ಶಾಲಾ ಕಾಲೇಜು ಪ್ರಾರಂಭಿಸುವ ಮೊದಲು ಸಂಪುಟದ ಸಲಹೆ ಪಡೆಯಲಿ: ಧ್ರುವನಾರಾಯಣ
Team Udayavani, Sep 29, 2020, 3:31 PM IST
ದಾವಣಗೆರೆ: ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಶಾಲಾ ಕಾಲೇಜು ಪ್ರಾರಂಭಿಸುವ ಕುರಿತಾಗಿ ಶಿಕ್ಷಣ ಸಚಿವರು ಮೊದಲು ಸಂಪುಟದ ಸಲಹೆ ಪಡೆಯಲಿ ಎಂದು ಕೆಪಿಸಿಸಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಧ್ರುವನಾರಾಯಣ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವ್ಯಾಪಿಸುವಿಕೆ ಹಿನ್ನೆಲೆಯಲ್ಲಿ ಸಂಸತ್ ಹಾಗೂ ವಿಧಾನ ಮಂಡಲದ ಅಧಿವೇಶನಗಳನ್ನು ಮೊಟಕು ಗೊಳಿಸಲಾಗಿದೆ. ಸಂಸದರು, ಶಾಸಕರಿಗೆ ಒಂದು ನ್ಯಾಯ. ವಿದ್ಯಾರ್ಥಿಗಳಿಗೆ ಮತ್ತೊಂದು ನ್ಯಾಯದ ದ್ವಂದ್ವ ಏಕೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ: ಅ.28ರಂದು ಚುನಾವಣೆ
ದೇಶದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಆತ್ಮನಿರ್ಭರ ಎಂಬುದು ಆತ್ಮಹತ್ಯೆಯ ಭಾರತ ನಿರ್ಮಾಣ ಎನ್ನುವಂತಾಗಿದೆ. ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಆತ್ಮನಿರ್ಭರ ಯೋಜನೆಯಡಿ 20 ಲಕ್ಷ ಕೋಟಿ ಪ್ಯಾಕೇಜ್ ನಿಂದ ಶೇ. 1 ಪ್ರಮಾಣದ ಜನರಿಗೆ ಮಾತ್ರ ನೇರವಾದ ಪ್ರಯೋಜನ ದೊರೆತಿದೆ. ಅಮೆರಿಕಾ ಶೇ. 20, ಜಪಾನ್ ಶೇ. 7 ರಷ್ಟು ಪ್ರಮಾಣದಲ್ಲಿ ಜನರಿಗೆ ನೇರ ನೆರವು ನೀಡಿವೆ. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜಿಡಿಪಿ ಮೈನಸ್ 23.9 ತಲುಪಿದೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ದೂರಿದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ