ಅನಾಥೆಗೆ ಆಸರೆ….ಕವಿತಾಬಾಯಿ ಕೈ ಹಿಡಿದ ರಾಮಕೃಷ್ಣ


Team Udayavani, Aug 30, 2018, 1:13 PM IST

dvg-2.jpg

ದಾವಣಗೆರೆ: ಯಾವ ಕ್ಷಣದಲ್ಲಾದರೂ ಮಳೆ ಸುರಿಯಬಹುದೆನ್ನುವ ಕಾರ್ಮೋಡದ ವಾತಾವರಣ…, ವರನ ಕಡೆಯವರು ಇನ್ನೂ ಬರಲಿಲ್ಲ ಎಂಬ ಧಾವಂತ…, ಮುಹೂರ್ತದ ವೇಳೆಗೆ ಬಂದೇ ಬರುವ ವಿಶ್ವಾಸದೊಂದಿಗೆ ಧಾರೆ ಎರೆದುಕೊಡಲು ಸಿದ್ಧತೆ…, ಸಮಯಕ್ಕೆ ಸರಿಯಾಗಿ ವರನ ಕಡೆಯವರು ಬರುತ್ತಿದ್ದಂತೆ, ಲಗುಬಗೆಯಲ್ಲೆ ಮುಹೂರ್ತಕ್ಕೆ ಅಣಿ…, ಮದುವೆ ಆಗುತ್ತಿದ್ದಂತೆ ಸಂಭ್ರಮದ ಕ್ಷಣ… ಇದು, ನಗರದ ಹೊರ ವಲಯದ ಶ್ರೀರಾಮ ನಗರದಲ್ಲಿರುವ ಮಹಿಳಾ ನಿಲಯದಲ್ಲಿ ಕಂಡು ಬಂದ ವಾತಾವರಣ. ಹಲವಾರು ಆದರ್ಶ ವಿವಾಹಕ್ಕೆ ಮುನ್ನುಡಿ ಬರೆದಿರುವ ರಾಜ್ಯ ಮಹಿಳಾ ನಿಲಯ ಬುಧವಾರ ಬೆಳಗ್ಗೆ 30ನೇ ಆದರ್ಶ ವಿವಾಹಕ್ಕೆ ಸಾಕ್ಷಿಯಾಯಿತು.

ಮೂಲತಃ ವಿಜಯಪುರದ, ಕಳೆದ ಮೂರು ವರ್ಷಗಳಿಂದ ಮಹಿಳಾ ನಿಲಯದಲ್ಲಿರುವ ಕವಿತಾಬಾಯಿ ಮತ್ತು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹಾರ್ಸಿಯ ರಾಮಕೃಷ್ಣ ಹೆಗಡೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಕ್ಷಣಕ್ಕೆ ಗಣ್ಯರು ಸಾಕ್ಷಿಯಾದರು. 

ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಕವಿತಾಬಾಯಿ ಕೌಟಂಬಿಕ ಕಾರಣಕ್ಕೆ ಮನೆ ಬಿಟ್ಟು ಬಂದು ಮಹಿಳಾ ನಿಲಯದಲ್ಲಿ ಇದ್ದರು. ಯಾರೂ ಆಕೆಯ ಮುಂದಿನ ಜೀವನದ ಜವಾಬ್ದಾರಿಗೆ ಮುಂದೆ ಬರದೇ ಇರುವ ಕಾರಣಕ್ಕೆ ಮಹಿಳಾ ನಿಲಯದ ಅಧಿಕಾರಿಗಳೇ ಕವಿತಾಬಾಯಿಯ ವಿವಾಹವನ್ನು ರಾಮಕೃಷ್ಣ ಹೆಗಡೆ ಅವರೊಂದಿಗೆ ನೆರವೇರಿಸುವ ಮೂಲಕ ಹೊಸ ಜೀವನಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.

ರಾಮಕೃಷ್ಣ ಹೆಗಡೆಯವರ ಮಾವ ಗೋಪಾಲ ಗಣಪತಿ ಹೆಗಡೆ 8 ವರ್ಷದ ಹಿಂದೆ ಇದೇ ಮಹಿಳಾ ನಿಲಯದಲ್ಲೇ ಅನಿತಾ ಎಂಬುವರನ್ನು ಮದುವೆಯಾಗಿದ್ದರು. ಈಗ ಅವರೇ ತಮ್ಮ ಅಳಿಯನ ಮದುವೆಗೆ ಕಾರಣರಾಗಿದ್ದಾರೆ. ವಿವಾಹದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಕೃಷ್ಣ ಹೆಗಡೆ, ಅನಾಥೆಗೆ ಬಾಳು ಕೊಡಬೇಕು ಎಂಬ ಅಪೇಕ್ಷೆ ಇತ್ತು.
ಅದರಂತೆ ಮದುವೆ ಆಗಿರುವುದು ಖುಷಿ ಆಗಿದೆ. ಕವಿತಾಬಾಯಿ ಈವರೆಗೆ ಸಾಕಷ್ಟು ಕಷ್ಟ- ಸಮಸ್ಯೆ ಅನುಭವಿಸಿದ್ದಾರೆ. ಚೆನ್ನಾಗಿ ನೋಡಿಕೊಳ್ಳುವ ಮೂಲಕ ಕಷ್ಟ-ಸಮಸ್ಯೆ ಪರಿಹರಿಸುತ್ತೇನೆ ಎಂದರು.

ಕವಿತಾಬಾಯಿ ಮಾತನಾಡಿ, ನಾನು ಮೂಲತಃ ವಿಜಯಪುರದವಳು. ಮೂರು ವರ್ಷದಿಂದ ಮಹಿಳಾ ನಿಲಯದಲ್ಲಿ ಇದ್ದೇನೆ. ಮಹಿಳಾ ನಿಲಯದ ಅಧಿಕಾರಿಗಳು ಸಾಕಷ್ಟು ಚೆನ್ನಾಗಿ ನೋಡಿಕೊಂಡಿದ್ದಾರೆ. ನಾನು ಬಹಳ ಕಷ್ಟ
ಅನುಭವಿಸಿದ್ದೇನೆ. ಇನ್ನು ಮುಂದೆ ಆ ಎಲ್ಲ ಕಷ್ಟ ಮರೆತು, ಚೆನ್ನಾಗಿ ಹೊಸ ಜೀವನ ನಡೆಸುತ್ತೇನೆ ಎನ್ನುತ್ತಲೇ ಗದ್ಗದಿತರಾದರು. 

ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಮಾತನಾಡಿ, ತಮಗೆ ತಂದೆ-ತಾಯಿ ಯಾರೂ ಇಲ್ಲ. ನಾವು ಅನಾಥರು ಅಂದುಕೊಂಡವರಿಗೆ ಹೊಸ ಬಾಳನ್ನು ಕೊಡುವುದು ಬಹಳ ಸಂತೋಷದ ವಿಚಾರ. ಮಹಿಳಾ ನಿಲಯದಲ್ಲಿ ಈವರೆಗೆ ಇದೇ ರೀತಿ 30 ಮದುವೆಗಳು ನಡೆದಿವೆ. ಅವರೆಲ್ಲರೂ ಚೆನ್ನಾಗಿ ಇದ್ದಾರೆ. ಇನ್ನೂ ನಾಲ್ವರ ಮದುವೆ ನಡೆಯಲಿದೆ ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್‌, ಅಶ್ವತಿ, ಮಹಿಳಾ ನಿಲಯದ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡುವ ಮುನ್ನ ವರನ ಬಗ್ಗೆ ಕೂಲಂಕುಷವಾಗಿ ತಿಳಿದು, ಅಲ್ಲಿಗೆ ಹೋಗಿ ಪರಿಶೀಲನೆ ನಡೆಸಿದ ನಂತರವೇ
ಮದುವೆ ಮಾಡಿಕೊಡಲಾಗುವುದು. ಈವರೆಗೆ ಮದುವೆಯಾದ ಎಲ್ಲರೂ ಚೆನ್ನಾಗಿರುವುದು ಸಂತೋಷದ ವಿಚಾರ ಎಂದರು.
 
ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಕೆ.ಆರ್‌. ಜಯಶೀಲ, ಉಪಾಧ್ಯಕ್ಷೆ ಟಿ. ರಶ್ಮಿ ರಾಜಪ್ಪ, ಸದಸ್ಯ ಡಿ. ಸಿದ್ದಪ್ಪ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ, ಮುಖ್ಯ ಯೋಜನಾಧಿಕಾರಿ ಪಿ. ಬಸವನಗೌಡ, ಸಹಾಯಕ ಯೋಜನಾಧಿಕಾರಿ ಶಶಿಧರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್‌. ವಿಜಯ್‌ ಕುಮಾರ್‌, ಮಹಿಳಾ ನಿಲಯದ ಅಧೀಕ್ಷಕಿ ಪ್ರಪುಲ್ಲಾ ಡಿ. ರಾವ್‌, ಶ್ರುತಿ ಇತರರು ಈ ಆದರ್ಶ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು.

ನವ ವಧುವಿಗೆ ಉತ್ತರ ಕನ್ನಡದಲ್ಲಿ ಆಗುವ ಮಳೆಯ ಪರಿಚಯ ಮಾಡಿಕೊಡುವಂತೆ ಏನೋ ಮದುವೆ, ಆರತಕ್ಷತೆ ಮುಗಿಯುವ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಉತ್ತರ ಕನ್ನಡದವರು ಕಾಲಿಟ್ಟ ಪ್ರಭಾವ… ಎಂಬ ಹಾಸ್ಯದ ಮಾತು ಕೇಳಿ ಬಂದವು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.