ಕಾಂಗ್ರೆಸ್‌ನ ಶಕ್ತಿಗೆ ನೀರಸ ಪ್ರತಿಕ್ರಿಯೆ


Team Udayavani, Dec 11, 2018, 3:26 PM IST

dvg-5.jpg

ದಾವಣಗೆರೆ: ಕಾಂಗ್ರೆಸ್‌ನ ಮಹತ್ವಕಾಂಕ್ಷಿ ಶಕ್ತಿ ನೋಂದಣಿ ಯೋಜನೆಯಡಿ ಜಿಲ್ಲೆಯಲ್ಲಿ ಕೇವಲ 4,702, ದಾವಣಗೆರೆ ದಕ್ಷಿಣದಲ್ಲಿ 400 ಜನರು ಮಾತ್ರ ನೋಂದಣಿ ಆಗಿದ್ದು, ಪಕ್ಷದ ಕಾರ್ಯಕರ್ತರಿಂದ ನೋಂದಣಿ ಮಾಡಿಸುವಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ಉಂಟಾಗಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಲ್ಕೀಶ್‌ ಬಾನು ಅಸಮಾಧಾನ ವ್ಯಕ್ತಪಡಿಸಿದರು.

ಸೋಮವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಪ್ರಾಜೆಕ್ಟ್ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ಗಾಂಧಿ ಅವರ ಕನಸಿನ ಕೂಸು ಶಕ್ತಿ ಪ್ರಾಜೆಕ್ಟ್. ಮುಂಬರುವ ಚುನಾವಣೆಗೆ ದಿಕ್ಸೂಚಿ ಆಗಿದೆ. ಅಂತಹ ಪ್ರಾಜೆಕ್ಟ್ ನಡಿ ನೋಂದಣಿ ಕಾರ್ಯ ಚುರುಕಾಗಿ ನಡೆಯಬೇಕಿತ್ತು. ಆದರೆ, ಪಕ್ಷದ ಕಾರ್ಯಕರ್ತರು ನೋಂದಣಿ ಕಾರ್ಯ ಮಾಡಿಸುವಲ್ಲಿ ವಿಳಂಬ ಆಗಿರುವುದರಿಂದ
ಜಿಲ್ಲೆಯಲ್ಲಿ ಶಕ್ತಿ ಪ್ರಾಜೆಕ್ಟ್ ಅಷ್ಟೊಂದು ಯಶಸ್ವಿ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತ್ತೂಂದು ಇತಿಹಾಸ ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲಿರುಳು ಪಕ್ಷದ ಸಂಘಟನೆಗಾಗಿ ಶ್ರಮಿಸಬೇಕಾಗಿದೆ. ಇಡೀ ಸಮಾಜ, ದೇಶಕ್ಕೆ ಕೇಂದ್ರ ಸರ್ಕಾರದಿಂದ ಉಂಟಾಗುತ್ತಿರುವ ಗಂಡಾಂತರಗಳ ಬಗ್ಗೆ ಮನವರಿಕೆ ಮಾಡಿಸಿ ಜಾಗೃತಗೊಳಿಸಬೇಕಾದ ಅನಿವಾರ್ಯತೆ ಇದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಎಲ್ಲಾ ವಾರ್ಡ್‌ಗಳಲ್ಲಿ, ಜಿಲ್ಲೆಯ ಪ್ರತಿ ತಾಲೂಕು,
ಗ್ರಾಮಗಳಲ್ಲಿ ಮನೆ ಮನೆಗೂ ಭೇಟಿ ನೀಡಿ ಶಕ್ತಿ ಪ್ರಾಜೆಕ್ಟ್ ನೋಂದಾವಣೆ ಕಾರ್ಯದ ಯಶಸ್ಸಿಗೆ ಶ್ರಮಿಸಬೇಕು ಎಂದು ತಿಳಿಸಿದರು. 

ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್‌ ಮಾತನಾಡಿ, 2013ರಲ್ಲಿ ಸರ್ಕಾರ ರಚನೆ ಮಾಡುವಾಗ ದಾವಣಗೆರೆಯಿಂದ ಉತ್ತಮ ಕೊಡುಗೆ ದೊರೆತಿತ್ತು. ಅದೇ ರೀತಿ ಮುಂಬರುವ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುವುದರೊಂದಿಗೆ ಅಧಿಕಾರಕ್ಕೆ ಬರಲೆಂಬ ಆಶಾದಾಯಕ ಉದ್ದೇಶವಿದೆ. ಅದಕ್ಕಾಗಿ ಕಾಂಗ್ರೆಸ್‌ ಕಾರ್ಯಕರ್ತರು ಸಂಘಟನೆಯ ಬಲವರ್ಧನೆಗಾಗಿ ಶ್ರಮಿಸಲೆಂದೇ ರಾಹುಲ್‌ ಗಾಂಧಿ ಅವರು ಶಕ್ತಿ ಪ್ರಾಜೆಕ್ಟ್ ಯೋಜನೆ ತಂದಿದ್ದಾರೆ. ಆದರಿಲ್ಲಿ ಇಷ್ಟೊಂದು ನೀರಸ ಪ್ರತಿಕ್ರಿಯೆ ದೊರೆತಿರುವುದು ಸರಿಯಲ್ಲ ಎಂದು ಹೇಳಿದರು.

ದೇಶದಲ್ಲಿ ಆಡಳಿತ ಪಕ್ಷದಿಂದ ಭಯದ ವಾತಾವರಣ, ಸುಳ್ಳಿನ ರಾಜಕಾರಣ ನಡೆಯುತ್ತಿದೆ. ಪಕ್ಷದ ಬಲವರ್ಧನೆ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಹಾಗಾಗಿ ಕಾರ್ಯಕರ್ತರು, ಮುಖಂಡರು ಸದಾ ಜಾಗೃತರಾಗಿ ಪಕ್ಷದ ಗೆಲುವಿಗೆ ಶ್ರಮಿಸಬೇಕು. ಸೋನಿಯಾ ಗಾಂಧಿ ಅವರು ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಜನ್ಮದಿನವನ್ನು ಇಂದು ಆಚರಣೆ ಮಾಡಿರುವುದು ತುಂಬಾ ಸಂತಸ ಉಂಟುಮಾಡಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಮಾತನಾಡಿ, ಶಕ್ತಿ ಪ್ರಾಜೆಕ್ಟ್‌ನಡಿ ಜಿಲ್ಲೆಯಲ್ಲಿ ನೋಂದಣಿ ಮಾಡಿಸಲು ನ.30 ರವರೆಗೆ ಸಮಯವನ್ನು ಕೆಪಿಸಿಸಿ ಅಧ್ಯಕ್ಷರು ನೀಡಿದ್ದರು. ಆದರೆ, ನಿರೀಕ್ಷೆ ಮಟ್ಟದಲ್ಲಿ ಈ ಕೆಲಸ ಆಗದ ಕಾರಣ ಡಿ.15 ರವರೆಗೆ ಕಾಲಾವಕಾಶ ನೀಡಿದ್ದಾರೆ. ಈ ಅವಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.  ಬಿಜೆಪಿಯವರು ರಾಮಮಂದಿರ ‌ಕಟ್ಟಲು 1992 ರಲ್ಲಿ ಯಾತ್ರೆ ಹಮ್ಮಿಕೊಂಡು ಇಟ್ಟಿಗೆ, ಹಣ ಸಂಗ್ರಹ ಮಾಡಿದರು. ಆ ಹಣ ಎಲ್ಲಿ ಹೋಯ್ತು. ನಿಜಕ್ಕೂ ಕೂಡ ಬಿಜೆಪಿಯವರಿಗೆ ರಾಮಮಂದಿರ ಕಟ್ಟುವ ಉದ್ದೇಶವಿಲ್ಲ. ಆದರೆ ಈಗ ಯಾತ್ರೆ ಹೆಸರಿನಲ್ಲಿ ರಾಮಮಂದಿರ ಕಟ್ಟುವ ಮಾತುಗಳನ್ನಾಡುತ್ತಾ, ಗದ್ದಲ, ಭಯ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಸರ್ಕಾರವನ್ನು ಮುಂಬರುವ ಚುನಾವಣೆಯಲ್ಲಿ ಬುಡಸಮೇತ ಉರುಳಿಸಬೇಕಿದೆ ಎಂದರು. 

ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್‌ ಮಾತನಾಡಿ, ರಾಷ್ಟ್ರದಲ್ಲಿ 10 ಲಕ್ಷ, ರಾಜ್ಯದಲ್ಲಿ 54,261 ಮತಗಟ್ಟೆಗಳಿದ್ದು, ಈ ಎಲ್ಲಾ ಮತಗಟ್ಟೆಗಳಲ್ಲಿ ಪ್ರತಿಯೊಂದು ಬೂತ್‌ನಿಂದ 20 ರಿಂದ 100 ಜನರನ್ನ ರಾಹುಲ್‌ಗಾಂಧಿ ಅವರ ಕನಸಿನ ಕೂಸಾದ ಶಕ್ತಿ ಪ್ರಾಜೆಕ್ಟ್ಗೆ ನೋಂದಣಿ ಮಾಡಿಸುವಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಮೇಯರ್‌ ಶೋಭಾ ಪಲ್ಲಾಗಟ್ಟಿ, ಉಪ ಮೇಯರ್‌ ಕೆ. ಚಮನ್‌ಸಾಬ್‌, ಮಾಜಿ ಮೇಯರ್‌ ಅನಿತಾಬಾಯಿ, ನಗರಸಭಾ ಮಾಜಿ ಉಪಾಧ್ಯಕ್ಷ ಎ. ನಾಗರಾಜ್‌, ರಾಜ್ಯ ಮಹಿಳಾ ಕಾಂಗ್ರೆಸ್‌ನ ಪುಷ್ಪಾ, ರಾಜ್ಯ ಉಸ್ತುವಾರಿ ಭವ್ಯ ನರಸಿಂಹಮೂರ್ತಿ, ದಾವಣಗೆರೆ ದಕ್ಷಿಣ ಕಾಂಗ್ರೆಸ್‌ ಅಧ್ಯಕ್ಷ ಅಯೂಬ್‌ ಪೈಲ್ವಾನ್‌, ಯುವ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಸೈಯದ್‌ ಖಾಲಿದ್‌, ಬಿ.ಎಚ್‌. ವೀರಭದ್ರಪ್ಪ, ನಂಜಾನಾಯ್ಕ, ಗೀತಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

800 ನೋಂದಣಿ ಗುರಿ 18 ರಿಂದ 35 ವರ್ಷದೊಳಗಿನ ಯುವತಿಯರಿಗಾಗಿ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಪ್ರಿಯದರ್ಶಿನಿ ಯೋಜನೆ ಹುಟ್ಟುಹಾಕಿದ್ದು, ಶಿಕ್ಷಣ, ಆರೋಗ್ಯ, ಸುರಕ್ಷತೆ, ಉದ್ಯೋಗ ಈ ನಾಲ್ಕು ಸೂತ್ರಗಳನ್ನು ಒಳಗೊಂಡಿದೆ. ಈ ಬಾರಿ ಜಿಲ್ಲೆಯಲ್ಲಿ 800 ಮಹಿಳೆಯರನ್ನು ಈ ಯೋಜನೆಯಡಿ ಸದಸ್ಯತ್ವ ಮಾಡಿಸಬೇಕಾದ ಗುರಿ ಇದೆ ಎಂದು ಪ್ರಿಯದರ್ಶಿನಿ ಯೋಜನೆ ರಾಜ್ಯ ಸಂಚಾಲಕಿ ಭವ್ಯ ನರಸಿಂಹಮೂರ್ತಿ ತಿಳಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.