ಆಯಿಲ್‌ಮಿಲ್‌ ಕಟ್ಟಡದಲ್ಲಿ ಪರೀಕ್ಷೆ!


Team Udayavani, Aug 5, 2017, 3:06 PM IST

05-DV-1.jpg

ಜಗಳೂರು: ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಕಟ್ಟಡ ಗುರುತಿಸಬೇಕಾಗಿದ್ದ ಇಲ್ಲಿನ ಐಟಿಐ ಕಾಲೇಜು ಪ್ರಾಂಶುಪಾಲರ ದಿವ್ಯ ನಿರ್ಲಕ್ಷ ದಿಂದಾಗಿ ವಿದ್ಯಾರ್ಥಿಗಳು ಶಿಥಿಲಾವಸ್ಥೆಯ ಆಯಿಲ್‌ಮಿಲ್‌ ಕಟ್ಟಡದಲ್ಲಿ ಪರೀಕ್ಷೆ ಬರೆಯುವಂತಾಗಿದೆ. ಇಲ್ಲಿನ ಮಿನಿವಿಧಾನ ಸೌಧದ ಹಿಂಭಾಗದಲ್ಲಿರುವ ಹಳೆಯ ಕಾಲದ ಆಯಿಲ್‌ಮಿಲ್‌ ಕಟ್ಟಡದ ಕೊಠಡಿಗಳಲ್ಲಿ ಆ.3ರಿಂದ ಆರಂಭವಾಗಿರುವ ಅಖೀಲ ಭಾರತ ವೃತ್ತಿ ಪರೀಕ್ಷೆಗಳನ್ನು ವಿವಿಧ ಐಟಿಐ ಕಾಲೇಜಿನ 230 ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಅವ್ಯವಸ್ಥೆ ಮತ್ತು ಅಸುರಕ್ಷತೆಯಿಂದ ಕೂಡಿರುವ ಪರೀಕ್ಷಾ ಕೇಂದ್ರ, ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಸಹಜವಾಗಿ ಹದಗೆಡಿಸಿದೆ.

ಶೈಕ್ಷಣಿಕ ಭವಿಷ್ಯ ನಿರ್ಧರಿಸುವ ಮಹತ್ವದ ಪರೀಕ್ಷೆಯನ್ನು ಉತ್ತಮ ವಾತಾವರಣದಲ್ಲಿ ಬರೆಯಬೇಕಾಗಿದ್ದ ವಿದ್ಯಾರ್ಥಿಗಳು ಹತ್ತಾರು ಸಮಸ್ಯೆಗಳ ಕಿರಿಕಿರಿ ಅನುಭವಿಸುತ್ತಿದ್ದಾರೆ. ಸೂಕ್ತ ಗಾಳಿ ಇಲ್ಲ, ಬೆಳಕಿಲ್ಲ. ಹಲವು ಕೊಠಡಿಗಳಿಗೆ ಬಾಗಿಲು ಹೊರತುಪಡಿಸಿದರೆ ಕಿಟಕಿಗಳೇ ಇಲ್ಲ. ಒಟ್ಟಾರೆ ಮೂಲ ಸೌಲಭ್ಯಗಳಿಲ್ಲದೇ ವಂಚಿತವಾಗಿದೆ. ಆಗಲೂ ಈಗಲೂ ಬಿದ್ದು ಹೋಗುವ ಶಿಥಿಲಾವಸ್ಥೆಯ ಅವೈಜ್ಞಾನಿಕ ಕಟ್ಟಡದಲ್ಲಿ ಪರೀಕ್ಷೆಗಳನ್ನು ನಡೆಸುತ್ತಿರುವುದಕ್ಕೆ
ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಪರೀಕ್ಷೆ ಆರಂಭದಿಂದ ಮುಕ್ತಾಯವರೆಗೂ ಪರೀಕ್ಷಾ ಕೇಂದ್ರದಲ್ಲಿ ಮೊಕ್ಕಂ ಹೂಡಬೇಕಾಗಿದ್ದ ನಿಯೋಜಿತ ಸ್ಥಾನಿಕ ಪರಿವೀಕ್ಷಕರು ಪರೀಕ್ಷೆಯ ಮಧ್ಯೆದಲ್ಲಿ ತಮ್ಮ ಇಲಾಖಾ ಕಚೇರಿಗೆ ಹೋಗಿ ಬರುತ್ತಿರುವುದು ಪರೀಕ್ಷಾ ಕೇಂದ್ರದಲ್ಲಿ ಹೇಳುವರು ಕೇಳುವರು ಇಲ್ಲದಂತಾಗಿದೆ ಎಂಬ ದೂರು ಕೇಳಿಬರುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ಪೊಲೀಸ್‌ ಸಿಬ್ಬಂದಿ ಕೂಡಾ ಅಲ್ಲಿಲ್ಲ. ಪರೀಕ್ಷಾ ಕೇಂದ್ರಕ್ಕೆ ಯಾರಾದರೂ ಅಪರಿಚಿತರು ಬಂದು ಹೋಗುವುದಕ್ಕೆ ನಿರ್ಬಂಧವಿಲ್ಲ. ಒಟ್ಟಾರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ಗಂಭೀರತೆ ಇಲ್ಲವಾಗಿರುವುದು ದುರಂತವೇ ಸರಿ.

ಪ್ರತಿ ಸಾರಿಯೂ ಇಲ್ಲೇ ಪರೀಕ್ಷೆ..
“ಸೂಕ್ತ ಗಾಳಿ, ಬೆಳಕು, ಇತರೇ ಮೂಲ ಸೌಲಭ್ಯವನ್ನು ಹೊಂದಿರುವ ಕಟ್ಟಡವನ್ನು ಗುರುತಿಸಬೇಕಾದ ಜವಾಬ್ದಾರಿ ಸ್ಥಳೀಯ ಪರೀಕ್ಷಾ ಮಂಡಳಿಯ ಅಧ್ಯಕ್ಷರದು. ಪಟ್ಟಣದಲ್ಲಿ ಸಾಕಷ್ಟು ಸರ್ಕಾರಿ ಅಥವಾ ಖಾಸಗಿ ಶಾಲಾ ಕಟ್ಟಡಗಳಿವೆ. ಅಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಬಹುದಾಗಿತ್ತು. ಆದರೆ ಪ್ರತಿ ಸಾರಿಯೂ ಆಯಿಲ್‌ಮಿಲ್‌ ಕಟ್ಟಡವನ್ನು ಪರೀಕ್ಷಾ ಕೇಂದ್ರಕ್ಕೆ ಆಯ್ಕೆ ಮಾಡಿಕೊಳ್ಳುತ್ತಿರುವ ಇದರ ಹಿಂದಿನ ಮರ್ಮ ಗೊತ್ತಾಗುತ್ತಿಲ್ಲ. ಪ್ರತಿ ಸಾರಿಯೂ ಐಟಿಐ ಪರೀಕ್ಷೆಗಳನ್ನು ಗುಪ್ತವಾಗಿ ನಡೆಸುತ್ತಿದ್ದಾರೆ.
ಮಹಾಲಿಂಗಪ್ಪ, ಎಸ್‌ಎಫ್‌ಐ ಜಿಲ್ಲಾ ಮುಖಂಡ

ಅವ್ಯವಹಾರ ನಡೆದಿಲ್ಲ..
ನಿಯೋಜನೆಯಂತೆ ಪರೀಕ್ಷೆ ಆರಂಭದಿಂದ ಮುಕ್ತಾಯವರೆಗೂ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತೇನೆ ಯಾವುದೇ ಅವ್ಯವಹಾರ ನಡೆದಿಲ್ಲ. ನಡೆಯಲು ಬಿಡುವುದಿಲ್ಲ.
ಈಶ್ವರಚಂದ್‌, ಕ್ಷೇತ್ರಶಿಕ್ಷಣಾದಿಕಾರಿ

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.