ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು
Team Udayavani, Sep 29, 2020, 4:41 PM IST
ದಾವಣಗೆರೆ: ಸಚಿವ ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.
ಶಿರಮಗೊಂಡನಹಳ್ಳಿಯಲ್ಲಿರುವ ಶಾಸಕ ಎಸ್.ಎ.ರವೀಂದ್ರನಾಥ್ ಮನೆಗೆ ಔಪಚಾರಿಕವಾಗಿ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಕ್ಷದ ವರಿಷ್ಠರು ಯಾರಿಗೆ ಸಚಿವ ಸ್ಥಾನ ನೀಡುತ್ತಾರೋ ಅದಕ್ಕೆ ನಾನು ಬದ್ಧ ಎಂದರು.
ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಶಿಕ್ಷಣ, ವ್ಯಾಪಾರದ ಸಂಪರ್ಕ ಕೊಂಡಿ. ಇಂಥ ಪ್ರಮುಖ ಜಿಲ್ಲೆಗೊಂದು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೇವೆ. ಜಿಲ್ಲೆಯಲ್ಲಿ ರವೀಂದ್ರನಾಥ್ ಅವರಂತಹ ಹಿರಿಯರಿದ್ದಾರೆ. ಹೀಗಾಗಿ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸಚಿವ ಸಂಪುಟಕ್ಕೆ ಹೊಸ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮತ್ತೂಮ್ಮೆ ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿರುವುದನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಯಾವುದಕ್ಕೂ ಕಾದು ನೋಡೋಣ ಎಂದರು.
ಬಂದ್ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರೈತರ ಹಿತದೃಷ್ಟಿಯಿಂದ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡೆ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ ಕಾಂಗ್ರೆಸ್ನವರಿಗೆ ಬೇರೆ ಅಸ್ತ್ರ ಇಲ್ಲ. ಇದನ್ನು ಬಳಸಿಕೊಂಡು ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆಂದು ದೂರಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನುಗಮನದಲ್ಲಿಟ್ಟುಕೊಂಡು ಎರಡೂ ಮಸೂದೆಗಳನ್ನು ಜಾರಿ ಮಾಡಿದೆ. ರೈತರಿಗೆಉತ್ತಮ ಬೆಲೆ ಸಿಕ್ಕರೆ ರೈತರಿಗೆ ಅನುಕೂಲ.ಇದರಿಂದ ರೈತರಿಗೆ ಅನುಕೂಲವಾಗಿದ್ದು ರೈತರು ಖುಷಿಯಾಗಿದ್ದಾರೆ.
ಅಧಿವೇಶನದಲ್ಲಿ ಅಧಿಕೃತವಾಗಿ ಬಿಲ್ ಮಂಡನೆಯಾಗಿ ಪಾಸಾಗಿದೆ. ಒತ್ತಾಯಪೂರ್ವಕವಾಗಿ ನಾವು ಬಿಲ್ ಪಾಸ್ ಮಾಡಿಲ್ಲ. ಆದರೆ ಕಾಂಗ್ರೆಸ್ನವರುವಿನಾಕಾರಣ ಟೀಕಿಸುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್