ನಕಲಿ ವೈದ್ಯರ ಪತ್ತೆಗೆ ತಂಡ

•ಡಿಸಿ ಜನಸ್ಪಂದನ•16ಕ್ಕೂ ಹೆಚ್ಚು ಅರ್ಜಿ•ಸಮಸ್ಯೆಗಳ ಪರಿಹಾರದ ಭರವಸೆ

Team Udayavani, Sep 17, 2019, 10:17 AM IST

dg-tdy-1

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಜನಸ್ಪಂದನ ನಡೆಯಿತು.

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಅಧಿಕಾರ ವಹಿಸಿಕೊಂಡ ನಂತರ ಸೋಮವಾರ ನಡೆಸಿದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ 16ಕ್ಕೂ ಹೆಚ್ಚು ಅರ್ಜಿದಾರರಿಗೆ ಸಮಸ್ಯೆ, ಬೇಡಿಕೆ ಬಗೆಹರಿಸುವ ಭರಪೂರ ವಿಶ್ವಾಸ ತುಂಬುವ ಮೂಲಕ ಸೂಕ್ತವಾಗಿ ಸ್ಪಂದಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಇದೆ. ಹೋಮಿಯೋಪಥಿ ಹೆಸರಲ್ಲಿ ನೋಂದಣಿಯಾದ ಕೆಲ ಆಸ್ಪತ್ರೆಯಲ್ಲಿ ಅಲೋಪಥಿ ಚಿಕಿತ್ಸೆ ನೀಡಲಾಗುತ್ತಿದೆ, ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಎಂ.ಜಿ. ಶ್ರೀಕಾಂತ್‌ ದೂರಿದರು.

ನಕಲಿ ವೈದ್ಯರ ಪತ್ತೆಗಾಗಿ ಅಧಿಕಾರಿಗಳ ತಂಡ ರಚನೆ ಮಾಡಲಾಗುವುದು. ದಾವಣಗೆರೆ ನಗರ ನಂತರ ತಾಲೂಕು ಕೇಂದ್ರಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಎಲ್ಲಾ ಅಧಿಕಾರಿಗಳ ಕಣ್ಮುಂದೆ ಎಲ್ಲವೂ ನಡೆಯುತ್ತಿದೆಯಾದರೂ ಯಾವುದೇ ಕ್ರಮವಾಗುತ್ತಿಲ್ಲ ಎಂದು ಶ್ರೀಕಾಂತ್‌ ಹೇಳಿದಾಗ, ಹೌದು ಮಾರಾಯ ಈಗ ನಾನು ಬಂದಿದಿನೀ.. ಸಮಯಾವಕಾಶ ಬೇಕು ಅಲ್ವ. ಖಂಡಿತವಾಗಿಯೂ ನಕಲಿ ವೈದ್ಯರ ಹಾವಳಿ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಹರಿಹರದ ಅಮರಾವತಿ- ಜೈ ಭೀಮ ನಗರ ಮಧ್ಯೆ ಸಾರ್ವಜನಿಕ ರಸ್ತೆಗೆ ಅಡ್ಡಲಾಗಿ ಕಟ್ಟಲಾಗಿರುವ ಕಟ್ಟಡ ತೆರವು ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ನ್ಯಾಯಾಲಯದಲ್ಲಿನ ಅಮೀನ್‌ ಒಬ್ಬರು ಮನವಿ ಸಲ್ಲಿಸಿದರು. ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗೆ ಸೂಚಿಸಿದರು.

ಹಳೆ ಪಿಬಿ ರಸ್ತೆ ಅಗಲೀಕರಣದ ನಂತರ ಒಳ ಚರಂಡಿ ವ್ಯವಸ್ಥೆ ಇಲ್ಲದೆ ಆಗುತ್ತಿರುವ ತೊಂದರೆ ನಿವಾರಿಸುವಂತೆ ವರ್ತಕರು, ಉದ್ದಿಮೆದಾರರು ಮನವಿ ಮಾಡಿದರು. ಒಳ ಚರಂಡಿ ವ್ಯವಸ್ಥೆಗೆ ಸಾಕಷ್ಟು ಅನುದಾನ ಬೇಕಾಗುತ್ತದೆ. ಎಲ್ಲಾ ಜನಪ್ರತಿನಿಧಿಗಳ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನಗರ ಪ್ರದೇಶದ ಹೊರಭಾಗದಲ್ಲಿರುವ ಶ್ರೀರಾಮ ನಗರ, ಎಸ್‌ಒಜಿ ಕಾಲೋನಿಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸುತ್ತಲೇ ಬರಲಾಗುತ್ತಿದೆ. ಕೆ. ಶಿವರಾಮು ನಂತರ ಯಾವುದೇ ಜಿಲ್ಲಾಧಿಕಾರಿ ಅಲ್ಲಿಗೆ ಭೇಟಿ ನೀಡಿಲ್ಲ, ಸ್ಮಶಾನ ಒಳಗೊಂಡಂತೆ ಅನೇಕ ಕಡೆ ಬೀದಿ ದೀಪದ ವ್ಯವಸ್ಥೆಯೇ ಇಲ್ಲ . ಮಠಾಧೀಶರ ನೇತೃತ್ವದಲ್ಲಿ ಭಿಕ್ಷಾಟನೆ ಮಾಡಿ, ಮೂಲಭೂತ ಸೌಲಭ್ಯ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ. ನಗರಪಾಲಿಕೆಯ ಕೇಸ್‌ ವರ್ಕರ್‌ ಬರೀ ದುಡ್ಡು… ದುಡ್ಡು ಎನ್ನುತ್ತಾರೆ. ಕೂಡಲೇ ಬದಲಾವಣೆ ಮಾಡಬೇಕು ಎಂದು ತಿಮ್ಮಣ್ಣ ಇತರರು ಮನವಿ ಮಾಡಿದರು. ಎಸ್‌ಒಜಿ ಕಾಲೋನಿಗೆ ಭೇಟಿ ನೀಡುವ ಜೊತೆಗೆ ಮೂಲಭೂತ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮದ ಕೆ.ಹನುಮಂತಪ್ಪ ಎಂಬುವವರು ಹರಲಿಪುರ ಕೆನರಾ ಬ್ಯಾಂಕ್‌ನಲ್ಲಿ ಚಿನ್ನಾಭರಣ ಮತ್ತು ಬೆಳೆ ಸಾಲ ತೆಗೆದುಕೊಂಡಿದ್ದು, ಬೆಳೆಸಾಲ ಮನ್ನಾ ಆಗಿರುವುದಿಲ್ಲ. ಚಿನ್ನಾಭರಣದ ಸಾಲದ ಮೊತ್ತ ಕಟ್ಟುವುದಾಗಿ ತಿಳಿಸಿದರೂ ಸಹ ಬ್ಯಾಂಕ್‌ನವರು ಚಿನ್ನಾಭರಣ ನೀಡುತ್ತಿಲ್ಲ. ಸದ್ಯದಲ್ಲೆ ಮನೆಯಲ್ಲಿ ಮದುವೆ ಕಾರ್ಯವಿದ್ದು, ಚಿನ್ನಾಭರಣ ಬಿಡಿಸಿಕೊಡಬೇಕು ಎಂದು ಮನವಿ ಮಾಡಿದರು.

ದಾವಣಗೆರೆಯ ಬಾಷಾನಗರದ ಅಸಾದುಲ್ಲ ಎಂಬುವರು ಆಶ್ರಯ ಮನೆಗೆ ಅರ್ಜಿ ಸಲ್ಲಿಸಿದರು. ತಮಗೆ ಸೇರಿದ ಜಾಗದಲ್ಲಿ ಬೀರಲಿಂಗೇಶ್ವರ ದೇವಸ್ಥಾನದವರು ಅಕ್ರಮವಾಗಿ ಮಳಿಗೆ ಕಟ್ಟಿ, ದಿನಕ್ಕೆ 40 ಸಾವಿರ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ, ಬೆಳವನೂರು ಬಳಿ ಹಳ್ಳದ ಅಳತೆ, ಮಲ್ಲಿಕಾರ್ಜುನ ಇಂಗಳೇಶ್ವರ್‌, ಎಂಸಿಸಿ ಎ ಬ್ಲಾಕ್‌ನಲ್ಲಿ ಅಕ್ರಮ ಕಟ್ಟಡ ತೆರವು, ಕೆ.ಟಿ. ಗೋಪಾಲಗೌಡ್ರು, ತುಂಗಭದ್ರಾ ಬಡಾವಣೆಗೆ ನಗರ ಸಾರಿಗೆ ಬಸ್‌, ಬೀದಿ ದೀಪ ಸೌಲಭ್ಯಕ್ಕೆ ಇತರರು ಮನವಿ ಸಲ್ಲಿಸಿದರು.

ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ನಗರಪಾಲಿಕೆ ಆಯುಕ್ತ ಮಂಜುನಾಥ್‌ ಆರ್‌. ಬಳ್ಳಾರಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಜಿ. ನಜ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯ್‌ಕುಮಾರ್‌, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶಿವಾನಂದ ಕುಂಬಾರ್‌ ಇತರರು ಇದ್ದರು.

ಗಂಭೀರ ಆರೋಪ:

ಇ-ಸ್ವತ್ತು ದಾಖಲೆ ನೀಡಲು ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮ ಪಂಚಾಯತಿ ಕಾರ್ಯದರ್ಶಿ, ಒಂದು ದಿನದ ಮಟ್ಟಿಗೆ ನಾನು ಹೇಳಿದಂತೆ ಕೇಳಬೇಕು ಎನ್ನುತ್ತಾರೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದರು. ಕೆಲ ಸಮಯದ ನಂತರ ಸಭೆಗೆ ಆಗಮಿಸಿದ ಕಾರ್ಯದರ್ಶಿ ವಿರುದ್ಧ ಕೆಂಡಾಮಂಡಲರಾದ ಜಿಲ್ಲಾಧಿಕಾರಿ, ಸಾರ್ವಜನಿಕರ ಹತ್ತಿರ ಹೇಗೆ ಮಾತನಾಡಬೇಕು ಎಂಬುದು ಗೊತ್ತಿಲ್ಲವೆ. ನಿನ್ನನ್ನು ನೋಡಿದರೆ ಹಾಗೆಯೇ ಅನಿಸುತ್ತದೆ. ನೀನು ಏನಾದರೂ ಆ ರೀತಿ ಹೇಳಿದ್ದು ನಿಜವೇ ಆಗಿದ್ದರೆ ಖಂಡಿತವಾಗಿಯೂ ಕೆಲಸ ಕಳೆದುಕೊಳ್ಳುತ್ತಿಯಾ. ಮುಂದೆ ಎಲ್ಲಿಯೂ ಕೆಲಸ ಸಿಗದಂತೆ ಮಾಡಲಾಗುವುದು. ಕಾನೂನು ಪ್ರಕಾರ ಆ ಮಹಿಳೆಯ ಕೆಲಸ ಮಾಡಿಕೊಡಬೇಕು ಎಂದು ಸೂಚಿಸಿದ ಅವರು ಇಲ್ಲಿ ನಿಲ್ಲಬೇಡ… ಹೊರಗೆ ಹೊರಡು ಎಂದು ಗದರಿದರು.
ಬೈಕ್‌ನಲ್ಲಿ ಸುತ್ತಾಡ್ತೀನಿ:

ಭಾನುವಾರ ದಾವಣಗೆರೆಯ ಅನೇಕ ಭಾಗದಲ್ಲಿ ಬೈಕ್‌ನಲ್ಲೇ ಸುತ್ತಾಡಿದಿನಿ. ಇನ್ನು ಮುಂದೆಯು ಬೈಕ್‌ನಲ್ಲೇ ಓಡಾಡಿ, ಸ್ವಚ್ಛತೆ ಬಗ್ಗೆ ಗಮನ ಹರಿಸುತ್ತೇನೆ. ಕಾರಿನಲ್ಲಿ ಹೋದರೆ ಗನ್‌ಮ್ಯಾನ್‌ ಬೇಕು. ಡಿಸಿ ಬಂದಿದಾರೆ ಎಂದು ಎಲ್ಲರಿಗೂ ಗೊತ್ತಾಗುತ್ತದೆ. ಅದೇ ಬೈಕ್‌ನಲ್ಲಿ ಓಡಾಡಿದರೆ ಯಾರಿಗೂ ಗೊತ್ತಾಗುವುದೇ ಇಲ್ಲ. ನಾನು ನೋಡಿದಂತೆ ದಾವಣಗೆರೆಯ ಅನೇಕ ಭಾಗದಲ್ಲಿ ಸ್ವಚ್ಛತೆಯೇ ಇಲ್ಲ. ಇಂತದ್ದಲ್ಲ ನೋಡೋಕೆ ನಾವು ಇರಬೇಕಾ ಎನಿಸುತ್ತದೆ. ಕೆ.ಬಿ. ಬಡಾವಣೆಯ ಗುಳ್ಳಮ್ಮನ ದೇವಸ್ಥಾನದ ಬಳಿ ಬಹಳ ದಿನದಿಂದ ಕಸ ಇದೆ. ಕೂಡಲೇ ಸ್ವಚ್ಛ ಮಾಡಬೇಕು. ಇಲ್ಲದೇ ಹೋದಲ್ಲಿ ಅನಿವಾರ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರಪಾಲಿಕೆ ಆಯುಕ್ತರಿಗೆ ಎಚ್ಚರಿಕೆ ನೀಡಿದರು.
ದೇಹದಾನಕ್ಕೆ ಸಿದ್ಧ:

ಪ್ರತಿ ಕ್ಷಣ ತೀವ್ರ ಸಂಕಷ್ಟ ಎದುರಿಸುತ್ತಿದ್ದೇನೆ. ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ನನಗೆ ಯಾವ ಸಮಸ್ಯೆ ಇದೆ ಎಂದು ಯಾರೂ ಸಹ ಪತ್ತೆ ಹಚ್ಚುತ್ತಿಲ್ಲ. ನನಗಂತೂ ಬದುಕುವ ಆಸೆಯೇ ಇಲ್ಲ. ಏನಾದರೂ ನನ್ನ ಸಾವಾದರೆ ದೇಹದ ಭಾಗಗಳನ್ನು ಅನಾಥ ಮಕ್ಕಳಿಗೆ ದಾನ ಮಾಡಲೂ ಸಿದ್ಧನಿದ್ದೇನೆ ಎಂದು ದಾವಣಗೆರೆಯ ರಾಜೀವಗಾಂಧಿ ಬಡಾವಣೆಯ ಬಸವರಾಜ್‌ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಎಲ್ಲಾ ರೀತಿಯ ತಪಾಸಣೆ ನಡೆಸಿ, ವರದಿ ನೀಡುವಂತೆ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.