ಎರಡು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು


Team Udayavani, Apr 8, 2018, 10:41 AM IST

dav-2.jpg

ದಾವಣಗೆರೆ: ಮಾಯಕೊಂಡ, ಹರಪನಹಳ್ಳಿ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪರೊಂದಿಗೆ ಸಂಸದ ಜಿ.ಎಂ. ಸಿದ್ದೇಶ್ವರ್‌ ದೆಹಲಿಗೆ ದೌಡು, ಬೆಂಗಳೂರಿನಲ್ಲಿನ ರಾಹುಲ್‌ ಗಾಂಧಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚಿಸಲು ಸಚಿವ ಮಲ್ಲಿಕಾರ್ಜುನ್‌ ಬೆಂಗಳೂರಲ್ಲಿ ಠಿಕಾಣಿ, ಜೆಡಿಎಸ್‌ ಹುರಿಯಾಳುಗಳು ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮದಲ್ಲಿ ದಿನವಿಡೀ ಬ್ಯುಸಿ….ಇವು ಶನಿವಾರದ ಪ್ರಮುಖ ರಾಜಕೀಯ ಘಟನಾವಳಿಗಳು.

ಬಿಜೆಪಿಯಲ್ಲಿ ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಈಗಾಗಲೇ 6 ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮಗೊಂಡ ಹಿನ್ನೆಲೆಯಲ್ಲಿ ಆ 6 ಮಂದಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡರು. ಪಕ್ಷದ ಪೇಜ್‌ ಪ್ರಮುಖ, ನವಶಕ್ತಿ ಕಾರ್ಯಕರ್ತರ ಕಾರ್ಯ ವೈಖರಿ ತಿಳಿದುಕೊಳ್ಳುವ ಜೊತೆಗೆ ಖುದ್ದು ಮನೆ ಮನೆ ಪ್ರಚಾರ ಕೈಗೊಂಡರು. ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ತಮ್ಮ ಬೆಂಬಲಿಗರೊಂದಿಗೆ ಮಹಾನಗರ ಪಾಲಿಕೆ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಆಯಾ ಭಾಗದಲ್ಲಿದ್ದ ಪಕ್ಷದ ಹಿರಿಯ ಕಾರ್ಯಕರ್ತರು, ಪಕ್ಷದ ನಾಯಕರೊಂದಿಗೆ
ಚರ್ಚೆ ನಡೆಸಿದರು. ಪಕ್ಷದ ಜಿಲ್ಲಾಧ್ಯಕ್ಷ ತಮ್ಮ ಕ್ಷೇತ್ರ ದಾವಣಗೆರೆ ದಕ್ಷಿಣದ ವಾರ್ಡ್‌ಗಳಲ್ಲಿ ಸಂಚಾರ ನಡೆಸಿ, ಮತ ಪ್ರಚಾರ ಮಾಡಿದರು. 

ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿಯಲ್ಲಿ ಮಾಡಾಳು ವಿರುಪಾಕ್ಷಪ್ಪ, ಜಗಳೂರಿನಲ್ಲಿ ಎಸ್‌.ವಿ.
ರಾಮಚಂದ್ರಪ್ಪ ಮತಯಾಚನೆ ಮಾಡಿದರು. ಮಾಯಕೊಂಡ, ಹರಪನಹಳ್ಳಿ ಕ್ಷೇತ್ರದ ಕಾರ್ಯಕರ್ತರು ದೆಹಲಿಯ ಸಂದೇಶಕ್ಕಾಗಿ ಕಾದು ಕುಳಿತರು.

ಇತ್ತ ಕಾಂಗ್ರೆಸ್‌ನ ಕಾರ್ಯಚಟುವಟಿಕೆ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ. ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್‌ ಸಮಾವೇಶ ಹಾಗೂ ಹುರಿಯಾಳುಗಳ ಪಟ್ಟಿ ತಯಾರಿಕೆಯಲ್ಲಿ
ಪಕ್ಷದ ನಾಯಕರು ಬ್ಯುಸಿಯಾಗಿದ್ದರು. 

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಪಕ್ಷದ ಜಿಲ್ಲಾಧ್ಯಕ್ಷ ಎಚ್‌.ಬಿ. ಮಂಜಪ್ಪ ಬೆಂಗಳೂರಲ್ಲೇ ಬೀಡು ಬಿಟ್ಟಿದ್ದಾರೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮಧ್ಯಾಹ್ನದವರೆಗೆ ಬೆಂಗಳೂರಿನಲ್ಲಿದ್ದುಕೊಂಡು ದಾವಣಗೆರೆಗೆ ವಾಪಸ್ಸಾಗಿ ಪ್ರಚಾರ ಕಾರ್ಯದ ಮಾಹಿತಿ ಪಡೆದರು. ಜೆಡಿಎಸ್‌ ನಾಯಕರು ತಮ್ಮ ಕ್ಷೇತ್ರಗಳಲ್ಲಿನ ಪ್ರಚಾರ ಕಾರ್ಯ ಕೈಗೊಂಡರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.