ಕೃಷಿ ಸೌಲಭ್ಯ ಸದ್ಬಳಕೆಯಾಗಲಿ
Team Udayavani, Aug 4, 2018, 4:24 PM IST
ಮಾಯಕೊಂಡ: ಕೃಷಿ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕಡಿಮೆ ಖರ್ಚಿನಲ್ಲಿ ಅಧಿಕ ಲಾಭಗಳಿಸಿರಿ ಎಂದು ಶಾಸಕ ಪ್ರೊ| ಲಿಂಗಣ್ಣ ರೈತರಿಗೆ ಕರೆಕೊಟ್ಟರು. ಸಮೀಪದ ಮಳಲ್ಕೆರೆ ಗ್ರಾಮದಲ್ಲಿ ಕೃಷಿ ಇಲಾಖೆ
ಹಮ್ಮಿಕೊಂಡಿದ್ದ ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶೇ. 70 ರಷ್ಟು ರೈತರು ಕೃಷಿಯನ್ನೇ ಅವಲಂಬಿಸಿ ಕಷ್ಟದ ಜೀವನ ನಡೆಸುತ್ತಿದಾರೆ. ರೈತರ ಅಭ್ಯುದಯಕ್ಕಾಗಿ ಇಲಾಖೆ ವಿವಿಧ ಯೋಜನೆ ಜಾರಿಗೆ
ತಂದಿದೆ. ರೈತರು ತಾಂತ್ರಿಕತೆ ಅಳವಡಿಕೆಯೊಂದಿಗೆ ಕೃಷಿ ಪದ್ಧತಿಯಲ್ಲಿ ಬದಲಾವಣೆ ತಂದಾಗ ಮಾತ್ರ ಪ್ರಗತಿ ಸಾಧ್ಯ.
ಎರೆಹುಳು ಗೊಬ್ಬರ ಬಳಕೆ ಹೆಚ್ಚಿಸಿ ಭೂಮಿಯ ಆರೋಗ್ಯ ಕಾಪಾಡಿಕೊಳ್ಳಿ. ಬೆಳೆ ಪರಿವರ್ತನೆ ಪದ್ಧತಿಯಿಂದ ಮಣ್ಣು
ಫಲವತ್ತಾಗುತ್ತದೆ ಎಂದರು.
ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲದೇ ದೇಶದಲ್ಲಿ ರೈತರು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ 3 ಸಾವಿರಕ್ಕೂ
ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ದುರ್ದೈವ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕಿ ಹಂಸವೇಣಿ ಮಾತನಾಡಿ, ರೈತರು ಕೃಷಿಯೊಂದಿಗೆ ಉಪ ಕಸುಬಾಗಿ ಕುರಿ, ಕೋಳಿ, ಪಶು ಸಾಕಾಣಿಕೆ ಮಾಡಿದರೆ ಅರ್ಥಿಕವಾಗಿ ಬಲಾಡ್ಯರಾಗಬಹುದು ಎಂದರು.
ಬಾಡ ಜಿಪಂ ಸದಸ್ಯೆ ಶೈಲಜಾ ಮಾತನಾಡಿ, ಕೃಷಿಯನ್ನು ಶ್ರಮವಹಿಸಿ ಮಾಡಿದ್ದಾದರೆ ಉತ್ತಮ ಬೆಳೆ ಪಡೆಯಬಹುದು
ಎಂದರು. ಲೋಕಿಕೆರೆ ಜಿಪಂ ಸದಸ್ಯ ಓಬಳೇಶಪ್ಪ, ತಾಪಂ ಸದಸ್ಯರಾದ ಪರಮೇಶ್ವರಪ್ಪ, ಮುರುಗೇಶ್, ವಿಜ್ಞಾನಿಗಳಾದ ದೇವರಾಜು, ಮಲ್ಲಿಕಾರ್ಜುನ, ನಿವೃತ್ತ ಅಧಿಕಾರಿ ರಾಜಶೇಖರಪ್ಪ, ಧರ್ಮಸ್ಥಳ ಸಂಸ್ಥೆಯ ಯೋಜನಾಧಿ ಕಾರಿ ಪದ್ಮಯ್ಯ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಕೃಷಿ ತೋಟಗಾರಿಕೆ ಇಲಾಖೆ ಅಧಿ ಕಾರಿಗಳಾದ ಯತಿರಾಜು, ಅರುಣ್ ಕುಮಾರ್, ಶ್ರೀಧರಮೂರ್ತಿ ಇದ್ದರು. ಕೆ ಸಿರಿಯಣ್ಣ ಸ್ವಾಗತಿಸಿ, ಧನಂಜಯ ಮಳಲ್ಕೆರೆ ನಿರೂಪಿಸಿದರು. ರೈತರಿಗೆ ಮಣ್ಣು ಪರೀಕ್ಷೆ ಕಾರ್ಡ್ ವಿತರಿಸಲಾಯಿತು. ಕೃಷಿ ಸಲಕರಣೆಗಳು ಮತ್ತು ಔಷಧಿ, ಬೀಜಗಳ ಪ್ರಾತ್ಯಕ್ಷಿಕೆ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
MUST WATCH
ಹೊಸ ಸೇರ್ಪಡೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್