ಪ್ರಶಸ್ತಿ ನೈಜ ಹೋರಾಟಗಾರರಿಗೆ ಸಿಗಲಿ

•ಚಿತ್ರದುರ್ಗದ ಎಂ.ಜಯಣ್ಣಗೆ ಶ್ರೀ ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ•ಮೂರು ಜೋಡಿ ವಿವಾಹ

Team Udayavani, May 21, 2019, 11:47 AM IST

davanagere-tdy-1..

ದಾವಣಗೆರೆ: ಸೋಮವಾರ ಶ್ರೀರೇಣುಕ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೋರಾಟಗಾರ, ಚಿತ್ರದುರ್ಗದ ಎಂ.ಜಯಣ್ಣಗೆ ಶ್ರೀ ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭ.

ದಾವಣಗೆರೆ: ಶೋಷಿತರು, ದಮನಿತರು, ಜನಪರ ಚಳವಳಿ ನಡೆಸಿದ ನೈಜ ಹೋರಾಟಗಾರರನ್ನು ಗುರುತಿಸಿ, ಅವರಿಗೆ ಪ್ರಶಸ್ತಿ ಕೊಡುವ ಕೆಲಸ ಆಗಬೇಕಿದೆ ಎಂದು ವಿರಕ್ತ ಮಠದ ಶ್ರೀಬಸವಪ್ರಭು ಹೇಳಿದ್ದಾರೆ.

ಸೋಮವಾರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 87ನೇ ಜನ್ಮದಿನದ ಅಂಗವಾಗಿ ನಗರದ ಶ್ರೀ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಚಿತ್ರದುರ್ಗದ ಎಂ. ಜಯಣ್ಣನವರಿಗೆ ಕೊಡಮಾಡಿದ ಶ್ರೀ ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ವಿಭಿನ್ನ ಹೋರಾಟ ನಡೆದಿವೆ. ಸಾಮ್ರಾಜ್ಯ ವಿಸ್ತರಿಸಲು ರಾಜ-ಮಹಾರಾಜರು ಖಡ್ಗ ಹಿಡಿದು ಹೋರಾಟ ಮಾಡಿದರೆ, ಈಗ ಬಂದೂಕಿನಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ, ವೈಚಾರಿಕ ಖಡ್ಗದಿಂದ ಹೋರಾಟ ಮಾಡಿದವರನ್ನು ಸಮಾಜ ಎಂದೂ ಮರೆಯುವುದಿಲ್ಲ. ಅಂತಹ ಹೋರಾಟಗಾರರು ಇತಿಹಾಸದ ಪುಟ ಸೇರುತ್ತಾರೆ ಎಂದರು.

ಸಾವಿರಾರು ಕೋಟಿ ಗಳಿಸಿದ ವ್ಯಕ್ತಿ ಜನ ಮಾನಸದಲ್ಲಿ ಉಳಿಯುವುದಿಲ್ಲ. ಆದರೆ, ಜನಮುಖೀ ಹೋರಾಟಗಾರ ಇತಿಹಾಸದ ಪುಟದಲ್ಲಿ ದಾಖಲಾಗುತ್ತಾನೆ. ಆ ನಿಟ್ಟಿನಲ್ಲಿ 12ನೇ ಶತಮಾನದಲ್ಲಿ ಬಸವಣ್ಣ, 21ನೇ ಶತಮಾನದಲ್ಲಿ ಡಾ|ಬಿ.ಆರ್‌.ಅಂಬೇಡ್ಕರ್‌ ಸಾಗಿದವರು. ಅವರು ಸಮ ಸಮಾಜದ ನಿರ್ಮಾಣದ ಆಲೋಚನೆಯಿಂದ ಹೋರಾಟ ಮಾಡಿದವರು. ಹಾಗಾಗಿಯೇ ಅವರ ಆದರ್ಶ, ಚಿಂತನೆ ಇಂದಿಗೂ ಎಲ್ಲರೂ ಸ್ಮರಿಸುವಂತಾಗಿದೆ ಎಂದು ಹೇಳಿದರು.

ಜಾತೀಯತೆ, ಶೋಷಿತರು, ಬಡವರ ಪರವಾಗಿ ಹೋರಾಟ ಮಾಡಿದ, ಸಮಾಜದ ಬಗ್ಗೆ ನೈಜ ಕಳಕಳಿಯುಳ್ಳ ಹೋರಾಟಗಾರರನ್ನು ಗುರುತಿಸಿ, ಪ್ರಶಸ್ತಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಶ್ರೀ ದೇವೇಗೌಡ ಪ್ರತಿಷ್ಠಾನ ಹೋರಾಟಗಾರ ಎಂ.ಜಯಣ್ಣನವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, 1974ರಲ್ಲಿ ಪ್ರೊ| ಬಿ.ಕೃಷ್ಣಪ್ಪನವರು ಆರಂಭಿಸಿದ ಚಳವಳಿಗಳಲ್ಲಿ ಎಂ.ಜಯಣ್ಣನವರ ಪಾತ್ರ ಬಹು ದೊಡ್ಡದು. 4 ದಶಕಗಳ ಕಾಲ ಜಯಣ್ಣ ಸತತವಾಗಿ ಹೋರಾಟಗಳಲ್ಲಿ ಭಾಗವಹಿಸುತ್ತಾ ಬಂದಿದ್ದಾರೆ. ಅವರಿಗೆ ಎಂದೋ ಸ್ಥಾನಮಾನ ಸಿಗಬೇಕಿತ್ತು. ಆದರೆ, ಪ್ರಸ್ತುತ ಹೋರಾಟಗಾರರನ್ನು ಜನರು ಅನುಮಾನದಿಂದ ನೋಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸುತ್ತಿದ್ದಾರೆ. ಈ ಹಿಂದೆ ಡಾ| ಬಿ.ಆರ್‌. ಅಂಬೇಡ್ಕರರನ್ನೇ ಸೋಲಿಸಿದರು. ನಾಲ್ಕು ದಶಕಗಳ ಕಾಲ ಹೋರಾಟ ಮಾಡಿದ ನನ್ನನ್ನೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಳಿಸಿದರು. ಹೋರಾಟಗಾರರನ್ನು ಸೋಲಿಸುವ ಕೆಟ್ಟ ವ್ಯವಸ್ಥೆ ಸಮಾಜದಲ್ಲಿ ಸೃಷ್ಟಿಯಾಗಿದೆ ಎಂದು ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ದಲಿತರ ಬೆಳವಣಿಗೆಗೆ ಅಡ್ಡಿ ಮಾಡುವ ಕೆಲಸ ಹಿಂದಿನಿಂದಲೂ ನಡೆಯುತ್ತಿದೆ. ಎನೇಲ್ಲಾ ಚಳವಳಿ, ಹೋರಾಟ ಮಾಡಿದ್ದರೂ ದಲಿತರ ಉದ್ಧಾರ ಎಷ್ಟರ ಮಟ್ಟಿಗೆ ಆಗಿದೆ ಎಂಬುದನ್ನು ಯೋಚಿಸಬೇಕಿದೆ. ಈ ಹಿಂದೆ ದಲಿತರ ಹಿತಕ್ಕಾಗಿ ಸದಾ ಚಿಂತಿಸುತ್ತಿದ್ದ ಬಿ.ಬಸವಲಿಂಗಪ್ಪನವರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ, ದಲಿತ ವಿರೋಧಿಗಳು ಅವರಿಗೆ ಆ ಸ್ಥಾನ ಸಿಗದಂತೆ ಮಾಡಿದರು. ಹೋರಾಟದಿಂದಲೇ ಸ್ಥಾನಮಾನ ಗಳಿಸಬೇಕಿದೆ. ದೇವೇಗೌಡ ಪ್ರಶಸ್ತಿಯನ್ನು ಹೋರಾಟಗಾರ ಎಂ.ಜಯಣ್ಣನವರಿಗೆ ನೀಡಿರುವುದು ಸಮಂಜಸವಾಗಿದೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ಜೆ.ಅಮಾನುಲ್ಲಾ ಖಾನ್‌, ಮೌಲಾನ ಇಬ್ರಾಹಿಂ ಸಖಾಫಿ, ಎಂ.ಜಯಣ್ಣನವರ ಹೋರಾಟದ ಬಗ್ಗೆ ಮಾತನಾಡಿದರು.

ಚಿತ್ರದುರ್ಗದ ಡಾ| ಶಿವಲಿಂಗಪ್ಪ, ಎಂ.ಜಯಣ್ಣನ ಹೋರಾಟದ ಬದುಕಿನ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರಲ್ಲದೆ, ಇಂತಹ ಹೋರಾಟಗಾರನನ್ನು ಸರ್ಕಾರ ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಬೇಕಿದೆ ಎಂದರು.

ಪ್ರಶಸ್ತಿಗೆ ಭಾಜನರಾದ ಎಂ.ಜಯಣ್ಣ, ಜೆಡಿಎಸ್‌ ಮುಖಂಡ ಎಂ.ಆನಂದ್‌, ಎಸ್‌.ಸಂಗೇಗೌಡ, ಜಿಪಂ ಸದಸ್ಯ ಕೆ.ಎಸ್‌.ಬಸವಂತಪ್ಪ, ಸಿ. ಅಂಜಿನಪ್ಪ ಕಡತಿ, ಚಿತ್ರುದುರ್ಗದ ಟಿಪ್ಪು ಖಾಸಿಂ ಅಲಿ, ಮುರುಘರಾಜೇಂದ್ರ ಒಡೆಯರ್‌, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶಿವಮೊಗ್ಗದ ಗುರುಮೂರ್ತಿ, ಇತರರು ವೇದಿಕೆಯಲ್ಲಿದ್ದರು.

ಮಳಲಕೆರೆ ಪ್ರಕಾಶ್‌ ಸ್ವಾಗತಿಸಿದರು. ಶ್ರೀದೇವೇಗೌಡ ಪ್ರತಿಷ್ಠಾನದ ಅಧ್ಯಕ್ಷ ಎಚ್.ಸಿ.ಗುಡ್ಡಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾನದ ಕಾರ್ಯದರ್ಶಿ ಅನೀಶ್‌ ಪಾಶ ಪ್ರಶಸ್ತಿ ಪತ್ರ ವಾಚಿಸಿದರು.

ಇದೇ ಸಂದರ್ಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮೂರು ಜೋಡಿಗಳಿಗೆ ಗಣ್ಯರು ಶುಭ ಕೋರಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.