ರಾಜ್ಯಕ್ಕೆ ಬೇಕಿದೆ ಪ್ರಬಲ ಪ್ರಾದೇಶಿಕ ಪಕ್ಷ


Team Udayavani, Feb 4, 2019, 5:14 AM IST

dvg-1.jpg

ದಾವಣಗೆರೆ: ಕರ್ನಾಟಕದ ಜನತೆಗೆ ಅತಿ ಬಲಿಷ್ಠ, ಪ್ರಬಲ ಪ್ರಾದೇಶಿಕ ಪಕ್ಷ ಬೇಕಿದೆ ಎಂದು ಪ್ರತಿಪಾದಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಮುಖಂಡ, ಚಿತ್ರನಟ ಉಪೇಂದ್ರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರದಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ಎಲ್ಲಾ 28 ಕ್ಷೇತ್ರಗಳ ಅಭ್ಯರ್ಥಿಗಳ ಬೆನ್ನಲುಬಾಗಿ ನಿಲ್ಲುವ ಜೊತೆಗೆ ಪ್ರಚಾರವನ್ನೂ ನಡೆಸುತ್ತೇನೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆ ಇತ್ತು. ಕಾರಣಾಂತರದಿಂದ ಸಾಧ್ಯವಾಗಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇಂತದ್ದೇ ಕ್ಷೇತ್ರದಿಂದ ಸ್ಪರ್ಧಿಸುವ ಆಲೋಚನೆ ಇಲ್ಲ. ಒಂದೊಮ್ಮೆ ಯಾವುದಾದರೂ ಕ್ಷೇತ್ರದಲ್ಲಿ ಅಭ್ಯರ್ಥಿ ಸಿಗದೇ ಇದ್ದಲ್ಲಿ ನಾನೇ ಸ್ಪರ್ಧಿಸುತ್ತೇನೆ. ಗೆದ್ದರೆ ನಾನು ಸಿನಿಮಾ ರಂಗದಲ್ಲಿ ಮುಂದುವರೆಯುವುದಿಲ್ಲ. ಚುನಾವಣೆಯಲ್ಲಿ ಗೆದ್ದಾದ ಮೇಲೆ ನಾನು ಜನರ ಸೇವಕ. ಹಾಗಾಗಿ ಚಿತ್ರರಂಗದಿಂದ ನಿವೃತ್ತಿ ಆಗುವುದಾಗಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಿನ ವ್ಯವಸ್ಥೆಯಲ್ಲಿ ಚುನಾವಣೆಯಲ್ಲಿ ಗೆಲ್ಲಬೇಕು ಎನ್ನುವುದಾದರೆ ಹಣ, ಜಾತಿ, ಪ್ರಭಾವ ಅಥವಾ ಇನ್ನೇನಾದರೂ ಬೇಕು ಎಂಬ ಭಾವನೆ ಪ್ರಬಲವಾಗಿ ಬೇರೂರಿದೆ. ಹಣ ಕೊಟ್ಟರೆ ಮಾತ್ರ ಮತದಾನ ಮಾಡುತ್ತಾರೆ ಎಂದು ಸಹ ಹೇಳುವ ಮೂಲಕ ಜನರನ್ನೇ ಒಂದು ರೀತಿಯಲ್ಲಿ ನೋಡುವ ವಾತಾವರಣವೂ ಇದೆ. ಇಂತಹ ವಾತಾವರಣ ಬದಲಾಯಿಸಲೇಬೇಕಿದೆ. ಇಲ್ಲದೇ ಹೋದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥವೇ ಇರುವುದಿಲ್ಲ. ನಾನು ಎಲ್ಲವನ್ನೂ ಮಾಡಿಯೇ ಬಿಡುತ್ತೇನೆ ಅಂದುಕೊಂಡಿಲ್ಲ. ಈಗಲೇ ಎಲ್ಲಾ ಬದಲಾವಣೆ ಆಗುತ್ತದೆ ಎಂಬ ಭಾವನೆಯೂ ಇಲ್ಲ. ಭವಿಷ್ಯದಲ್ಲಿ ಆಗುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಉತ್ತಮ ಪ್ರಜಾಕೀಯ ಪಕ್ಷದ ಸಂಘಟನೆ ಮಾಡಲಿಕ್ಕೆ ಹೋಗುವುದೇ ಇಲ್ಲ. ಸಂಘಟನೆ, ಪಕ್ಷದ ಕಚೇರಿ ಯಾವುದೂ ಇರುವುದೇ ಇಲ್ಲ. ಯಾರಿಗೂ ಪಾರ್ಟಿ ಫಂಡ್‌ ಕೊಡುವ ಮಾತೇ ಇಲ್ಲ. ನಮ್ಮ ಪಕ್ಷಕ್ಕೆ ಬರುವಂತಹವರೇ ಆಗಲಿ ಹಣ ಸಂಗ್ರಹ ಮಾಡುವುದು, ಕಚೇರಿ ಪ್ರಾರಂಭಿಸುವಂತೆ ಇಲ್ಲ. ಕೆಲಸ-ಕಾರ್ಯ ಬಿಟ್ಟು ಬರಬೇಡಿ. ಉತ್ತಮ ಪ್ರಜಾಕೀಯ ಪಕ್ಷದ್ದು ಮೌನಕ್ರಾಂತಿ ಎಂಬುದನ್ನು ನಾನು ಒತ್ತಿ ಒತ್ತಿ ಹೇಳುತ್ತೇನೆ. ಹಣ, ಜಾತಿ, ಪ್ರಭಾವಕ್ಕಿಂತಲೂ ವಿಚಾರದ ಆಧಾರದ ಮೇಲೆ ಚುನಾವಣೆ ಎದುರಿಸಲಾಗುವುದು ಎಂದರು.

ಈಗ ಚುನಾವಣೆ ಗೆಲ್ಲುವುದು ಎಂದರೆ ಹಣ ನೀಡುವುದು, ಅವರಿವರನ್ನು ಬೈಯುವುದೇ ಆಗಿದೆ. ಅದಕ್ಕಿಂತಲೂ ಜನಗಳಿಗೆ ನಾವೇನು ಮಾಡುತ್ತೇವೆ ಎಂಬ ವಿಚಾರದ ಆಧಾರದಲ್ಲಿ ಚುನಾವಣೆ ನಡೆಯುವಂತಾಗಬೇಕು. ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ವಿದ್ಯಾರ್ಹತೆಯ ಮಾನದಂಡ ಇಲ್ಲ. ಸಂವಿಧಾನದಲ್ಲೇ ಇಲ್ಲ ಎಂದಾದ ಮೇಲೆ ನಮ್ಮಲ್ಲೂ ಇಲ್ಲ ಎಂದು ತಿಳಿಸಿದರು.

ನನ್ನ ಪ್ರಕಾರ ಸಮಾಜ ಸೇವೆಗೆ ರಾಜಕೀಯ ಅತ್ಯುತ್ತಮ ವೇದಿಕೆ. ರಾಜಕಾರಣ ಜನರ ಧ್ವನಿ ಆಗಬೇಕು. ಏನೇ ಬದಲಾವಣೆ ಮಾಡುವುದೇ ಆದರೆ ರಾಜಕೀಯದಿಂದ ಮಾಡಬಹುದು. ಜನರ ಅಭಿವೃದ್ಧಿ, ಸಮಾಜದ ಬದಲಾವಣೆಗಾಗಿ ರಾಜೀ ರಹಿತವಾದ ರಾಜಕೀಯ ಮಾಡುವುದಕ್ಕಾಗಿಯೇ ನಾನು ಚಿತ್ರರಂಗಕ್ಕೆ ಬಂದಿದ್ದು, ಕಳೆದ 25 ವರ್ಷದಿಂದ ನನ್ನ ಚಿಂತನೆಗಳನ್ನ ನನ್ನ ಕುಟುಂಬ, ಆಪ್ತರು, ಗೆಳೆಯರು, ಅಭಿಮಾನಿಗಳು ಎಲ್ಲರೊಟ್ಟಿಗೆ ಹಂಚಿಕೊಳ್ಳುತ್ತಲೇ ಇದ್ದೇನೆ. ರಾಜಕೀಯ, ಚುನಾವಣಾ ವ್ಯವಸ್ಥೆಯಲ್ಲೇ ಬದಲಾವಣೆ ಮಾಡುವ ಉದ್ದೇಶದ ಕಾರಣಕ್ಕೆ ಉತ್ತಮ ಪ್ರಜಾಕೀಯ ಪ್ರಾರಂಭಿಸಿದ್ದೇನೆ. ಶೇ. 20 ರಷ್ಟು ಜನರು ಬದಲಾವಣೆ ಬಯಸುತ್ತಲೇ ಇರುತ್ತಾರೆ. ಅಂತಹವರಿಗೆ ಒಳ್ಳೆಯ ವೇದಿಕೆ ಸಿಕ್ಕಲ್ಲಿ, ಸಾಕಷ್ಟು ಬದಲಾವಣೆ ಆಗಬಹುದು. ಆ ಮನಸ್ಸು, ಗುರಿ ಇದ್ದವರು ಯಾರೇ ಆಗಲಿ ನಮ್ಮ ಪಕ್ಷಕ್ಕೆ ಬರಬಹುದು ಎಂದು ತಿಳಿಸಿದರು.

ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಯಾಕೆ ಬೇಕು. ಅದರ ಅಗತ್ಯವೇ ಇಲ್ಲ, ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಗತ್ಯ ಬಹುಮತ ದೊರೆತಲ್ಲಿ ಮಾತ್ರವೇ ಅಧಿಕಾರ ನಡೆಸುತ್ತೇವೆ. ಒಂದೊಮ್ಮೆ ನಮ್ಮ ಪಕ್ಷ ಸರ್ಕಾರದ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವಂತಹ ವಾತಾವರಣ ನಿರ್ಮಾಣವಾದಲ್ಲಿ ನಮ್ಮ ಪಕ್ಷದ ಬೇಡಿಕೆ ಈಡೇರಿಸುವ ಪಕ್ಷದ ಸರ್ಕಾರ ರಚನೆಗೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ನಮ್ಮ ಬೇಡಿಕೆ ಈಡೇರಿಸದೇ ಹೋದಲ್ಲಿ ಬೆಂಬಲ ವಾಪಸ್‌ ಪಡೆಯುವುದು ಇದ್ದೇ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಚುನಾವಣಾ ರಾಜಕೀಯದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಉತ್ತಮ ಪ್ರಜಾಕೀಯ ಪಕ್ಷವು ಅಭ್ಯರ್ಥಿಗಳ ಆಯ್ಕೆಗೆ ಪ್ರಶ್ನೋತ್ತರ ಹಮ್ಮಿಕೊಂಡಿದೆ. ಅಭ್ಯರ್ಥಿಗಳು ತಮ್ಮ ಉತ್ತರ ನೀಡಬೇಕು. ನಂತರ ಸಂದರ್ಶನ ನಡೆಸಲಾಗುವುದು. ತಮ್ಮ ಕ್ಷೇತ್ರದಲ್ಲಿ ಬದಲಾವಣೆ, ಕೆಲಸ-ಕಾರ್ಯಗಳ ಬಗ್ಗೆ ಸಮಗ್ರ ವರದಿ ನೀಡಬೇಕು. ಎಲ್ಲಾ ಪ್ರಕ್ರಿಯೆ ನಂತರ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳು ಗೆಲ್ಲಬೇಕು. ಯಥಾ ರಾಜ ತಥಾ ಪ್ರಜೆ ಎನ್ನುವುದು ಯಥಾ ಪ್ರಜೆ, ತಥಾ ರಾಜ… ಎನ್ನುವಂತಹ ಮಹತ್ವದ ಬದಲಾವಣೆ ಆಗಬೇಕು. ಪ್ರಜೆಗಳೇ ರಾಜರಾಗಬೇಕು. ಕಾರ್ಪೊರೇಟ್ ವ್ಯವಸ್ಥೆಯಂತಹ ರಾಜಕೀಯ ಬದಲಾವಣೆಯೇ ನಮ್ಮ ಮೊದಲ ಗುರಿ. ಅಧಿಕಾರ ಅಲ್ಲವೇ ಅಲ್ಲ ಎಂದು ತಿಳಿಸಿದರು.

ವಾಪಸ್‌ ಕರೆಸಿಕೊಳ್ಳಬೇಕು…
ರಾಜಕೀಯ ಪಕ್ಷಗಳು ಚುನಾವಣೆಗೆ 6 ತಿಂಗಳ ಮುಂಚೆಯೇ ಪ್ರಣಾಳಿಕೆ ಬಿಡುಗಡೆ ಮಾಡಬೇಕು. ಉತ್ತಮ ಪ್ರಜಾಕೀಯ ಪಕ್ಷ ಮೊದಲು ಜನರ ಪ್ರಣಾಳಿಕೆ ಬಿಡುಗಡೆ ಮಾಡುತ್ತದೆ. ನಂತರ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತದೆ. ಒಟ್ಟಾರೆಯಾಗಿ ರಾಜಕೀಯ ಚುನಾವಣಾ ವ್ಯವಸ್ಥೆ ಬದಲಾವಣೆಯಲ್ಲಿ ಮತದಾರರು ಸಹ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತಾಗಬೇಕು ಎಂಬುದು ನಮ್ಮ ಪಕ್ಷದ ಆಶಯ. ಅದಕ್ಕಾಗಿ ನಾವು ಸೆಲೆಕ್ಷನ್‌, ಎಲೆಕ್ಷನ್‌, ಕರೆಕ್ಷನ್‌, ರಿಜೆಕ್ಷನ್‌ ಮತ್ತು ಪ್ರಮೋಷನ್‌… ಎಂಬ ಅಂಶಗಳಿಗೆ ಹೆಚ್ಚಿನ ಗಮನ ನೀಡುತ್ತೇವೆ ಎಂದ ಅವರು, ಒಂದೊಮ್ಮೆ ನಾವು ಆಯ್ಕೆ ಮಾಡಿದಂತವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದೇ ಹೋದಲ್ಲಿ ವಾಪಸ್‌ ಕರೆಸಿಕೊಳ್ಳುವ ವ್ಯವಸ್ಥೆ ಬೇಕು. ಸಂವಿಧಾನದಲ್ಲಿ ಅದು ಇಲ್ಲದೇ ಹೋದರೂ ಪಕ್ಷದಲ್ಲಾದರೂ ಇರಬೇಕು ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.