ಬ್ರಿಟಿಷರಿಗೆ ಸವಾಲಾದ ಪ್ರಥಮ ದೊರೆ
Team Udayavani, Nov 11, 2018, 5:38 PM IST
ಹರಿಹರ: ಸತತ ಮೂರು ಯುದ್ಧಗಳನ್ನು ಗೆಲ್ಲುವ ಮೂಲಕ ಬ್ರಿಟಿಷರಿಗೆ ಸವಾಲಾದ ಮೊದಲ ಭಾರತೀಯ ದೊರೆ ಟಿಪ್ಪು ಸುಲ್ತಾನ್ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು. ನಗರದ ಗುರುಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಉದ್ಘಾಟಿಸಿ, ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಹದಿಮೂರು ವರ್ಷದ ಬಾಲಕನಾಗಿದ್ದಾಗಲೇ ತಂದೆಯೊಂದಿಗೆ ಹೋರಾಡಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ. ಆದರೆ ನಾಲ್ಕನೆ ಯುದ್ದದಲ್ಲಿ ಮೋಸದಿಂದ ಅವನನ್ನು ಮಣಿಸಲಾಯಿತು ಎಂದರು.
ಟಿಪ್ಪು ಜಯಂತಿಯನ್ನು ನಾಲ್ಕು ಗೋಡೆಗಳ ಮಧ್ಯೆ, ಪೊಲೀಸ್ ಬಂದೋಬಸ್ತ್ನಲ್ಲಿ ಆಚರಿಸುತ್ತಿರುವುದು ನೋವಿನ ಸಂಗತಿ. ಟಿಪ್ಪು ಕರೆ-ಕಟ್ಟೆ ನಿರ್ಮಿಸಿ, ನಾಡಿನ ಅಭಿವೃದ್ಧಿಗೆ ಶ್ರಮವಹಿಸಿದ್ದನ್ನೆಲ್ಲಾ ಬದಿಗಿಟ್ಟು ಇಲ್ಲಸಲ್ಲದ ಆರೋಪ ಮಾಡಿ ಕೋಮುವಾದಿಗಳು ಜನರನ್ನು ವಿಭಜಿಸುತ್ತಿರುವುದು ದುರದೃಷ್ಟಕರ ಎಂದರು.
ಹಂಪಿ ಕನ್ನಡ ವಿವಿಯ ಡಾ|ಅರುಣ್ ಉಪನ್ಯಾಸ ನೀಡಿದರು. ತಾಪಂ ಉಪಾಧ್ಯಕ್ಷೆ ಜಯಮ್ಮ ಬಸವನಗೌಡ, ತಹಶೀಲ್ದಾರ್ ಆರ್. ವೆಂಕಟಮ್ಮ, ನಗರಸಭೆ ಸದಸ್ಯರಾದ ಬಿ.ಕೆ. ಸೈಯದ್ ರೆಹಮಾನ್, ಎಜಾಜ್ ಅಹ್ಮದ್, ಕೆ.ಮರಿದೇವ, ವಸಂತ ಕುಮಾರ್, ಎಲ್.ಬಿ. ಹನುಮಂತಪ್ಪ, ಎಂ.ಎಸ್.ಬಾಬುಲಾಲ್, ಸನಾವುಲ್ಲಾ, ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಇಒ ಕೆ.ನೀಲಗಿರಿಯಪ್ಪ, ಬಿಇಒ ಡಿ.ನರಸಿಂಹಪ್ಪ, ಸಿಪಿಐ ಐ.ಎಸ್. ಗುರುನಾಥ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!