ಅಂಬೇಡ್ಕರ್‌-ಬಾಬೂಜಿ ಕೊಡುಗೆ ಅಪಾರ


Team Udayavani, Apr 15, 2021, 5:41 PM IST

ಹಗ್ಹಗಹಗಹ್ಗಹ

ದಾವಣಗೆರೆ: ಭಾರತರತ್ನ, ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಸ್ವಾತಂತ್ರ್ಯ, ಸಮಾನತೆಯನ್ನು ಪ್ರತಿಪಾದಿಸುವುದರೊಂದಿಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದರು ಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.

ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಮಾಜಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಡಾ| ಬಾಬು ಜಗಜೀವನರಾಂರವರ 114ನೇ ಮತ್ತು ಡಾ| ಬಿ.ಆರ್‌. ಅಂಬೇಡ್ಕರ್‌ ರವರ 130ನೇ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್‌ ಮೊದಲ ಬಾರಿ ದೇಶಕ್ಕೆ ಡಾಕ್ಟರೇಟ್‌ ಪದವಿ ತಂದುಕೊಟ್ಟವರು. ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರ ಸ್ಥಾಪಿಸುವಲ್ಲಿ ಮಾರ್ಗದರ್ಶನ ಮಾಡಿದ ಚಿಂತನಕಾರ ಎಂದರು. ಸಂವಿಧಾನದ ಮೂಲಕ ಎಲ್ಲಾ ವರ್ಗದವರಿಗೂ ಸಮಾನತೆ ದೊರಕಿಸಿಕೊಟ್ಟವರು. ಕಾರ್ಮಿಕರ 12 ಗಂಟೆಯ ಕೆಲಸದ ಅವಧಿಯನ್ನು 8 ಗಂಟೆಗೆ ಕಡಿತಗೊಳಿಸಿದರು.

ಗರ್ಭಿಣಿಯರಿಗೆ 3 ತಿಂಗಳ ಹೆರಿಗೆ ರಜೆ ಘೋಷಿಸಿದವರಾಗಿದ್ದಾರೆ. ಒಟ್ಟು 64 ವಿಷಯಗಳಲ್ಲಿ ಪರಿಣಿತರಾಗಿದ್ದರು. ಮಾತ್ರವಲ್ಲ 9 ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ವಾಕ್ಪಟುವೂ ಆಗಿದ್ದರು ಎಂದು ಸ್ಮರಿಸಿದರು.

ಮೇರು ನಾಯಕನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಪ್ರಾದೇಶಿಕ ಸಾರಿಗೆ ಕಚೇರಿ ಬಳಿ ಜಾಗ ಗುರುತಿಸಿದ್ದು ಸಂಘಟನೆಗಳು ಒಪ್ಪಿಕೊಂಡಿದ್ದಾರೆ. ಮೇ ತಿಂಗಳ ಅಂತ್ಯದಲ್ಲಿ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅಪ್ರತಿಮ ಸಂಘಟನಕಾರರು. ಅವರ ಪರಿಶ್ರಮದ ಫಲವಾಗಿ ದೇಶ ಇಂದು ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಗಿದೆ. ಐದು ದಶಕಗಳ ಕಾಲ ಸಂಸದರಾಗಿದ್ದ ಅವರು ಆಹಾರ ಉತ್ಪಾದನೆಯ ಹೆಚ್ಚಳಕ್ಕೆ ಕಾರಣರಾಗಿದ್ದರು.

ಕಾರ್ಮಿಕ, ಕೃಷಿ, ರಕ್ಷಣಾ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು ಎಂದು ಸ್ಮರಿಸಿದರು. ನಿವೃತ್ತ ಪ್ರಾಧ್ಯಾಪಕ ಟಿ. ರಾಜಪ್ಪ ಮಾತನಾಡಿ, ಭಾರತ ರತ್ನ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಮತ್ತು ಹಸಿರು ಕ್ರಾಂತಿ ಹರಿಕಾರ ಡಾ| ಬಾಬು ಜಗಜೀವನರಾಂ ದೇಶದ ಅಪರೂಪದ ವ್ಯಕ್ತಿತ್ವಗಳು. ಅಂಬೇಡ್ಕರ್‌ ಜ್ಞಾನದ ಸಂಕೇತ, ವಿಶ್ವಕೋಶ, ಪರ್ವತ, ಸಾಗರ, ಸರೋವರ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಬೇಡ್ಕರ್‌ ಹೆಸರಿನಲ್ಲಿ ಸಮಾನತೆಯ ದಿನ ಹಾಗೂ ವಿಶ್ವಸಂಸ್ಥೆ ಅವರ ಜನ್ಮ ದಿನವನ್ನು ವಿಶ್ವ ಜ್ಞಾನದಿನವನ್ನಾಗಿ ಆಚರಿಸಲು ಕರೆ ನೀಡಿದೆ.

ಆಸ್ಟ್ರೇಲಿಯದಲ್ಲಿ ಗ್ರಂಥಾಲಯ ನಿರ್ಮಾಣ ಮಾಡಿದೆ. ಸಾರ್ವತ್ರಿಕ ಮತದಾನದ ಮಹತ್ವವನ್ನು ಸಂವಿಧಾನದ ಮೂಲಕ ಪರಿಚಯಿಸಿದವರು. ಎಲ್ಲ ತಳ ಸಮುದಾಯಗಳ ಸಂಘಟನೆಗೆ ಹೋರಾಡಿದ ಮಹಾನ್‌ ಚೇತನ ಎಂದರು. ಬಾಬು ಜಗಜೀವನರಾಂ ದೇಶದ ಉಪ ಪ್ರಧಾನಿಯಾಗಿ ಹಾಗೂ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಹೆಚ್ಚು ಒತ್ತು ನೀಡಿ ಆಹಾರ ಉತ್ಪಾದನೆಗೆ ಶ್ರಮಿಸಿದ್ದರು.

ಇಬ್ಬರು ಮಹನೀಯರ ತತ್ವಾದರ್ಶಗಳನ್ನ ಮೈಗೂಡಿಸಿಕೊಂಡಾಗ ಮಾತ್ರ ಸಮ ಸಮಾಜದ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯಪಟ್ಟರು. ಮೇಯರ್‌ ಎಸ್‌.ಟಿ. ವೀರೇಶ್‌ ಮಾತನಾಡಿ, ಅಂಬೇಡ್ಕರ್‌ ದೇಶದ ವಿಶ್ವಕೋಶ. ದೇಶಕ್ಕಾಗಿ, ಸಮಾಜಕ್ಕಾಗಿ ಹೋರಾಟ ಮಾಡಿದವರು. ಸಮಸ್ಯೆಗಳನ್ನು ಮಾತ್ರ ಬಿಂಬಿಸದೆ ಪರಿಹಾರವನ್ನು ಸಹ ಸಂವಿಧಾನದ ಮೂಲಕ ತಿಳಿಸಿದ ಮಹಾನ್‌ ವ್ಯಕ್ತಿತ್ವದ ಚಿಂತಕರು ಎಂದರು. ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಸಮಾಜದಲ್ಲಿ ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಲು ದೂರದರ್ಶಿತ್ವ ಹೊಂದಿದ್ದ ಮಹಾನ್‌ ನಾಯಕ ಅಂಬೇಡ್ಕರ್‌. ಮೇ ಅಂತ್ಯಕ್ಕೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಭವನಕ್ಕೆ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು. ಬಾಬು ಜಗಜೀವನರಾಂ ಕುರಿತು ಡಾ| ಎಚ್‌. ವಿಶ್ವನಾಥ್‌ ಉಪನ್ಯಾಸ ನೀಡಿದರು. ಶಾಸಕರಾದ ಎಸ್‌ .ಎ. ರವೀಂದ್ರನಾಥ್‌, ಪ್ರೊ| ಎನ್‌. ಲಿಂಗಣ್ಣ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ವರಪ್ಪ, ಸದಸ್ಯರಾದ ತೇಜಸ್ವಿ ಪಟೇಲ್‌, ಕೆ.ಎಸ್‌. ಬಸವಂತಪ್ಪ, ಜಿ.ಸಿ. ನಿಂಗಪ್ಪ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ಹೆಗ್ಗೆರೆ ರಂಗಪ್ಪ ಹಾಗೂ ಐರಣಿ ಚಂದ್ರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಅಂಬೇಡ್ಕರ್‌, ಬಾಬು ಜಗಜೀವನರಾಂ ಕುರಿತ ಪ್ರಬಂಧ ಸ್ಪರ್ಧೆ ವಿಜೇತರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.