ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ
Team Udayavani, Jul 10, 2021, 2:14 PM IST
ಜಗಳೂರು: ನಿಯಮ ಬಾಹಿರವಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಆದೇಶ ನೀಡಿರುವ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅಂಗಡಿ ಪರವಾನಗಿ ರದ್ದುಗೊಳಿಸಿ ಹೊಸ ನೇಮಕಾತಿ ಮಾಡಬೇಕು ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಡಿ.ಎಸ್.ಎಸ್ ಸಂಚಾಲಕಮಲೆಮಾಚಿಕೆರೆ ಸತೀಶ್ ಮಾತನಾಡಿ, ಹೊಸಕೆರೆ ಗ್ರಾಮದಲ್ಲಿ ಇತ್ತೀಚೆಗೆ ನೂತನ ನ್ಯಾಯಬೆಲೆ ಅಂಗಡಿ ತೆರೆಯಲು ಪರವಾನಗಿ ನೀಡಿದ್ದು, ನ್ಯಾಯಬೆಲೆ ಅಂಗಡಿ ನಿರ್ವಹಣೆಗೆ ಸಂಬಂಧಿಸಿದಂತೆ ಸಿಬ್ಬಂದಿ ನೇಮಕಾತಿಯಲ್ಲಿ ಅಂಗವಿಕಲರ ಮೀಸಲಾತಿಯಲ್ಲಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಅರ್ಹತೆ ಇಲ್ಲದವರನ್ನು ನಿಯಮ ಬಾಹಿರವಾಗಿ ನೇಮಕ ಮಾಡಿದ್ದು, ಕೂಡಲೇ ಈ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ನ್ಯಾಯಬೆಲೆ ಅಂಗಡಿ ಪರವಾನಗಿ ಕೋರಿ ಒಟ್ಟು 12 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಐವರು ಅಂಗವಿಕಲರು ಇದ್ದಾರೆ. ಇವರ ಪೈಕಿ ಅರ್ಹತೆ ಇರುವವರ ಅರ್ಜಿ ಪರಿಗಣಿಸದೆ ಅರ್ಹತೆ ಇಲ್ಲದವರ ಅರ್ಜಿ ಮಾನ್ಯ ಮಾಡಲಾಗಿದೆ. ಸೂಕ್ತ ಗೋದಾಮು ಮತ್ತು ಅಗತ್ಯ ಸಂಗ್ರಹ ಸ್ಥಳ ಪರಿಶೀಲನೆ ಮಾಡದೆ ಅಧಿಕಾರಿಗಳು ಅರ್ಜಿ ಪರಿಗಣಿಸಿರುವುದರ ಹಿಂದೆ ರಾಜಕೀಯ ಒತ್ತಡ ಮತ್ತು ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮೇಲ್ನೊಟಕ್ಕೆ ಕಂಡು ಬರುತ್ತಿದೆ. ಈ ಬಗ್ಗೆ ತಹಶೀಲ್ದಾರರು ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಂಡು ಸೂಕ್ತಅಭ್ಯರ್ಥಿಗೆ ಪರವಾನಗಿ ನೀಡಬೇಕು ಎಂದು ಒತ್ತಾಯಿಸಿದರು
ಡಿ.ಎಸ್.ಎಸ್ ಪದಾಧಿಕಾರಿಗಳಾದ ಹನುಮಂತಪ್ಪ ಕರಿಬಸಪ್ಪ ಹೊಸಕೆರೆ, ರುದ್ರೇಶ್, ಪ್ರವೀಣ, ಸತೀಶ್, ಬಸವರಾಜ, ಮಂಜುನಾಥ, ಮಹಾಂತೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ