ಕುಂಭದ್ರೋಣ ಮಳೆಗೆ ತತ್ತರಿಸಿದ ದಾವಣಗೆರೆ ನಗರ


Team Udayavani, Sep 26, 2017, 4:58 PM IST

dav-2.jpg

ದಾವಣಗೆರೆ: ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವ 3 ಗಂಟೆ ವರೆಗೆ ಇಡೀ ಜಿಲ್ಲೆಯಲ್ಲಿ 90 ಮಿ.ಮೀ ಮಳೆ ಸುರಿದಿದೆ. ಎಡೆಬಿಡದೇ ಸುರಿದ ಕುಂಭದ್ರೋಣ ಮಳೆಗೆ ನಗರದ ತಗ್ಗು ಪ್ರದೇಶಗಳೆಲ್ಲಾ ಜಲಾವೃತಗೊಂಡು ಜನ ಜೀವನ ಅಸ್ತವ್ಯವಸ್ಥಗೊಂಡಿದೆ. ಸುಮಾರು 1000 ಮನೆಗಳು ಹಾನಿಗೊಳಗಾಗಿವೆ.

ಯಾವುದೇ ಜೀವ ಹಾನಿಯಾಗಿಲ್ಲ. ಪರಿಸ್ಥಿತಿ ನಿಭಾಯಿಸಲು ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಸಮರೋಪಾದಿಯಲ್ಲಿ ಕೆಲಸ ಕೈಗೊಂಡಿದ್ದಾರೆ. ಎರಡು ಕಡೆಗಳಲ್ಲಿ ಗಂಜಿ ಕೇಂದ್ರ ಆರಂಭಿಸಿ, ರಾತ್ರಿಯಿಡೀ ಮಳೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ನೆರವು ಒದಗಿಸಿದರು.

ಮಳೆಯಿಂದಾಗಿ ಸಂಪೂರ್ಣ ಸಂತ್ರಸ್ತರಾದವರಿಗಾಗಿ ಭಾರತ್‌ ಕಾಲೋನಿ, ಚಿಕ್ಕನಹಳ್ಳಿ ಬೆಂಕಿನಗರದಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ. ಬೆಂಕಿನಗರ ನಿವಾಸಿಗಳಿಗೆ ಎಪಿಎಂಸಿಯ ಗೋದಾಮಿನಲ್ಲಿ ಆಶ್ರಯ ಒದಗಿಸಲಾಗಿದೆ.

ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿರುವ ಎಸ್‌ಎಸ್‌ ಹೈಟೆಕ್‌ ಆಸ್ಪತ್ರೆ, ಶಿವಕುಮಾರ ಸ್ವಾಮಿ ಬಡಾವಣೆ, ಬಾಪೂಜಿ ಆಸ್ಪತ್ರೆ, ಎಂಸಿ ಕಾಲೋನಿ ಬಿ ಬ್ಲಾಕ್‌, ನೀಲಮ್ಮನ ತೋಟ, ಎಸ್‌ಪಿಎಸ್‌ ನಗರ, ಚೌಡಾಂಬಿಕ ನಗರ, ಜಾಲಿ ನಗರ, ಆವರಗೆರೆ ದನುವಿನ ಓಣಿ, ಚಿಕ್ಕನಹಳ್ಳಿ ಹಳ್ಳದ ಪಕ್ಕದ ಬೆಂಕಿ ನಗರ, ಎಸ್‌. ಎಂ. ಕೃಷ್ಣ ನಗರ, ಭಾರತ್‌ ಕಾಲೋನಿ, ಹೊಳೆಹೊನ್ನೂರು ತೋಟದ ಮನೆಗಳಿಗೆ ನೀರು ನುಗ್ಗಿದೆ.

ಇದೇ ರೀತಿ ರಾಜ್ಯ ಸಾರಿಗೆ ಬಸ್‌ ನಿಲ್ದಾಣ, ಅಗ್ನಿಶಾಮಕ ದಳದ ಕಚೇರಿ ಸಂಪೂರ್ಣ ಜಲಾವೃತಗೊಂಡಿದ್ದವು. ಅಗ್ನಿಶಾಮಕ ದಳದ ಕಚೇರಿ ಆವರಣದಲ್ಲಿ ತುಂಬಿದ್ದ ನೀರು ಹೊರ ತೆಗೆಯಲು ಸೋಮವಾರ ಸಂಜೆಯವರೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯನಿರತವಾಗಿತ್ತು. ಈ ಕಾರ್ಯಕ್ಕೆ ಹಾವೇರಿಯಿಂದ ಸಿಬ್ಬಂದಿ ಕರೆಸಿ, ಮೋಟಾರ್‌ಪಂಪ್‌ ಬಳಸಿ ನೀರು ಹೊರಹಾಕಲಾಯಿತು. 

ಎಪಿಎಂಸಿ ಪಕ್ಕ, ಚಿಕ್ಕನಹಳ್ಳಿ ಹಳ್ಳದ ದಡದ ಮೇಲಿನ ಬೆಂಕಿನಗರವಂತೂ ಸಂಪೂರ್ಣ ಜಲಾವೃತವಾಗಿತ್ತು. ರಾತ್ರಿಯೇ ಇಲ್ಲಿನ ಜನ ತಮ್ಮ ಮನೆ ಬಿಟ್ಟು ಎಪಿಎಂಸಿಯ ಗೋದಾಮಿನಲ್ಲಿ ಆಶ್ರಯ ಪಡೆದರು. 

ಇನ್ನು ಭಾರತ್‌ ಕಾಲೋನಿ ಸ್ಥಿತಿ ಸಹ ಇದೇ ಆಗಿತ್ತು. ಇನ್ನು ಆಶ್ರಯ ಬಡಾವಣೆಗಳಲ್ಲಿನ ಸ್ಥಿತಿಯಂತೂ ಹೇಳತೀರದಾಗಿತ್ತು. ಮೊದಲೇ ಕಪ್ಪು ಮಣ್ಣಿನ ನೆಲವಾಗಿದ್ದರಿಂದ ರಸ್ತೆಗಳು ಪೂರ್ತಿ ಗದ್ದೆಯಂತೆ ಆಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿತ್ತು. ಕೆಲ ಮನೆಗಳಲ್ಲಿ 3 ಅಡಿಯಷ್ಟು ನೀರು ನಿಂತಿದ್ದು, ಮನೆಯವರೆಲ್ಲಾ ಸೇರಿ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಮಳೆಯಿಂದಾಗಿ ಶಾಮನೂರು ರಸ್ತೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಿಮೆಂಟ್‌ ದಾಸ್ತಾನು ಮಾಡಿದ್ದ ಶೆಡ್‌ ಕುಸಿದು ಬಿದ್ದು 100 ಚೀಲ ಸಿಮೆಂಟ್‌ ನೀರು ಪಾಲಾಗಿದೆ. ಎಂಸಿಸಿ ಬಿ ಬ್ಲಾಕ್‌ನ ಪವಾರ್‌ ಹೋಟೆಲ್‌ ಬಳಿ ಯುಜಿಡಿಗೆ ತೆಗೆದಿದ್ದ ಗುಂಡಿಯಲ್ಲಿ ಎರಡು ಬೈಕ್‌ಗಳು ಬಿದ್ದು, ಎರಡೂ ಬೈಕ್‌ನಲ್ಲಿ ಸವಾರಿಮಾಡುತ್ತಿದ್ದ ಐವರು ಸಣ್ಣಪುಟ್ಟ ಗಾಯಕ್ಕೆ ತುತ್ತಾದರು.

ಇನ್ನು ಕೆಎಸ್‌ಆರ್‌ಟಿಸಿ ಬೈಕ್‌ ನಿಲ್ದಾಣದಲ್ಲಿದ್ದ ಪ್ರಯಾಣಿಕರ ದ್ವಿಚಕ್ರ ವಾಹನಗಳು ಸಂಪೂರ್ಣ ಮುಳುಗಿದ್ದರಿಂದ ಬೆಳಿಗ್ಗೆ ವಾಹನಗಳನ್ನು ಅಲ್ಲಿಂದ ಹೊರ ತೆಗೆಯುವುದೇ ಸಾಹಸವಾಗಿತ್ತು. ಹೊರ ತೆಗೆದ ವಾಹನಗಳನ್ನು ಗ್ಯಾರೇಜ್‌ವರೆಗೂ ತಳ್ಳಿಕೊಂಡೇ ಹೋದ ಮಾಲಿಕರು 300-400 ರೂ. ತೆತ್ತು ದುರಸ್ತಿ ಮಾಡಿಸಿಕೊಂಡು ತೆರಳಿದರು. ಮೆಕ್ಯಾನಿಕ್‌ಗಳು ದಿನವಿಡೀ ದಿಚಕ್ರ ವಾಹನಗಳ ದುರಸ್ತಿಯಲ್ಲಿ ನಿರತರಾಗಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.