![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಚಾಲಕರು-ಕ್ಲೀನರ್ ಕಾರ್ಯಕ್ಷಮತೆಗೆ ಮೇಯರ್ ಮೆಚ್ಚುಗೆ
Team Udayavani, Apr 8, 2017, 1:05 PM IST
![dvg5.jpg](https://www.udayavani.com/wp-content/uploads/2017/04/8/dvg5.jpg)
ದಾವಣಗೆರೆ: ಏ. 13ರಂದು ತಮ್ಮ ಅಧಿಕಾರಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಮೇಯರ್ ರೇಖಾ ನಾಗರಾಜ್ ಶುಕ್ರವಾರ ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಲಘು ಉಪಾಹಾರ ಕೂಟ ಏರ್ಪಡಿಸಿ, ಅವರ ಕಾಯಕ್ಷಮತೆ ಶ್ಲಾಘಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ತ್ಯಾಜ್ಯ ಸಂಗ್ರಹ ಅಧಿಕವಾಗುತ್ತಿದ್ದು, ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ವಾಹನಗಳಲ್ಲಿ 60-70 ಟನ್ನಷ್ಟು ತ್ಯಾಜ್ಯ ಡಂಪ್ ಮಾಡಲಾಗುತ್ತಿತ್ತು. ವಾಹನಗಳ ಚಾಲಕರು, ಕ್ಲೀನರ್ಗೊಂದಿಗೆ ಮಾತನಾಡಿ, ಅವರ ಸಮಸ್ಯೆ ಆಲಿಸಿದ್ದರಲ್ಲದೆ, ವಾಹನಗಳ ದುರಸ್ತಿಗೆ ಮೇಯರ್ ಕ್ರಮ ಕೈಗೊಂಡಿದ್ದರು.
ಇದರಿಂದ ಹಂತ ಹಂತವಾಗಿ ತ್ಯಾಜ್ಯ ವಿಲೇವಾರಿ ಪ್ರಮಾಣ ಹೆಚ್ಚುತ್ತಾ ಬಂದಿತಲ್ಲದೆ, 120 ಟನ್ ನಷ್ಟು ವಿಲೇವಾರಿ ಮಾಡಲಾಗಿದೆ. ಚಾಲಕರು ಹಾಗೂ ಕ್ಲೀನರ್ಗಳ ಕಾರ್ಯಕ್ಷಮತೆ ಮೆಚ್ಚಿ ಅವರಿಗೆ ಕೃತಜ್ಞತೆ ಸಲ್ಲಿಸಿದ, ಮೇಯರ್ ಸ್ವತ ತಾವೇ ಲಘು ಉಪಾಹಾರ ವಿತರಿಸಿದರು.
ಈ ವೇಳೆ ಮಾತನಾಡಿದ ಮೇಯರ್ ರೇಖಾ ನಾಗರಾಜ್, 6 ತಿಂಗಳ ಹಿಂದೆ ನಾನು ಅಧಿಕಾರ ವಹಿಸಿಕೊಂಡಾಗ ನಗರದ ತ್ಯಾಜ್ಯ ವಿಲೇವಾರಿ ಪ್ರಮಾಣ ದಿನಕ್ಕೆ 70-80 ಟನ್ ಮಾತ್ರ ಇತ್ತು. ವಾಸ್ತವದಲ್ಲಿ ದಿನನಿತ್ಯ 120 ಟನ್ ಕಸ ಉತ್ಪತ್ತಿಯಾಗುತ್ತದೆ. ಪೂರ್ಣ ಪ್ರಮಾಣದ ವಿಲೇವಾರಿ ಸಾಧ್ಯ ಆಗಿರಲಿಲ್ಲ.
ದಿನವೊಂದಕ್ಕೆ 40-50 ಟನ್ ಕಸ ಹಾಗೆ ಉಳಿಯುತ್ತಿತ್ತು. ಇದರ ಪರಿಹಾರಕ್ಕೆ ಚಾಲಕರ, ಕೀÉನರ್, ಕಸ ತುಂಬುವವರ ಸಭೆ ನಡೆಸಿದ್ದೆ. ಸಭೆಯಲ್ಲಿ ಸಿಬ್ಬಂದಿ ತಮಗೆ ಇದ್ದ ಸಮಸ್ಯೆ ಹೇಳಿಕೊಂಡಿದ್ದರು ಎಂದು ಸ್ಮರಿಸಿದರು. ವಾಹನ ದುರಸ್ತಿ ಇತರೆ ಸಮಸ್ಯೆ ಪರಿಹರಿಸಿದ ನಂತರ ದಿನನಿತ್ಯ ಕಸ ವಿಲೇವಾರಿ ಪ್ರಮಾಣ ಹೆಚ್ಚಾಗುತ್ತಾ ಹೋಯಿತು.
ಇಂದು 38 ವಾಹನಗಳಲ್ಲಿ ಸರಿಯಾಗಿ 120 ಟನ್ ಕಸ ವಿಲೇವಾರಿ ಮಾಡಲಾಗಿದೆ. ನಿಜಕ್ಕೂ ಇದು ಉತ್ತಮ ಕಾರ್ಯ. ಇದನ್ನು ಮುಂದೆ ಸಹ ಹೀಗೆ ಕಾಪಾಡಿಕೊಂಡು ಹೋಗಿ. ಸಮಸ್ಯೆಗಳು ಬಂದಾಗ ಪರಿಹರಿಸಿಕೊಂಡು ನಗರದ ಸ್ವತ್ಛತೆಗೆ ಒತ್ತುಕೊಡಿ ಎಂದು ಕೋರಿದರು. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಹಾಲೇಶ್, ಪಾಲಿಕೆ ಆಯುಕ್ತ ಬಿ.ಎಚ್. ನಾರಾಯಣಪ್ಪ, ಪಾಲಿಕೆಯ ಹಿರಿಯ ಸದಸ್ಯ ಶಿವನಹಳ್ಳಿ ರಮೇಶ್, ಪೌರ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜ್ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.