಾ ಆಸ್ಪತ್ರೆಯ ಶವಾಗಾರದ ಮುಂದೆ ಮರುಳಸಿದ್ದಪ್ಪ ನ ಕುಟುಂಬದವರು ಸೂಕ್ತ ಕ್ರಮ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ 4.25 ಲಕ್ಷದ ಚೆಕ್ ವಿತರಿಸಿದರು. ಎಸ್.ಸಿ. ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಅರ್ಧ ಮೊತ್ತದ ಪರಿಹಾರದ ಚೆಕ್ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ದೊರೆತ ಬಳಿಕ ಇನ್ನುಳಿದ ಮೊತ್ತದ ಚೆಕ್ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಕೋರಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್