![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮಕ್ಕಳ ಶಿಕ್ಷಣ ಹಕ್ಕು ನಿರಾಕರಣೆಗೆ ಕ್ರಮ
Team Udayavani, Feb 16, 2017, 1:12 PM IST
![dvg4.jpg](https://www.udayavani.com/wp-content/uploads/2017/02/16/dvg4.jpg)
ದಾವಣಗೆರೆ: ಮಕ್ಕಳಿಗೆ ಸಂವಿಧಾನಬದ್ಧ ಶಿಕ್ಷಣದ ಹಕ್ಕನ್ನು ಅರ್ಥಪೂರ್ಣವಾಗಿ ಜಾರಿ ಹಾಗೂ ಖಾತರಿಗೊಳಿಸುವುದು ಸ್ಥಳೀಯ ಸರ್ಕಾರಗಳ ಪ್ರಮುಖ ಕರ್ತವ್ಯ ಎಂದು ಜಿಲ್ಲಾ ಮಾನವ ಹಕ್ಕುಗಳ ವೇದಿಕೆ ಕಾರ್ಯದರ್ಶಿ ಎಲ್.ಎಚ್. ಅರುಣ್ ಕುಮಾರ್ ಹೇಳಿದ್ದಾರೆ.
ಬ್ರೆಡ್ ಸಂಸ್ಥೆ, ಡಾನ್ಬಾಸ್ಕೋ ಬಾಲ ಕಾರ್ಮಿಕರ ಮಿಷನ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ಡಾನ್ಬಾಸ್ಕೋ ಶಾಲೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಕ್ಲಬ್ ಒಕ್ಕೂಟ ರಚನೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಯಾರೇ ಆಗಲಿ ಮಕ್ಕಳ ಶಿಕ್ಷಣದ ಹಕ್ಕು ನಿರಾಕರಿಸಿದಲ್ಲಿ ಕಾನೂನಿನಡಿ ಕ್ರಮ ಕೈಗೊಳ್ಳಲು ಅವಕಾಶ ಇದೆ ಎಂದರು.
ಮಕ್ಕಳಿಗೆ ಶಿಕ್ಷಣದ ಹಕ್ಕು ಕಡ್ಡಾಯವಾಗಿರುವಾಗ ಯಾವುದಾದರೂ ಮಗು ದುಡಿಯಲು ಹೋದರೆ ಅದು ಆ ಮಗುವಿನ ಹಕ್ಕು ಕಸಿದುಕೊಂಡಂತೆ ಆಗುತ್ತದೆ. ಪ್ರತಿ ಮಗುವನ್ನು ಅಕ್ಕರೆಯಿಂದ ಜಾಗರೂಕತೆಯಿಂದ ಬೆಳೆಸಿ ಯಾವುದೇ ಮಗುವು ಎಂತಹ ಪ್ರಸಂಗದಲ್ಲೂ ಒತ್ತಡಕ್ಕೆ ಬೀಳದಂತೆ ಜೀವನ ನಡೆಸುವಂತೆ ನೋಡಿಕೊಳ್ಳುವುದು ಸಮುದಾಯದ ಕರ್ತವ್ಯ ಎಂದು ತಿಳಿಸಿದರು.
ಮಕ್ಕಳು ಬೆಳೆದು ಕುಟುಂಬ, ರಾಜ್ಯ, ದೇಶವನ್ನು ಉತ್ತಮವಾಗಿ ಮುನ್ನೆಡೆಸಬೇಕೆಂಬುದು ಎಲ್ಲರ ಆಶಯ ಅರ್ಥಪೂರ್ಣವಾಗಿ ಸಫಲ ಆಗಬೇಕಾದರೆ ಮಕ್ಕಳು ತಮ್ಮ ಬಾಲ್ಯವನ್ನು ಸಂಪೂರ್ಣವಾಗಿ ಅನುಭವಿಸಬೇಕು. ಕುಟುಂಬ, ಶಾಲೆ ಮತ್ತು ಸಮುದಾಯಗಳ ಒಳಗೆ, ಹೊರಗೆ ಎಲ್ಲ ಮಕ್ಕಳೆಲ್ಲರಿಗೂ ಒಂದೇ ರೀತಿಯ ಅವಕಾಶ ದೊರೆಯುತ್ತಿಲ್ಲ.
ಮಕ್ಕಳು ಲಿಂಗ, ಜಾತಿ, ಧರ್ಮ, ಆಹಾರ, ಉಡುಗೆ-ತೊಡುಗೆ, ಆಸ್ತಿ, ಅಂತಸ್ತು ಇತರೆ ಕ್ಷೇತ್ರದಲ್ಲಿನ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಿಷಾದಿಸಿದರು. ವಿಶ್ವಸಂಸ್ಥೆಯು ಮಕ್ಕಳ ಹಕ್ಕುಗಳ ಒಡಂಬಡಿಕೆ ಮೂಲಕ ಎಲ್ಲ ಮಕ್ಕಳಿಗೂ ಬದುಕುವ, ರಕ್ಷಣೆಯ, ಅಭಿವೃದ್ಧಿ ಹೊಂದುವ ಮತ್ತು ಭಾಗವಹಿಸುವ ಹಕ್ಕನ್ನು ನೀಡಿದೆ.
ದೇಶದ ಜನಸಂಖ್ಯೆಯಲ್ಲಿ ಶೇ.42ರಷ್ಟು ಪ್ರಮಾಣ (52 ಕೋಟಿ) ಮಕ್ಕಳಿದ್ದಾರೆ. ಪ್ರತಿಯೊಬ್ಬರೂ ಮಕ್ಕಳಿಗೆ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು, ಸ್ವತಂತ್ರವಾಗಿ ಕಾರ್ಯ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಮಕ್ಕಳ ಹಕ್ಕುಗಳ ಕ್ಲಬ್ ಸಹಕಾರ ನೀಡಬೇಕು ಎಂದು ತಿಳಿಸಿದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಪಿ.ಬಿ. ಮಲ್ಲಿಕಾರ್ಜುನ್ ಮಾತನಾಡಿ, ಶಾಲೆ ಹಾಗೂ ಸಮುದಾಯವನ್ನು ಮಕ್ಕಳ ಸ್ನೇಹಿಯಾಗಿ ಪರಿವರ್ತಿಸುವುದು ಮಕ್ಕಳ ಹಕ್ಕುಗಳ ಕ್ಲಬ್ನ ಗುರಿಯಾಗಿದೆ. ಮಕ್ಕಳ ಭಾಗವಹಿಸುವ ಹಕ್ಕು ಪ್ರತಿಪಾದನೆ ಹಾಗೂ ನಾಯಕತ್ವದ ಗುಣ ಬೆಳೆಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕ್ರೀಂ ಯೋಜನೆ ನಿರ್ದೇಶಕ ಫಾದರ್ ಸಿರಿಲ್ ಸಗಾಯ್ರಾಜ್, ಡಾನ್ಬಾಸ್ಕೋ ಆಡಳಿತಾಧಿಕಾರಿ ಫಾ| ಜಾನ್ ಪೌಲ್, ಎ.ಟಿ. ವಸಂತ್ಕುಮಾರ್ ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.