ಬಿಜೆಪಿ ಗೆಲುವು ಖಚಿತ


Team Udayavani, Mar 1, 2019, 11:14 AM IST

dvg-2.jpg

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಳೆದ ಮೂರು ಚುನಾವಣೆಗಳಿಗಿಂತಲೂ ಅತ್ಯಧಿಕ ಮತಗಳಿಂದ ಗೆಲ್ಲಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಎಸ್‌. ಸುರೇಶ್‌ ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರುವಾರ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಮೇರಾ ಬೂತ್‌ ಸಬ್‌ಸೆ ಮಜ್‌ಬೂತ್‌… ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಡಿಸೆಂಬರ್‌ನಲ್ಲಿ ಪಕ್ಷಕ್ಕೆ ಹೇಳಿಕೊಳ್ಳುವಂತಹ ವಾತಾವರಣ ಇರಲಿಲ್ಲ. ಈಗ ದೇಶದ್ಯಾಂತ ಜನರು ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ. ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಇನ್ನೂ ಹೆಚ್ಚು ಪರಿಶ್ರಮದಿಂದ ಕೆಲಸ ಮಾಡಬೇಕು. ದಾವಣಗೆರೆ ಒಳ ಗೊಂಡಂತೆ ಎಲ್ಲಾ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮತಗಟ್ಟೆ ಗೆಲ್ಲುವರು ಚುನಾವಣೆ ಗೆದ್ದಂತೆ…ಎಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. ಕಾರ್ಯಕರ್ತರು ಚುನಾ ವಣೆ ಗೆಲ್ಲಬೇಕು ಎನ್ನುವ ದೃಷ್ಟಿಯಲ್ಲಿ ಕೆಲಸ ಮಾಡಬೇಕಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಎಷ್ಟು ಸ್ಥಾನ ಪಡೆಯಬೇಕು ಎಂಬ ವಿಚಾರದಲ್ಲಿ ಅಮಿತ್‌ ಷಾ, ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ, ಜಿಲ್ಲೆಯಲ್ಲಿ ಹಿರಿಯ ಮುಖಂಡರು ಕೆಲಸ ಮಾಡುತ್ತಾರೆ. ಕಾರ್ಯಕರ್ತರು ತಮ್ಮ ಬೂತ್‌ ಬಲಿಷ್ಠ ಮಾಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಬಿಜೆಪಿ ವಿರುದ್ಧ ರಚಿತಗೊಂಡಿರುವ ಮಹಾ ಗಟಬಂಧನ್‌ನಿಂದ ಒಂದೊಂದೇ ಪಕ್ಷಗಳು ಹೊರಬರುತ್ತಿವೆ. ಕೇಂದ್ರದ ಸರ್ವವ್ಯಾಪಿ ಸರ್ವಸ್ಪರ್ಶ ಬಜೆಟ್‌, ಆಯುಷ್ಮಾನ್‌ ಭಾರತ್‌ ಯೋಜನೆಯಿಂದ ಬಡವರಿಗೆ ಉಪಯೋಗ ಆಗುತ್ತಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ ಉಜ್ವಲ, ಜನೌಷಧಿ, ಸ್ಟಂಟ್‌ ಇತರೆ ವೈದ್ಯಕೀಯ ಉಪಕರಣಗಳ ಭಾರೀ ಪ್ರಮಾಣದಲ್ಲಿ ದರ ಇಳಿಕೆ, ಕಪ್ಪು ಹಣಕ್ಕೆ ಕಡಿವಾಣ, ಸರ್ಜಿಕಲ್‌ ದಾಳಿ ಸೇರಿದಂತೆ ದೇಶದ ಜನರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಬಿಜೆಪಿ ಜನರೊಂದಿಗೆ ಇರುವ ಪಕ್ಷ. ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ ಯೋಜನೆಗಳನ್ನು ಜನರಿಗೆ ತಲುಪಿಸಲು ಅನೇಕ ಕಾರ್ಯಕ್ರಮ ಮಾಡಿದ್ದೇವೆ. ಮೇರಾ ಪರಿವಾರ್‌ ಬಿಜೆಪಿ ಪರಿವಾರ್‌, ಕಮಲ್‌ ಜ್ಯೋತಿ… ಕಾರ್ಯಕ್ರಮಗಳ ಮೂಲಕ ಜನರಲ್ಲಿಗೆ ತಲುಪಿದ್ದೇವೆ ಎಂದರು. 

ಬಿಜೆಪಿ ಕಾರ್ಯಕರ್ತರು ಚುನಾವಣೆಯಲ್ಲಿ ಮೂರು ತಿಂಗಳು ಸತತ ಪರಿಶ್ರಮದಿಂದ ಕೆಲಸ ಮಾಡಿದರೆ. ಕಾಂಗ್ರೆಸ್‌ ಕಾರ್ಯಕರ್ತರು ಕೇವಲ ಮೂರು ದಿನ ಕೆಲಸ ಮಾಡುತ್ತಾರೆ.

ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಹೋಗಿ ಸರ್ಕಾರದ ಕೆಲಸಗಳನ್ನು ತಿಳಿಸುತ್ತಾರೆ. ಹೀಗೆ- ಹೋಗುವ ಕಾರ್ಯಕರ್ತರನ್ನು ನಾಗರಿಕರು ಗೌರವದಿಂದ ಮನೆಯೊಳಗೆ ಕರೆಸಿಕೊಳ್ಳುತ್ತಾರೆ. ಅಂಥ ಕಾರ್ಯಕರ್ತರು ನಮ್ಮಲ್ಲಿದ್ದಾರೆ ಎಂದು ಸುರೇಶ್‌ಕುಮಾರ್‌ ಹೇಳಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಮಹಿಳಾ ಮೋರ್ಚಾ ಅಧ್ಯಕ್ಷೆ ಎಚ್‌.ಸಿ. ಜಯಮ್ಮ, ಯುವ ಮೋರ್ಚಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್‌, ಎಚ್‌. ಎನ್‌. ಶಿವಕುಮಾರ್‌, ರಾಜನಹಳ್ಳಿ ಶಿವಕುಮಾರ್‌, ಮಾಜಿ ಮೇಯರ್‌ ಸುಧಾ ಜಯರುದ್ರೇಶ್‌, ಕೆ. ಹೇಮಂತ್‌ ಕುಮಾರ್‌, ಭಾಗ್ಯ ಪಿಸಾಳೆ, ಎಂ. ಟಿಪ್ಪುಸುಲ್ತಾನ್‌, ಎಲ್‌.ಡಿ. ಗೋಣೆಪ್ಪ ಇತರರು ಇದ್ದರು.

ರಾಜಕೀಯಕ್ಕೆ “ವಾಯುದಾಳಿ’ ಬಳಕೆ ಬೇಡ ದಾವಣಗೆರೆ: ಭಾರತ ಪಾಕಿಸ್ತಾನದ ಮೇಲೆ ನಡೆಸಿರುವ ವಾಯುದಾಳಿ ವಿಚಾರವನ್ನು ಯಾರೂ ಸಹ ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಎಸ್‌. ಸುರೇಶ್‌ಕುಮಾರ್‌ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಭಾರತ ಪಾಕಿಸ್ತಾನದ ಮೇಲೆ ನಡೆಸಿರುವ ವಾಯುದಾಳಿಯಿಂದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 22 ಸ್ಥಾನ ಗೆಲ್ಲಲಿದೆ ಎಂದು ಬಿ.ಎಸ್‌. ಯಡಿಯೂರಪ್ಪ ಹೇಳಿಕೆ ಕುರಿತಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಅವರು ಯಾವ ಪದ ಬಳಸಿದ್ದಾರೆ ನನಗೆ ಗೊತ್ತಿಲ್ಲ. ಯಾರೂ ಕೂಡ ವಾಯುದಾಳಿ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ವ್ಯಕ್ತಿಗಿಂತ ದೇಶ ದೊಡ್ಡದು. ಬಿಜೆಪಿ ಸೇನೆಯ ವಿಚಾರವನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುವುದಿಲ್ಲ ಎಂದರು.

ದೇಶದಲ್ಲಿ ಬೇರೂರಿರುವ ಭಯೋತ್ಪಾದನೆ ಕಿತ್ತು ಹಾಕಲು ಇದು ಒಳ್ಳೆಯ ಸಮಯ. ಧಾರವಾಹಿಗಳ ಕಂತಿನ ರೀತಿಯಲ್ಲಿ ಭಯೋತ್ಪಾದನೆ ನಿಗ್ರಹ ಮಾಡುವುದಕ್ಕೆ ಆಗುವುದಿಲ್ಲ. ಬೇರು ಸಮೇತ ಕಿತ್ತೂಗೆಯಬೇಕು ಎಂದು ತಿಳಿಸಿದರು.

ಮರೆಗುಳಿತನಕ್ಕೆ ಸಾಕ್ಷಿ: ಉಗ್ರರನ್ನು ಸಾಯಿಸಬಾರದಿತ್ತು ಎಂಬುದಾಗಿ ತೋಟಗಾರಿಕಾ ಇಲಾಖೆ ಸಚಿವ ಎಂ.ಸಿ. ಮನಗೂಳಿ ಹೇಳಿರುವುದು ಅವರ ಮರೆಗುಳಿತನಕ್ಕೆ ಸಾಕ್ಷಿ. ಸೈನಿಕರ ಬಗ್ಗೆ ಬಾಲಿಶ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸುರೇಶ್‌ಕುಮಾರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.