ವೃದ್ಧಾಪ್ಯ ವೇತನ ಪಾವತಿಗೆ ಕ್ರಮ ವಹಿಸಿ

•ದಾವಣಗೆರೆ ತಾಪಂ ಸಾಮಾನ್ಯ ಸಭೆ•5-6 ತಿಂಗಳಿಂದ ಬಾಕಿ•ವಾರದಲ್ಲಿ ಪಾವತಿ ಭರವಸೆ

Team Udayavani, Jun 18, 2019, 3:27 PM IST

dg-tdy-5…

ದಾವಣಗೆರೆ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸೋಮವಾರ ಅಧ್ಯಕ್ಷರೊಂದಿಗೆ ಅಧಿಕಾರಿಗಳು, ತಾಲೂಕು ಪಂಚಾಯತಿ ಸದಸ್ಯರು ಚರ್ಚೆ ನಡೆಸಿದ ಸಂದರ್ಭ.

ದಾವಣಗೆರೆ: ತಾಲೂಕಿನಾದ್ಯಂತ ಬಹುತೇಕ ಗ್ರಾಮಗಳಲ್ಲಿ ಕಳೆದ ಐದಾರು ತಿಂಗಳಿಂದ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ಮಾಸಿಕ ವೃದ್ಧಾಪ್ಯ ವೇತನ ಸರಿಯಾಗಿ ತಲುಪಿಲ್ಲ ಎಂದು ತಾಲೂಕು ಪಂಚಾಯತಿ ಬಹುತೇಕ ಸದಸ್ಯರು ಸೋಮವಾರ ನಡೆದ ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಆರೋಪಿಸಿದರು.

ಅಧಿಕಾರಿಗಳು ವೃದ್ಧಾಪ್ಯ ವೇತನ ವಿಳಂಬಕ್ಕೆ ಚುನಾವಣೆ ನೀತಿ ಸಂಹಿತೆ ನೆಪ ಹೇಳಿ ಜನರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಚುನಾವಣೆ ಮುಗಿದು 25ದಿನಗಳು ಕಳೆದಿವೆ. ಸರ್ಕಾರದಿಂದ ವೇತನ ಬಿಡುಗಡೆ ಆಗುತ್ತಿದೆ. ಇಷ್ಟಾದರೂ ಯಾವೊಬ್ಬ ಪಿಡಿಒ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡುತ್ತಿಲ್ಲ. ಜನರ ಸಮಸ್ಯೆ ಆಲಿಸುತ್ತಿಲ್ಲ ಎಂದು ಸದಸ್ಯ ಹನುಮಂತಪ್ಪ ದೂರಿದರು.

ನಂತರ ತಾಲೂಕು ಪಂಚಾಯತಿ ಸದಸ್ಯ ಸಂಗಜ್ಜನಗೌಡ ಮಧ್ಯಪ್ರವೇಶಿಸಿ, ದೇವರು ವರ ಕೊಟ್ಟರೂ ಪೂಜಾರಿ ವರ ಕೊಡುತ್ತಿಲ್ಲ ಅನ್ನುವ ಹಾಗೆ ವೃದ್ಧರಿಗೆ ಬ್ಯಾಂಕ್‌ ಖಾತೆಗೆ ವೇತನ ಜಮೆ ಆಗುತ್ತಿಲ್ಲ. ಗ್ರಾಮೀಣ ಜನರು ಅನಕ್ಷರಸ್ಥರಿರುತ್ತಾರೆ. ಹಾಗಾಗಿ ಅವರಿಗೆ ಸರಿಯಾಗಿ ಸರ್ಕಾರದ ಸೌಲಭ್ಯ ತಲುಪುತ್ತಿಲ್ಲ. ಬರಿ ತಿಂಗಳುಗಟ್ಟಲೇ ಅಲೆದಾಡಿಸುತ್ತಾರೆ. ಮಧ್ಯವರ್ತಿಗಳ ಮೂಲಕ ಬೇಗ ಆಗುತ್ತಿರುವ ಕೆಲಸ ಸಾಮಾನ್ಯವಾಗಿ ಆಗುತ್ತಿಲ್ಲ ಎಂದು ಧ್ವನಿಗೂಡಿಸಿದರು.

ನಂತರ ಕಂದಾಯ ಇಲಾಖೆ ಶಿರಸ್ತೇದಾರ್‌ಜಗನ್ನಾಥ್‌ ಮಾತನಾಡಿ, ಕೈದಾಳೆ ಗ್ರಾಮವನ್ನು ಕಂದಾಯ ಗ್ರಾಮವಾಗಿ ಮಾಡಲಾಗಿದೆ. ಕೋಲ್ಕುಂಟೆ ಗ್ರಾಮವನ್ನು ಒಂದು ವಾರದಲ್ಲಿ ಕಂದಾಯ ಗ್ರಾಮಕ್ಕೆ ಮಾರ್ಪಾಡು ಮಾಡಲಾಗುವುದು ಎಂದರಲ್ಲದೇ, ವೃದ್ಧಾಪ್ಯ ವೇತನವನ್ನು ವಾರದೊಳಗೆ ಎಲ್ಲಾ ಫಲಾನುಭವಿಗಳಿಗೂ ತಲುಪುವಂತೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಂತೆ, ತಾಲೂಕು ಪಂಚಾಯತಿ ಪ್ರಭಾರ ಇಒ ರೇವಣಸಿದ್ದನಗೌಡ ಮಾತನಾಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಿಒಗಳೊಂದಿಗೆ ಸಭೆ ನಡೆಸಿ ನೇರ ಬ್ಯಾಂಕ್‌ ಖಾತೆಗೆ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮತ್ತೋರ್ವ ತಾಲೂಕು ಪಂಚಾಯತಿ ಸದಸ್ಯ ಆಲೂರು ಲಿಂಗರಾಜ್‌ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲಮನ್ನಾ ಆದ ರೈತರಿಗೆ ಹೊಸ ಸಾಲ ನೀಡುವಾಗ ವೃದ್ಧಾಪ್ಯ ವೇತನದಲ್ಲಿ ಕಡಿತ ಮಾಡಿಕೊಳ್ಳಲಾಗುವುದು ಎಂದು ಹೇಳುತ್ತಿದ್ದಾರೆ. ಇದಕ್ಕೆ ಅಧಿಕಾರಿ ಪ್ರತಿಕ್ರಿಯಿಸಿ ಬ್ಯಾಂಕ್‌ಗಳಲ್ಲಿ ಸಾಲಕ್ಕೆ ವೇತನದ ಹಣ ಕಡಿತ ಮಾಡಿಕೊಳ್ಳುವಂತಿಲ್ಲ. ಅದನ್ನು ಮಾಡುವುದೂ ಇಲ್ಲ. ಮಾಸಾಶನ ತಾನಾಗೇ ಬರುತ್ತದೆ ಎಂದರು.

ಕಾಡಜ್ಜಿ-ಆಲೂರು ಗ್ರಾಮದ ರೂಟ್‌ಗೆ ಬಸ್‌ ವ್ಯವಸ್ಥೆ ಸರಿಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ನಿತ್ಯ ಓಡಾಡಲು ಸಾಕಷ್ಟು ತೊಂದರೆ ಆಗುತ್ತಿದೆ ಎಂದು ತಾಪಂ ಸದಸ್ಯೆ ಆಶಾ ದೂರಿದ್ದಕ್ಕೆ , ಕೆಎಸ್‌ಆರ್‌ಟಿಸಿ ಅಧಿಕಾರಿ ಉತ್ತರಿಸಿ, ಆಲೂರು-ಕಾಡಜ್ಜಿ ಮಧ್ಯೆ ರಸ್ತೆ ಸರಿಯಿಲ್ಲ. ಜೊತೆಗೆ ಎಲ್ಲಾ ಕಡೆ ಖಾಸಗಿ ಆಟೋಗಳು ಹೆಚ್ಚಾಗಿವೆ. ಬಸ್‌ನಲ್ಲಿ ಯಾರೂ ಪ್ರಯಾಣ ಮಾಡಲು ಮುಂದೆ ಬರುತ್ತಿಲ್ಲ. ಹಾಗಾದರೆ ನಾವು ಹೇಗೆ ತಾನೆ ಬಸ್‌ ಬಿಡಬೇಕು ಎಂದು ಪ್ರಶ್ನಿಸಿದರು. ಅದಕ್ಕೆ ಸದಸ್ಯೆ ಆಶಾ ಪ್ರತಿಕ್ರಿಯಿಸಿ, ಈಗ ಎಲ್ಲೆಡೆ ಸಿಸಿ ರಸ್ತೆಯಾಗಿದೆ. ರಸ್ತೆ ಸರಿಯಿಲ್ಲ, ಜನ ಬಸ್‌ಗೆ ಹತ್ತುತ್ತಿಲ್ಲ ಎಂದು ನೆಪ ಹೇಳದೇ ರೂಲ್ಸ್ ಪ್ರಕಾರ ರೂಟ್‌ಗೆ ಬಸ್‌ ಕಳಿಸಿ ಎಂದು ಒತ್ತಾಯಿಸಿದರು.

ಇನ್ನೂ ಜೆ.ಎಚ್. ಪಟೇಲ್ ಬಡಾವಣೆಯಲ್ಲಿ ಎಸ್‌ಸಿ-ಎಸ್‌ಟಿ, ಬಿಸಿಎಂ ಸೇರಿದಂತೆ ಮೂರು ಮಹಿಳಾ ಹಾಸ್ಟೆಲ್ಗಳಿದ್ದು. ಇಲ್ಲಿಗೆ ಕೆಎಸ್‌ಆರ್‌ಟಿಸಿ ಬಸ್‌ ಬರುತ್ತಿಲ್ಲ ಎಂದು ಹಾಸ್ಟೆಲ್ ವಾರ್ಡನ್‌ ಒಬ್ಬರು ಹೇಳಿದ್ದಕ್ಕೆ, ಕಾಲೇಜುಗಳು ರಜೆ ಇದ್ದಿದ್ದಕ್ಕೆ ಈ ಭಾಗಕ್ಕೆ ಬಸ್‌ ಸೇವೆ ನಿಲ್ಲಿಸಲಾಗಿತ್ತು ಎಂದು ಕೆಎಸ್‌ಆರ್‌ಟಿಸಿ ಇಲಾಖೆ ಅಧಿಕಾರಿ ಉತ್ತರಿಸಿದರು. ಕೂಡಲೇ ಇಒ ಮಧ್ಯ ಪ್ರವೇಶಿಸಿ ನಿಮಗೆ ಕಾಲೇಜು ಆರಂಭವಾಗುವ ದಿನಾಂಕ ಗೊತ್ತಾಗುವುದಿಲ್ಲವೇ? ಮೊದಲು ಅಲ್ಲಿಗೆ ಬಸ್‌ ಬಿಡಿ ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಹೋಗುತ್ತಿಲ್ಲ. ಜೊತೆಗೆ ಈ ರಸ್ತೆಯಲ್ಲಿ ಬಹುತೇಕ ಗ್ರಾಮಗಳಿಗೆ ಬಸ್‌ ಸರಿಯಾಗಿ ಹೋಗುತ್ತಿಲ್ಲ ಎಂದು ಕೆಲ ಸದಸ್ಯರು ದೂರಿದ್ದಕ್ಕೆ, ದಾವಣಗೆರೆ ವಿಶ್ವವಿದ್ಯಾನಿಲಯ ರಸ್ತೆಯಲ್ಲಿ ಫ್ಲೈ ಓವರ್‌ ಆಗುತ್ತಿದೆ. ರಸ್ತೆ ಕಿರಿದಾಗಿದೆ. ಹಾಗಾಗಿ ದೊಡ್ಡ ಬಸ್‌ಗೆ ಕ್ಯಾಂಪಸ್‌ಗೆ ಹೋಗಲು ತೊಂದರೆ ಆಗುತ್ತಿದೆ ಎಂದು ಅಧಿಕಾರಿ ಉತ್ತರಿಸಿದರು.

ಅದಕ್ಕೆ ಉಪಾಧ್ಯಕ್ಷ ಎಚ್.ಆರ್‌. ಮರುಳಸಿದ್ದಪ್ಪ ಮಾತನಾಡಿ, ಆ ರಸ್ತೆಯಲ್ಲಿ ಹತ್ತು ಚಕ್ರದ ದೊಡ್ಡ ವಾಹನಗಳು ಸಂಚರಿಸುತ್ತಿವೆ. ನಿಮ್ಮ ವಾಹನಗಳು ಮಾತ್ರ ಹೋಗುತ್ತಿಲ್ಲವೆ? ದೊಡ್ಡ ಬಸ್‌ ಹೋಗಲು ಸಾಧ್ಯವಾಗದ ಬಳಿಕ ಮಿನಿ ಬಸ್‌ ಬಿಟ್ಟು ಸರಿಯಾದ ಸಾರಿಗೆ ವ್ಯವಸ್ಥೆ ಕಲ್ಪಿಸಿ ಎಂದಾಗ, ಬಸ್‌ ದಾವಣಗೆರೆ ವಿಶ್ವವಿದ್ಯಾನಿಲಯ ಕ್ಯಾಂಪಸ್‌ ತಲುಪುವುದು ಸೇರಿದಂತೆ ಯಾವ ಯಾವ ಗ್ರಾಮಗಳಿಗೆ ಬಸ್‌ ಸಂಪರ್ಕ ತೊಂದರೆ ಇದೆಯೋ ಅದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು.

ಸಭೆಯ ಆರಂಭಕ್ಕೂ ಮುನ್ನ ನಾಟಕಕಾರ ಗಿರೀಶ್‌ ಕಾರ್ನಾಡ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ನಂತರ ತೋಟಗಾರಿಕೆ ಇಲಾಖೆ, ಆಹಾರ ಇಲಾಖೆ, ರೇಷ್ಮೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಮಾಹಿತಿ ನೀಡಿದರು.

ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌, ತಾಲೂಕು ಪಂಚಾಯತಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾಗರಾಜ್‌ ಸೇರಿದಂತೆ ತಾಲೂಕು ಪಂಚಾಯತಿಯ ಎಲ್ಲಾ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.