ಬಿಸಿಯೂಟ ಅಡುಗೆ ಸಿಬಂದಿಗೂ ವಿಶೇಷ ತರಬೇತಿಗೆ ಇಲಾಖೆ ಸಿದ್ಧತೆ
Team Udayavani, Dec 15, 2022, 7:20 AM IST
ದಾವಣಗೆರೆ: ರಾಜ್ಯ ಸರಕಾರದ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಹಾಗೂ ಸಾಮಾಜಿಕ ಪರಿಶೋಧನ ನಿರ್ದೇಶನಾಲಯವು ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಗೆ ಸಂಬಂಧಿಸಿ ಶುಚಿತ್ವ-ವ್ಯವಸ್ಥಿತ ನಿರ್ವಹಣೆ ಕುರಿತು ನೀಡಿದ ಮಹತ್ವದ ಶಿಫಾರಸುಗಳಿಗೆ ಪೂರಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲ ಶಾಲೆಗಳ ಬಿಸಿಯೂಟ ಯೋಜನೆಯ ಅಡುಗೆ ಸಿಬಂದಿಗೆ ವಿಶೇಷ ತರಬೇತಿ ನೀಡಲು ಮುಂದಾಗಿದೆ.
ಶಾಲಾ ಅಡುಗೆ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬಂದಿಗೆ ಪ್ರಸಕ್ತ ತಿಂಗಳಲ್ಲೇ ಒಂದು ದಿನದ ತರಬೇತಿ ನೀಡಲು ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ. ತರಬೇತಿಯನ್ನು ತಾಲೂಕು ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಇದಕ್ಕಾಗಿ ಒಬ್ಬರಿಗೆ ದಿನಕ್ಕೆ 100 ರೂ. ವೆಚ್ಚ ಭರಿಸಲು ಅಕ್ಷರ ದಾಸೋಹ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಅಡುಗೆ ಸಿಬಂದಿಯ ನಿರ್ದಿಷ್ಟ ಕೆಲಸಗಳು ಹಾಗೂ ಪಡೆಯುವ ಸೌಲಭ್ಯಗಳ ಬಗ್ಗೆ ಪರಿಚಯಿಸಿ ಕೊಡಬೇಕು. ಅಡುಗೆ ಕೇಂದ್ರಗಳಲ್ಲಿ ಸ್ವತ್ಛತೆ, ನೈರ್ಮಲ್ಯ ಮತ್ತು ಸುರಕ್ಷತ ಕ್ರಮಗಳ ಅರಿವು ಹಾಗೂ ನಿರ್ವಹಣೆಯ ಬಗ್ಗೆ ಮಾರ್ಗದರ್ಶನ ನೀಡಬೇಕು ಸೇರಿದಂತೆ ಅಡುಗೆ ಹಾಗೂ ಅಡುಗೆ ಕೇಂದ್ರದ ನಿರ್ವಹಣೆ ಬಗ್ಗೆ ವಿವಿಧ ವಿಷಯಗಳ ಕುರಿತು ತಜ್ಞರಿಂದ ಅನುಭವಿಗಳಿಗೆ ಉಪನ್ಯಾಸ, ಪ್ರಾತ್ಯಕ್ಷಿಕೆ ಮೂಲಕ ತರಬೇತಿಯಲ್ಲಿ ತಿಳಿವಳಿಕೆ ನೀಡಲಾಗುತ್ತದೆ.
ತರಬೇತಿ ವಿಷಯಗಳು
ಅಡುಗೆ ಸಿಬಂದಿಗಳ ಪಾತ್ರ ಹಾಗೂ ನಿರ್ವಹಣ ಕಾರ್ಯ, ಪೌಷ್ಟಿಕ ಆಹಾರ ವಿತರಣೆ ಅಗತ್ಯತೆ, ವಾರದ ಆಹಾರ ಪಟ್ಟಿ, ಅಡುಗೆ ನಿರ್ವಹಣೆ ಮಾರ್ಗಸೂಚಿ, ಆಹಾರದ ಗುಣಮಟ್ಟ ಮತ್ತು ಸುರಕ್ಷತ ನಿಯಮಗಳು, ಸ್ವಯಂಸೇವಾ ಸಂಸ್ಥೆಯ ಬಿಸಿಯೂಟ ಸರಬರಾಜು, ವೈಯಕ್ತಿಕ ಸ್ವತ್ಛತೆ ಹಾಗೂ ನೈರ್ಮಲ್ಯ, ಅಡುಗೆ ಕೇಂದ್ರದಲ್ಲಿ ಸುರಕ್ಷತೆ, ಅಗ್ನಿನಂದಕಗಳ ಬಳಕೆ ಹಾಗೂ ಮಹತ್ವ, ಅಡುಗೆ ಸಿಬಂದಿಯ ನಿರ್ದಿಷ್ಟ ಚಟುವಟಿಕೆ, ಮಧ್ಯಾಹ್ನದ ಬಿಸಿಯೂಟದಲ್ಲಿ ಕೈತೋಟದ ಪಾತ್ರ, ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷಾಚರಣೆ, ನಿರ್ದಿಷ್ಟ ಪ್ರಮಾಣದಲ್ಲಿ ಗುಣಮಟ್ಟದ ಆಹಾರ ವಿತರಣೆ, ಗ್ಯಾಸ್ ಒಲೆ, ಸಿಲಿಂಡರ್ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ.
ಮುಖ್ಯ ಉದ್ದೇಶಗಳು
ಅಡುಗೆ ಕೆಲಸದಲ್ಲಿ ವೈಯಕ್ತಿಕ ಸ್ವತ್ಛತೆ ಹಾಗೂ ಸುರಕ್ಷತೆ ಕಾಪಾಡಿಕೊಳ್ಳುವುದು ಹಾಗೂ ಬಿಸಿಯೂಟ ಬಡಿಸುವಾಗ ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸುವುದು, ಶಾಲಾ ಮಕ್ಕಳ ಆಹಾರದಲ್ಲಿ ಅಗತ್ಯವಾಗಿ ಇರಬೇಕಾದ ಪೌಷ್ಟಿಕತೆ, ಬಹುಪೋಷಕಾಂಶಗಳ ಬಗ್ಗೆ ಹಾಗೂ ಅವುಗಳ ಮಹತ್ವ , ಉಪಯೋಗದ ಬಗ್ಗೆ ಅರಿವು ಮೂಡಿಸುವುದು. ಆಹಾರ ಪದಾರ್ಥಗಳ ಸುರಕ್ಷಿತ ದಾಸ್ತಾನು, ಆಹಾರದ ಗುಣಮಟ್ಟ ಕಾಯ್ದುಕೊಳ್ಳುವುದು. ಸಿರಿಧಾನ್ಯದಿಂದ ತಯಾರಿಸುವ ವೈವಿಧ್ಯಮಯ ಆಹಾರಗಳ ಬಗ್ಗೆ ತಿಳಿಸುವುದು ತರಬೇತಿಯ ಮುಖ್ಯ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ