ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿ ಪ್ರತಿಭಟನೆ
Team Udayavani, Feb 28, 2019, 8:36 AM IST
ದಾವಣಗೆರೆ: ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬುಧವಾರ ಸಾಮಾಜಿಕ ಸಂಘರ್ಷ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಾವೆಲ್ಲರೂ ಒಂದು ಎಂಬ ಮಾತು ಹೇಳುತ್ತಿರುವ ನಡುವೆಯೂ ದಲಿತರನ್ನು ಅತ್ಯಂತ ಕೀಳಾಗಿ ನೋಡುವಂತಹ ಘಟನೆಗಳು ನಡೆಯುತ್ತಲೇ ಇವೆ. ಗದಗ ಜಿಲ್ಲೆಯ ಅಸೂಟಿ, ಯಲಬುರ್ಗಿಯಲ್ಲಿ ದಲಿತರ ಮೇಲೆ ನಡೆದಿರುವಂತಹ ದೌರ್ಜನ್ಯಗಳು ಜಾತಿ ವ್ಯವಸ್ಥೆಯನ್ನು ಎತ್ತಿ ತೋರಿಸುತ್ತಿವೆ. ದಲಿತರ ಮೇಲಿನ ದೌರ್ಜನ್ಯಗಳನ್ನ ಸರ್ಕಾರ ಕೂಡಲೇ ತಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಸವಾದಿಗಳ ನಾಡಾದ ಕರ್ನಾಟಕದಲ್ಲೂ ಅಸ್ಪೃಶ್ಯತೆ ಆಚರಣೆಗಳು ನಡೆಯುತ್ತಿವೆ. ಈಚೆಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ ಹುತಾತ್ಮರಾದ ಉತ್ತರ ಪ್ರದೇಶದದ ಯೋಧರೊಬ್ಬರ ಶವ ಸಂಸ್ಕಾರಕ್ಕೆ ದಲಿತರು ಎಂಬ ಕಾರಣಕ್ಕೆ ಅಲ್ಲಿನ ಮೇಲ್ಜಾತಿಯವರು ಸರ್ಕಾರಕ್ಕೆ ಸಂಬಂಧಿಸಿದ 10+10 ಅಡಿ ಜಾಗ ನೀಡಲು ರಂಪಾಟವನ್ನೇ ನಡೆಸಿದರು. ಅಂತಹ ದೇಶದ್ರೋಹ ಘಟನೆ ನಡೆದಿರುವುದು ರಾಷ್ಟ್ರೀಯತೆ ಹೇಳುವ ಪಕ್ಷದ ಸರ್ಕಾರ ಇರುವ ರಾಜ್ಯದಲ್ಲಿ ಎಂಬುದು ಖಂಡನೀಯ ಎಂದು ದೂರಿದರು.
ಸಮಿತಿ ರಾಜ್ಯ ಅಧ್ಯಕ್ಷ ಪ್ರೊ| ಸಿ.ಕೆ.ಮಹೇಶ್, ಜಿಲ್ಲಾ ಅಧ್ಯಕ್ಷ ಪಿ. ತಿಪ್ಪೇರುದ್ರಪ್ಪ, ಬಿ.ಎನ್. ನಾಗೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು