ಹಕ್ಕೊತ್ತಾಯದ ಕಾರ್ಮಿಕ ಸನ್ನದು ಬಿಡುಗಡೆ-ಜಾರಿಗೆ ಆಗ್ರಹ
Team Udayavani, Mar 17, 2019, 6:33 AM IST
ದಾವಣಗೆರೆ: ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ 44 ವಿವಿಧ ಹಕ್ಕೊತ್ತಾಯದ ಕಾರ್ಮಿಕ ಸನ್ನದನ್ನು ಶನಿವಾರ ಮಹಾತ್ಮಗಾಂಧಿ ವೃತ್ತದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ವತಿಯಿಂದ ಬಿಡುಗಡೆ ಮಾಡಲಾಯಿತು.
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಮುಖಂಡ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ಗಗನಕ್ಕೇರಿರುವ ವಸ್ತುಗಳ ಬೆಲೆ ನಿಯಂತ್ರಣ ಆಗದೇ ಇರುವ ಕಾರಣಕ್ಕೆ ಜನಸಾಮಾನ್ಯರ ಜೀವನ ದುಸ್ತರವಾಗುತ್ತಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವಂತಹ ಯಾವುದೇ ಸರ್ಕಾರ, ಜನ ಸಾಮಾನ್ಯರು ಪ್ರತಿ ದಿನ ಬಳಸುವ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ಅತೀ ಮುಖ್ಯವಾಗಿರುವ ಸಾರ್ವಜನಿಕ ವಿತರಣಾ ಪದ್ಧತಿಯನ್ನ ಸಧೃಢವಾಗಿ ವಿಸ್ತರಣೆ ಮಾಡಬೇಕು. ಪಡಿತರ ವಿತರಣೆಗೆ ಆಧಾರ್ ಕಾರ್ಡ್ ಕಡ್ಡಾಯವನ್ನು ತೆಗೆದುಹಾಕಬೇಕು. ಕೇಂದ್ರ ಸರ್ಕಾರವೇ ಜಾರಿಗೆ ತಂದಿರುವ ಕನಿಷ್ಠ ವೇತನ ಕಾಯ್ದೆ ಅನ್ವಯ ಎಲ್ಲಾ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಪ್ರತಿ ತಿಂಗಳು 18 ಸಾವಿರ ವೇತನ ನೀಡಬೇಕು. ಸರ್ಕಾರಿ ಜೀತದ ಪ್ರತೀಕವಾಗಿರುವ ಗುತ್ತಿಗೆ, ಹೊರ ಗುತ್ತಿಗೆ ಪದ್ಧತಿಯನ್ನ ಸಂಪೂರ್ಣವಾಗಿ ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರವಾದ, ಕಾರ್ಮಿಕರ ವಿರೋಧಿಯಾದ ತಿದ್ದುಪಡಿ ಕೈ ಬಿಡಬೇಕು. ದೇಶದ ಸಂಪನ್ಮೂಲ ಸೃಷ್ಟಿಸುವಂತಹ ಕಾರ್ಮಿಕರ ಪರವಾದ ನೀತಿ ಜಾರಿಗೆ ತರಬೇಕು. ಈಗಿರುವ ಕಾರ್ಮಿಕ ನೀತಿಗಳನ್ನ ಕಟ್ಟು ನಿಟ್ಟಾಗಿ ಜಾರಿಗೆ ತರಬೇಕು. ಪುರುಷರಂತೆ ಮಹಿಳಾ ಕಾರ್ಮಿಕರಿಗೂ ಸಮಾನ ವೇತನ ನೀಡಬೇಕು. ಕಾರ್ಮಿಕ ಕ್ಷೇತ್ರದಲ್ಲಿ ದ್ವಿ ಪಕ್ಷೀಯ, ತ್ರಿ ಪಕ್ಷೀಯ ಮಾತುಕತೆ ವಿಧಾನ ಬಲಪಡಿಸುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕೆ.ಎಲ್. ಭಟ್, ಆವರಗೆರೆ ಚಂದ್ರು, ಆನಂದರಾಜ್, ಶ್ರೀನಿವಾಸಮೂರ್ತಿ, ಬಾಡ ಇ. ಶ್ರೀನಿವಾಸ್, ಆವರಗೆರೆ ವಾಸು, ಕೆ.ಎಚ್. ಆನಂದರಾಜ್, ಐರಣಿ ಚಂದ್ರು, ಎನ್.ಟಿ. ಬಸವರಾಜ್, ತಿಪ್ಪೇ ಸ್ವಾಮಿ, ಪರಶುರಾಮ್, ಎಂ.ಬಿ. ಶಾರದಮ್ಮ, ಸರೋಜ, ಉಮೇಶ್, ಟಿ.ಎಸ್. ನಾಗರಾಜ್ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್