ಮುಂದಿನ ಸಾಲಿಗೆ ಈಗಲೇ ಪುಸ್ತಕ ಬೇಡಿಕೆ

­ತಂತ್ರಾಂಶದಲ್ಲಿ ದಾಖಲು ಪ್ರಕ್ರಿಯೆ ಆರಂಭ! ­ಪುಸ್ತಕ ಕೊರತೆ ಇಲ್ಲವೇ ಹೆಚ್ಚುವರಿ ಆಗದಂತೆ ನಿಗಾವಹಿಸಲು ಸೂಚನೆ

Team Udayavani, Mar 10, 2021, 7:29 PM IST

textbook for next yar

ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಡಿದ ಕೊರೊನಾದಿಂದಾಗಿ ಸಂಪೂರ್ಣವಾಗಿ ಶಾಲೆಗಳನ್ನೇ ತೆರೆಯಲಾಗದ ಸಂಕಷ್ಟಕ್ಕೆ ಸಿಲುಕಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ, ಈಗ ಹೊಸ ಭರವಸೆಯೊಂದಿಗೆ ಮುಂದಿನ ಶೈಕ್ಷಣಿಕ ಸಾಲಿಗೆ ಬೇಕಾದ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ ದಿನಚರಿಗಳ ಬೇಡಿಕೆಗಳನ್ನು ಶಾಲೆಗಳಿಂದ ಪಡೆಯುವ ಪ್ರಕ್ರಿಯೆ ಆರಂಭಿಸಿದೆ.

2021-22ನೇ ಸಾಲಿನ ಶೈಕ್ಷಣಿಕ ಸಾಲಿಗೆ ಅಗತ್ಯ ಪಠ್ಯಪುಸ್ತಕದ ಬೇಡಿಕೆಯನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ದಾಖಲಿಸುವ ಪ್ರಕ್ರಿಯೆ ಶಾಲಾ ಹಂತದಿಂದ ಜಿಲ್ಲಾ ಹಂತದವರೆಗೆ ನಡೆದಿದೆ. ಈ ಪ್ರಕ್ರಿಯೆ ಮಾ.3ರಿಂದ ಆರಂಭಗೊಂಡಿದ್ದು ಮಾ.23ವರೆಗೆ ನಡೆಯಲಿದೆ. ಇದಕ್ಕೆ ಪೂರಕವಾಗಿ ಕ್ಲಸ್ಟರ್‌, ಬ್ಲಾಕ್‌ ಮತ್ತು ಜಿಲ್ಲಾ ಹಂತದಿಂದ ಪರಿಶೀಲನೆ ಹಾಗೂ ಅನುಪಾಲನೆ ಚಟುವಟಿಕೆಯೂ ಏಕಕಾಲದಲ್ಲಿ ನಡೆದಿದೆ.

ಪುಸ್ತಕದ ಬೇಡಿಕೆ ಮಂಡಿಸುವ ಹಿನ್ನೆಲೆಯಲ್ಲಿ ಎಸ್‌ ಎಟಿಎಸ್‌ ತಂತ್ರಾಂಶದಲ್ಲಿ ಎಲ್ಲ ಶಾಲೆಗಳನ್ನು  (ಸರ್ಕಾರಿ, ಅನುದಾನಿತ,ಅನುದಾನರಹಿತ ಇತರೆ ಇಲಾಖೆಯಿಂದ ನಡೆಯುವ ಶಾಲೆಗಳು) ದಾಖಲಿಸಿರುವ ಬಗ್ಗೆ ಕ್ಲಸ್ಟರ್‌, ಬ್ಲಾಕ್‌ ಮತ್ತು ಜಿಲ್ಲಾ ಹಂತಗಳಿಂದ ಹಂತ ಹಂತವಾಗಿ ಪರಿಶೀಲಿಸುವ ಕಾರ್ಯವೂ ನಡೆದಿದೆ. ಒಟ್ಟು ಶಾಲೆಗಳ ನಿಖರವಾದ ಮಾಹಿತಿ, ಎಲ್ಲ ವಿಧದ ಶಾಲೆಗಳ ಪಟ್ಟಿ ಸಿದ್ಧಪಡಿಸಿಕೊಂಡ ಬಳಿಕವೇ ಪಠ್ಯಪುಸ್ತಕಗಳ ಬೇಡಿಕೆಯನ್ನು ದಾಖಲಿಸಲು ಕ್ರಮವಹಿಸಲಾಗಿದೆ. ತರಬೇತಿ: ಬೇಡಿಕೆ ಸಲ್ಲಿಸುವ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಸುವ ಉದ್ದೇಶದಿಂದ ಶಾಲೆಗಳ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್‌ ಸಂಪನ್ಮೂಲ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಜತೆಗೆ ಎಸ್‌ ಎಟಿಎಸ್‌ ತಂತ್ರಾಂಶದಲ್ಲಿ ಆಗಿರುವ ಮಾರ್ಪಾಡುಗಳ ಬಗ್ಗೆಯೂ ತಿಳಿವಳಿಕೆ ನೀಡಲಾಗಿದೆ. ಪ್ರಮುಖವಾಗಿ ನಲಿ-ಕಲಿ ಶಾಲೆಗಳು, ಆದರ್ಶ ಶಾಲೆಗಳು, ಕನ್ನಡ ಮಾಧ್ಯಮ ಮತ್ತು ಉರ್ದು ಮಾಧ್ಯಮ ಶಾಲೆಗಳಲ್ಲಿ ಅನುಷ್ಠಾನಗೊಂಡಿರುವ ಆಂಗ್ಲಮಾಧ್ಯಮ ವಿಭಾಗಗಳಿಗೆ ಹೇಗೆ ಪುಸ್ತಕದ ಬೇಡಿಕೆ ಸಲ್ಲಿಸಬೇಕು ಎಂಬ ವಿವರ ಮಾಹಿತಿ ನೀಡಲಾಗಿದೆ.

ವಿವಿಧ ಹಂತಗಳಲ್ಲಿ ಕಾರ್ಯ: ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರು ತರಗತಿವಾರು ಪಠ್ಯಪುಸ್ತಕಗಳ ಬೇಡಿಕೆಯನ್ನು ತಂತ್ರಾಂಶದಲ್ಲಿ ದಾಖಲಿಸುತ್ತಿದ್ದಾರೆ. ಶಾಲಾ ಹಂತದಲ್ಲಿ ದಾಖಲಿಸಿದ ಬೇಡಿಕೆಗೆ ಆಯಾ ಶಾಲಾ ಮುಖ್ಯಶಿಕ್ಷಕರು ಹಾಗೂ ಶಾಲಾ ವ್ಯಾಪ್ತಿಯ ಸಿಆರ್‌ಪಿ ಅವರನ್ನೇ ಜವಾಬ್ದಾರರನ್ನಾಗಿ ಮಾಡಲಾಗಿದ್ದು ಹೆಚ್ಚು ಮುತುವರ್ಜಿಯಿಂದ ಈ ಹಂತದಲ್ಲಿ ಬೇಡಿಕೆ ಸಲ್ಲಿಕೆ ಕಾರ್ಯ ನಡೆಯುತ್ತಿದೆ. ಕ್ಲಸ್ಟರ್‌ ಹಂತದಲ್ಲಿ ನಿಗದಿತ ಅವಧಿಯಲ್ಲಿ ಶಾಲೆಗಳಿಂದ ಬೇಡಿಕೆ ಪಡೆಯುವ, ಬೇಡಿಕೆ ಖಚಿತಪಡಿಸಿಕೊಳ್ಳುವ ಜವಾಬ್ದಾರಿ ವಹಿಸಲಾಗಿದೆ.

ಬ್ಲಾಕ್‌ ಹಂತದಲ್ಲಿ 2020-21ನೇ ಸಾಲಿನಲ್ಲಿ ವಿತರಿಸದೆ ಉಳಿದ ಪುಸ್ತಕಗಳನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ದಾಖಲಿಸುವ, ತನ್ನ ವ್ಯಾಪ್ತಿಯ ಎಲ್ಲ ಶಾಲೆಗಳಲ್ಲಿ ದಾಸ್ತಾನು ಇರುವ ಪುಸ್ತಕಗಳ ಮಾಹಿತಿ  ನಮೂದಿಸುವ ಜವಾಬ್ದಾರಿ ವಹಿಸಲಾಗಿದೆ. ಜಿಲ್ಲಾ ಹಂತದಲ್ಲಿ ಶಾಲೆಗಳು ಪಠ್ಯಪುಸ್ತಕಗಳ ಬೇಡಿಕೆ ದಾಖಲಿಸಲು ಪ್ರಾರಂಭಿಸಿದ ದಿನದಿಂದಶಾಲಾವಾರು, ಕ್ಲಸ್ಟರ್‌ವಾರು, ತಾಲೂಕುವಾರು ಬೇಡಿಕೆಯನ್ನು ನಿಗದಿತ ದಿನಾಂಕದವರೆಗೆ ದಾಖಲಿಸುತ್ತಿರುವ ಬಗ್ಗೆ ಪ್ರತಿ ದಿನ ಉಸ್ತುವಾರಿ ಮಾಡುವ ಹಾಗೂ ಪಠ್ಯಪುಸ್ತಕಗಳ ಬೇಡಿಕೆಯನ್ನು ದಾಖಲಿಸುವ ಕೊನೆಯ ದಿನಾಂಕದವರೆಗೆ ವೇಳಾಪಟ್ಟಿ ಅನುಪಾಲಿಸುವ ಜವಾಬ್ದಾರಿ ನೀಡಲಾಗಿದೆ. ಒಟ್ಟಾರೆ ಹೊಸ ಭರವಸೆಯೊಂದಿಗೆ ಮುಂದಿನ ಶೈಕ್ಷಣಿಕ ಸಾಲಿಗೆ ಬೇಕಾದ ಅಗತ್ಯ ಪಠ್ಯಪುಸ್ತಕಗಳ ಬೇಡಿಕೆಗಳನ್ನು ಪಡೆಯುವ ಪ್ರಕ್ರಿಯೆ ರಾಜ್ಯಾದ್ಯಂತ ಅಚ್ಚುಕಟ್ಟಾಗಿ ನಡೆದಿದೆ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.