ದಾವಣಗೆರೆ: ಅನಗತ್ಯವಾಗಿ ಓಡಾಡುವವರಿಗೆ ದಂಡ ವಿಧಿಸಿದ ತಹಶೀಲ್ದಾರ್
Team Udayavani, May 10, 2021, 2:11 PM IST
ದಾವಣಗೆರೆ: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಸೋಮವಾರದಿಂದ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸ್ವತಃ ತಹಶೀಲ್ದಾರ್ ಬಿ.ಎನ್. ಗಿರೀಶ್ ರಸ್ತೆಗೆ ಇಳಿದಿದ್ದು, ಅನವಶ್ಯಕವಾಗಿ ಓಡಾಡುತ್ತಿದ್ದ ಜನರಿಗೆ ದಂಡವನ್ನು ವಿಧಿಸುವ ಕೆಲಸ ಮಾಡಿದರು.
ಜಯದೇವ ಸರ್ಕಲ್ನಲ್ಲಿ ತಪಾಸಣೆ ನಡೆಸುತ್ತಿದ್ದು, ಪೊಲೀಸರು ಹಾಗೂ ಮೇಯರ್ ಎಸ್.ಟಿ. ವೀರೇಶ್ ಸಹ ಸಾಥ್ ನೀಡಿದರು. 10 ಗಂಟೆ ನಂತರ ಓಡಾಡುವ ವಾಹನಗಳನ್ನು ತಡೆದು ತಪಾಸಣೆ ನಡೆಸಿ ದಂಡ ವಿಧಿಸಿದರು. ಅಲ್ಲದೆ ಸಾಕಷ್ಟು ಬೈಕ್ ಗಳನ್ನು ಈಗಾಗಲೇ ಸೀಜ್ ಮಾಡಿ ದಂಡ ವಸೂಲಿ ಮಾಡಲಾಗಿದೆ. ಮೊದಲ ದಿನ ಜನ ಓಡಾಡುತ್ತಾರೆ ನಾಳೆಯಿಂದ ಕಡಿಮೆಯಾಗಬಹುದು ಎಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು.
ಇದನ್ನೂ ಓದಿ:ಕೋವಿಡ್ಗೆ ಪತಿ-ಪತ್ನಿ ಬಲಿ: ಅನಾಥವಾಯ್ತು ಐದು ವರ್ಷದ ಹೆಣ್ಣುಮಗು
ದಾವಣಗೆರೆಯ ಬಹುತೇಕ ಕಡೆ ಅಂಗಡಿ, ವಾಣಿಜ್ಯ ಸಂಕೀರ್ಣ ಮುಚ್ಚಿದ್ದವು. ಅಗತ್ಯ ಕೆಲಸದ ಹಿನ್ನೆಲೆಯಲ್ಲಿ ಬೈಕ್, ಆಟೋರಿಕ್ಷಾ, ಕಾರುಗಳಲ್ಲಿ ಸಂಚರಿಸುವುದು ಕಂಡು ಬಂದಿತು. ಬೆಳಗ್ಗೆಯಿಂದ 15 ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ