ಮುಖ್ಯಮಂತ್ರಿಗೆ ಮನವಿಗಳ ಮಹಾಪೂರ-ಪರಿಹರಿಸುವ ಭರವಸೆ


Team Udayavani, Nov 18, 2018, 5:31 PM IST

dvg-1.jpg

ದಾವಣಗೆರೆ: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಎಸ್‌.ಎಸ್‌. ಕನ್ವೆನ್‌ಷನ್‌ ಹಾಲ್‌ನಲ್ಲಿ ಆಯೋಜಿರುವ 29ನೇ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯ ಮಟ್ಟದ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿಗಳ ಮಹಾಪೂರವೇ ಹರಿದು ಬಂದಿತು.

ಶನಿವಾರ ಬೆಳಗ್ಗೆ 10ಕ್ಕೆ ಬೆಂಗಳೂರಿನ ಎಚ್‌ .ಎ.ಎಲ್‌. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ನಲ್ಲಿ ಹೊರಟು 11ಕ್ಕೆ ದಾವಣಗೆರೆಯ ಸರ್ಕಾರಿ ಐಟಿಐ ಹೆಲಿಪ್ಯಾಡ್‌ಗೆ ಆಗಮಿಸುವರು ಎಂಬ ಸುದ್ದಿ ತಿಳಿದ ನೂರಾರು ಜನರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿಕ್ಕಾಗಿ ಬಂದಿದ್ದರು.

11 ಗಂಟೆಯ ವೇಳೆಗೆ ಬರಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಎರಡೂವರೆ ಗಂಟೆಯಷ್ಟು ಕಾಲ ತಡವಾಗಿ ಬಂದರೂ ಸಾರ್ವಜನಿಕರು, ವಿಕಲ ಚೇತನರು, ರೈತ ಸಂಘ, ದಲಿತ ಸಂಘರ್ಷ ಸಮಿತಿ, ಅತಿಥಿ ಉಪನ್ಯಾಸಕರು, ವಿವಿಧ ಕಾರ್ಮಿಕ ಸಂಘಟನೆಗಳವರು, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಕಾದಿದ್ದೂ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು. ಹೆಲಿಪ್ಯಾಡ್‌ನಿಂದು ಇಳಿದು ಗೌರವ ರಕ್ಷೆ ಸ್ವೀಕರಿಸಿ, ಮುಖಂಡರೊಂದಿಗೆ ಕುಶಲೋಪರಿ ಮಾತುಕತೆಯ ನಂತರ ನೇರವಾಗಿ ಮನವಿ ಸ್ವೀಕರಿಸಲು ತೆರಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ನಾಮಕಾವಸ್ಥೆಗೆ ಮನವಿ ಸ್ವೀಕರಿಸದೇ ಸಮಾಧಾನದಿಂದ ಪ್ರತಿಯೊಬ್ಬರ ಆಹವಾಲು, ಸಮಸ್ಯೆ ಆಲಿಸಿದರು. ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಕೆಲವೊಂದಕ್ಕೆ ಷರಾ ಬರೆದು, ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಕ್ರಮದ ಬಗ್ಗೆ ಸೂಚನೆ ನೀಡಿದರು.

ದಾವಣಗೆರೆ ತಾಲೂಕಿನ ಎಲೇಬೇತೂರಿನಿಂದ ತಮ್ಮ ಚಿಕ್ಕಮ್ಮನೊಂದಿಗೆ ಬಂದಿದ್ದ ಇಬ್ಬರು ಅಂಧ ಸಹೋದರರಿಯರಾದ ಎಂ.ಎಸ್‌. ಸೌಮ್ಯ ಮತ್ತು ಎಂ.ಎಸ್‌. ನಾಗರತ್ನ ಅವರು, ಮೂವರು ಅಕ್ಕ-ತಂಗಿಯರು ಹುಟ್ಟು ಕುರುಡರು. ಅಂಧತ್ವದ ನಡುವೆಯೂ ಬಿಎ, ಬಿಬಿಎ ಪೂರೈಸಿದ್ದೇವೆ. ಸರ್ಕಾರಿ ಕೆಲಸ ಕೊಡಿಸುವ ಮೂಲಕ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂಬ ಮನವಿಗೆ ಕುಮಾರಸ್ವಾಮಿ ಸಕರಾತ್ಮಕವಾಗಿ ಸ್ಪಂದಿಸಿದರು.

ನಾಪತ್ತೆಯಾಗಿರುವ ಪತಿ ಹುಡುಕಿಕೊಡುವಂತೆ ಮಹಿಳೆಯೊಬ್ಬರು ಕಣೀರು ಹಾಕುತ್ತಾ ಮನವಿ ಮಾಡಿಕೊಂಡರು. ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚಿಸಿದರು. ಕೆಲಸ ಖಾಯಂಗೆ ಒತ್ತಾಯಿಸಿ ಗುತ್ತಿಗೆ ಆಧಾರಿತ ಮಹಿಳಾ ಪೌರ ಕಾರ್ಮಿಕರು ಕಣೀರು ಹಾಕಿದರು. ಸಂಬಂಧಿತರೊಡನೆ ಚರ್ಚೆ ನಡೆಸಿ, ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ರೈತರ ಸಾಲ ಮನ್ನಾದಂತೆ ಕೊಳವೆ ಬಾವಿ ಸಾಲ ಮನ್ನಾ ಮಾಡಬೇಕು ಎಂದು ಕೆಲ ರೈತರಿಂದ ಒತ್ತಾಯ ಕೇಳಿ ಬಂದಾಗ, ಆಯ್ತಣ್ಣ ನೋಡೊಣ… ಎಂದು ನಸು ನಗುತ್ತಾ ಮುನ್ನಡೆದರು. 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ| ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಹಳೇಚಿಕ್ಕನಹಳ್ಳಿ ಎರಗುಂಟೆ ಗ್ರಾಮದ ದಲಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ (ಪ್ರೊ| ಬಿ.ಕೃಷ್ಣಪ್ಪ) ಜಿಲ್ಲಾ ಸಮಿತಿ ಕಾರ್ಯಕರ್ತರು, ಹಾಸ್ಟೆಲ್‌ ಹೊರಸಂಪನ್ಮೂಲ ನೌಕರರಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಕೇರಳ ಮಾದರಿಯಲ್ಲಿ ಮೆಕ್ಕೆಜೋಳ, ಭತ್ತಮ ಹತ್ತಿ, ಸೂರ್ಯಕಾಂತಿಗೆ ಬೋನಸ್‌ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದ ಕಾರ್ಯಕರ್ತರು, ಬೆಂಬಲ ಬೆಲೆಯ ಖರೀದಿ ಕೆಂದ್ರ, ರೈತರ ರಾಷ್ಟ್ರೀಕೃತ ಬ್ಯಾಂಕಿನ ಸಾಲಮನ್ನಾ, ದಲ್ಲಾಲರಿಂದ ವಂಚನೆಗೊಳಗಾದ ರೈತರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. 

ಬಾಪೂಜಿ ಆಸ್ಪತ್ರೆ ಮುಂಭಾಗದ ಸಿ.ಜೆ. ಆಸ್ಪತ್ರೆ ಕಾಂಪೌಂಡ್‌ಗೆ ಪುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡಿಕೊಳ್ಳಲು ಮಳಿಗೆ ಕಟ್ಟಿಸಿಕೊಟ್ಟು ಶಾಶ್ವತ ಪರಿಹಾರ ದೊರಕಿಸಿಕೊಡುವಂತೆ ಒತ್ತಾಯಿಸಿ ಜಿಲ್ಲಾ ಫುಟ್‌ಪಾತ್‌ ವ್ಯಾಪಾರಿಗಳ ಸಂಘ, ನಿರ್ಗತಿಕ ಬಡ ಅಂಗವಿಕಲರಿಗೆ ಆಶ್ರಯ ಮನೆ ಕಲ್ಪಿಸಿಕೊಡುವಂತೆ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ, ಯುಬಿಡಿಟಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ನಿಯೋಜಿಸಬೇಕು ಹಾಗೂ ಪ್ರತೀ ವರ್ಷ ಅರ್ಜಿ ಕರೆದು ಸಂದರ್ಶನ ಮಾಡದೇ, ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯಾನಿರ್ವಹಿಸಿದವರನ್ನೇ ಮುಂದುವರೆಸಿ ನಿಯೋಜಿಸುವಂತೆ ಯುಬಿಡಿಟಿ ಇಂಜಿನಿಯರಿಂಗ್‌ ಕಾಲೇಜು ಅತಿಥಿ ಉಪನ್ಯಾಸಕರು ಸಿಎಂಗೆ ಮನವಿ ಸಲ್ಲಿಸಿದರು.

ದಾವಣಗೆರೆಯಲ್ಲಿ ಕೈಗಾರಿಕೆಗಳನ್ನು ಹಾಕಬೇಕೆಂದು ಒತ್ತಾಯಿಸಿ ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿ, ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ರಾಜ್ಯ ಸಮಿತಿ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಹಾಗೂ ವೀರಶೈವ ಜಂಗಮರಿಗೆ ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಯುವಂತೆ ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್‌ ಗೆ ಒಳಗಾಗಿರುವ ರೋಗಿಗಳಿಗೆ ಮಸಾಶನ ನೀಡುವಂತೆ ತುಮಕೂರು ಶ್ರೀ ಸಿದ್ಧಗಂಗಾಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮಿ, ಉಪನ್ಯಾಸಕ ಹಾಗೂ ಪ್ರಾಂಶುಪಾಲರ ವೇತನಕ್ಕೆ ಸಂಬಂಧಿಸಿದಂತೆ ಕುಮಾರ್‌ ನಾಯಕ್‌ ವರದಿ ಶಿಫಾರಸು ಯಥಾವತ್ತಾಗಿ ಜಾರಿ ಮತ್ತು ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.