ನಗರಕ್ಕೆ ಬಂದ ರನ್ ಫಾರ್ ಮೋದಿ ತಂಡ
Team Udayavani, Feb 11, 2019, 6:26 AM IST
ದಾವಣಗೆರೆ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಓಟ ಹಮ್ಮಿಕೊಂಡು ಮಾರ್ಗಮಧ್ಯೆ ಭಾನುವಾರ ನಗರಕ್ಕೆ ಆಗಮಿಸಿದ ಬೆಂಗಳೂರು ಮೂಲದ ರೂಪಾ ಹಾಗೂ ಕುಮಾರ್ ದಂಪತಿ ನೇತೃತ್ವದ ರನ್ ಫಾರ್ ಮೋದಿ ತಂಡವನ್ನು ನಗರದ ಅಂಬೇಡ್ಕರ್ ವೃತ್ತದಲ್ಲಿ ಟೀಂ ಮೋದಿ, ಹಿಂದೂ ಜಾಗರಣಾ ವೇದಿಕೆಯಿಂದ ಸ್ವಾಗತಿಸಲಾಯಿತು.
ಈ ವೇಳೆ ರನ್ ಫಾರ್ ಮೋದಿ ತಂಡದ ನೀಲಗುಂದದ ಮಲ್ಲಪ್ಪ ಕುಮಾರ್ ಮಾತನಾಡಿ, ವಿಶ್ವನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೂಮ್ಮೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬುದು ಓಟದ ಮುಖ್ಯ ಉದ್ದೇಶವಾಗಿದೆ ಎಂದರು. ಅದಕ್ಕಾಗಿ ಜ.26 ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರನ್ ಫಾರ್ ಮೋದಿ ಎಂಬ ಶೀರ್ಷಿಕೆಯಡಿ 3600 ಕಿ. ಮೀ. ಓಟ ಹಮ್ಮಿಕೊಂಡಿದ್ದು, ಈಗಾಗಲೇ 900ಕ್ಕೂ ಹೆಚ್ಚು ಕಿ.ಮೀ ಕ್ರಮಿಸಿದ್ದೇವೆ ಎಂದರು.
ಈ ಯಾತ್ರೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ, ಯೋಜನೆಗಳ ಬಗ್ಗೆ ಜನರಿಗೆ ಪರಿಚಯ ಮಾಡಿಕೊಡುತ್ತಿದ್ದೇವೆ. ಜೊತೆಗೆ ಸ್ವೀಟ್ ಇಂಡಿಯಾ, ಫಿಟ್ ಇಂಡಿಯಾ, ಬಿಪಿ-ಷುಗರ್ ಕ್ವಿಟ್ ಇಂಡಿಯಾ ಘೋಷಣೆಯೊಂದಿಗೆ ಉತ್ತಮ ಆರೋಗ್ಯದ ಅರಿವು ಮೂಡಿಸಲಾಗುತ್ತಿದೆ ಎಂದರು.
ಅಲ್ಲದೇ ಸ್ವಚ್ಛ ಭಾರತ್ ಯೋಜನೆಯ ತಿಳಿವಳಿಕೆ ಮೂಡಿಸಲಾಗುತ್ತಿದೆ. ಜೊತೆಗೆ ದೇಶದ ಗಡಿ ಕಾಯುತ್ತಿರುವ ಸೈನಿಕರಿಗಾಗಿ ಕಾಣಿಕೆ ಸಂಗ್ರಹಿಸುತ್ತಿದ್ದು, ಯಾತ್ರೆ ನಂತರ ಪ್ರಧಾನಿ ಮೋದಿ ಅವರ ಮೂಲಕ ಸೈನಿಕರಿಗೆ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು. ರನ್ ಫಾರ್ ಮೋದಿ ತಂಡದ ರೂಪಾ ಮಾತನಾಡಿ, ನಮ್ಮ ಉದ್ದೇಶದಲ್ಲಿ ಯಾವುದೇ ಸ್ವಾರ್ಥವಿಲ್ಲ. ಮತ್ತೂಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಅಧಿಕಾರಕ್ಕೆ ಬರಬೇಕೆಂಬುದು ಮುಖ್ಯ ಧ್ಯೇಯ ಹಾಗೂ ಉದ್ದೇಶವಾಗಿದೆ. ಏ.10ಕ್ಕೆ ಓಟ ಅಂತ್ಯಗೊಳಿಸುವ ಗುರಿ ಇದೆ ಎಂದರು. ಈ ವೇಳೆ ಟೀಂ ಮೋದಿ ಸಂಚಾಲಕಿ ಶಾರದ, ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಎಸ್.ಟಿ. ವೀರೇಶ್, ರಾಜನಹಳ್ಳಿ ಶಿವಕುಮಾರ್, ಪಿ.ಸಿ. ಶ್ರೀನಿವಾಸ್, ಧನುಷ್, ಕಾರ್ತಿಕ್, ಸತೀಶ್ ಪೂಜಾರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ