![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ಬಿಸಿಲಿನ ತಾಪದಿಂದ ಮೀನು ಸಾವು
Team Udayavani, Feb 14, 2017, 1:07 PM IST
![dvg6.jpg](https://www.udayavani.com/wp-content/uploads/2017/02/14/dvg6.jpg)
ಹರಪನಹಳ್ಳಿ: ಅಂತರ್ಜಲ ಕುಸಿತದಿಂದ ನೀರು ಇಂಗಿ ಹೋಗಿ ತಾಲೂಕಿನ ಅಲಮರಸೀಕೆರೆ ಗ್ರಾಮದ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದ ಹಿನ್ನೆಲೆಯಲ್ಲಿ ಸೋಮವಾರ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತ್ತಿರುವ ಮೀನುಗಳಿಂದ ಹೊರ ಸೂಸುತ್ತಿರುವ ದುರ್ವಾಸನೆಯಿಂದ ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ತಪ್ಪಿಸಲು ಕೆರೆಯ ದಡ ಮತ್ತು ಕೆರೆಯ ತುಂಬಾ ಬೆಳಗ್ಗೆ 25 ಕೆ.ಜಿ ಪ್ಯಾಕೆಟ್ 6, ಮಧ್ಯಾಹ್ನ 4 ಪ್ಯಾಕೆಟ್ ಸೇರಿ ಒಟ್ಟು 10 ಪ್ಯಾಕೆಟ್ ಬ್ಲಿಚಿಂಗ್ ಪೌಡರ್ ಹಾಕಲಾಗಿದೆ.
ನೀರು ಕಡಿಮೆಯಾಗಿ ಬಿಸಿಲಿನ ತಾಪಮಾನದಿಂದ ಮೀನುಗಳು ಸತ್ತಿವೆ. ಇದರಿಂದ ಯಾವುದೇ ತರಹದ ಸಾಂಕ್ರಾಮಿಕ ರೋಗ ಹರಡುವುದಿಲ್ಲ ಎಂದು ಮೀನುಗಾರಿಗೆ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಎಲ್.ದೊಡ್ಮನೆ ತಿಳಿಸಿದ್ದಾರೆ.
ಕೆರೆಯ ಬಳಿ ಯಾರು ತೆರಳದಂತೆ ಹಾಗೂ ಜಾನುವಾರುಗಳಿಗೆ ನೀರು ಕುಡಿಸದಂತೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಗಿದೆ. ಭಾನುವಾರ ಇದ್ದಷ್ಟು ವಾಸನೆ ಸೋಮವಾರ ಇರಲಿಲ್ಲ. ಇನ್ನೊಂದು ದಿನ ಕಳೆದರೆ ಬಿಸಿಲಿಗೆ ಮೀನುಗಳು ಒಣಗಿ ವಾಸನೆ ಕಡಿಮೆಯಾಗಲಿದೆ.
ಇನ್ನೊಮ್ಮೆ ಯಾರು ಕೆರೆಯ ತೂಬು ಎತ್ತದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ರಮೇಶ್, ಕೆರೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಈ. ಗಂಗಪ್ಪ, ಹಾರಕನಾಳು ಆಸ್ಪತ್ರೆ ವೈದ್ಯಾಧಿಕಾರಿ ವಿಜಯಕುಮಾರ ಇತರರು ಇದ್ದರು.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.