ಮೌಡ್ಯತೆ ಮೆಟ್ಟಿ ನಿಲ್ಲುವುದೇ ನಿಜವಾದ ಧರ್ಮಾಚರಣೆ


Team Udayavani, Feb 10, 2019, 6:05 AM IST

dvg-4.jpg

ಹರಿಹರ: ಮೌಡ್ಯತೆ ಮೆಟ್ಟಿ ನಿಂತು ವೈಚಾರಿಕ, ವೈಜ್ಞಾನಿಕ ತಳಹದಿಯಲ್ಲಿ ಬದುಕು ನಡೆಸುವುದೇ ನಿಜವಾದ ಧರ್ಮಾಚರಣೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶರಣರು ಹೇಳಿದರು.

ತಾಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಶನಿವಾರ ಎರಡನೇ ದಿನದ ವಾಲ್ಮೀಕಿ ಜಾತ್ರೆಯಲ್ಲಿ ಧರ್ಮಸಭೆ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಆದರೆ ಕೆಲವರು ಮೌಡ್ಯ, ಕಂದಾಚಾರಗಳನ್ನೇ ಧರ್ಮವೆಂದು ಬಿಂಬಿಸುತ್ತಾರೆ. ಮೂಢನಂಬಿಕೆಗಳು ಧರ್ಮ ವಿರೋಧಿ ಎಂದರು.

ಈ ಪೀಠದ ಬಲವರ್ಧನೆಗಾಗಿ ತಾವು ಮಾಜಿ ಸಚಿವ ದಿ| ತಿಪ್ಪೇಸ್ವಾಮಿ, ಲಿಂ| ಪುಣ್ಯಾನಂದಪುರಿ ಶ್ರೀ ಹಾಗೂ ಇತರರೊಂದಿಗೆ ಸುದೀರ್ಘ‌ ಚರ್ಚೆ ನಡೆಸಿದ್ದಾಗಿ ತಿಳಿಸಿದ ಶರಣರು, ಮಠ ಹಾಗೂ ಸಮಾಜ ಕಟ್ಟುವ ಅರ್ಧ ಕೆಲಸ ಪುಣ್ಯಾನಂದಪುರಿ ಶ್ರೀಗಳಿಂದಾಗಿತ್ತು. ಉಳಿದರ್ಧ ಕೆಲಸ ಪ್ರಸನ್ನಾನಂದ ಶ್ರೀಗಳು ಮಾಡುತ್ತಿದ್ದಾರೆ. 21 ವರ್ಷಗಳಲ್ಲಿ ಶ್ರೀಮಠವು ಸಕ್ರಿಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೊಸದುರ್ಗ ಕುಂಚಿಟಿಗ ಗುರುಪೀಠದ ಶಾಂತವೀರ ಶ್ರೀಗಳು ಮಾತನಾಡಿ, ದುಶ್ಚಟಗಳಿಗೆ ದಾಸರಾಗಿರುವುದು ಹಾಗೂ ಜಾಗೃತಿ ಕೊರತೆಯೇ ಶೋಷಿತರ ಹಿಂದುಳಿಯುವಿಕೆಗೆ ಕಾರಣ ಹೊರತು ಬೇರಾರಲ್ಲ. ಮುಖಂಡರು ಉದ್ಧಾರವಾದರೆ ಸಾಲದು, ಸಮಾಜದ ಜನಸಾಮಾನ್ಯರು ಉದ್ಧಾರವಾಗುವತ್ತ ಚಿತ್ತ ಹರಿಸಬೇಕೆಂದರು. ಬೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮಾತನಾಡಿ, ಪ್ರಾಣಿಬಲಿ ನೀಡುವ ಜಾತ್ರೆಗಳು ಶೋಷಿತ ವರ್ಗದವರನ್ನು ಸಾಲಗಾರರನ್ನಾಗಿ ಮಾಡುತ್ತವೆ. ಅಂತಹ ಜಾತ್ರೆಗಳ ಸಾಲ ತೀರಿಸಲು ವರ್ಷಗಟ್ಟಲೆ ದುಡಿಮೆ ಮಾಡಬೇಕು. ವಾಲ್ಮೀಕಿ ಜಾತ್ರೆ ಅಧ್ಯಾತ್ಮ, ಅಕ್ಷರ, ಸಾಮಾಜಿಕ, ಆರ್ಥಿಕ ಕ್ರಾಂತಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಮಾತನಾಡಿ, ಬ್ರಿಟೀಷರಿಗೆ ಮೈನಡುಕ ಉಂಟು ಮಾಡಿದ್ದ ಸಿಂಧೂರ ಲಕ್ಷ್ಮಣನಂತೆ ಈ ಸಮಾಜದವರು ಹೋರಾಟಗಾರರಾಗಬೇಕು. ಆ ಮೂಲಕ ವಾಲ್ಮೀಕಿ ಸಮಾಜದವರು ಮುಖ್ಯವಾಹಿನಿಗೆ ಬರಬೇಕು ಎಂದರು.

ಜೇವರ್ಗಿ ಸಿದ್ಧ ಬಸವ ಕಬೀರ ಶ್ರೀಗಳು ಮಾತನಾಡಿ, ಜಗತ್ತಿನಲ್ಲಿ ಯಾರಿಂದಲೂ ಏನನ್ನೂ ಬೇಡದ ಬೇಡ ಸಮಾಜದವರು ಶ್ರೀಗಳ ಮಾರ್ಗದರ್ಶನದಲ್ಲಿ ಸಂಘಟಿತರಾಗುತ್ತಿರುವುದು ಸಂತಸದ ವಿಷಯ. ಈ ಹಿಂದೆ ಪಾಳೇಗಾರರು ಹಲವು ಮಠ, ಮಾನ್ಯಗಳ ಅಭಿವೃದ್ಧಿಗೆ ಬೆನ್ನುಲುಬಾಗಿ ನಿಂತಿದ್ದರು ಎಂದು ಸ್ಮರಿಸಿದರು.

ಕಾಗಿನೆಲೆ ಕನಕಪೀಠದ ನಿರಂಜನಾನಂದಪುರಿ ಶ್ರೀ, ಬೆಂಗಳೂರಿನ ಚಂದ್ರಶೇಖರ ಶ್ರೀ, ಮಳವಳ್ಳಿ ಬಸವಾನಂದ ಶ್ರೀಗಳು ಹಾಗೂ ನಾಡಿನ ವಿವಿಧ ಮಠಾಧಿಧೀಶರು ಆಶೀರ್ವಚನ ನೀಡಿದರು. ಮಠಾಧೀಶರನ್ನು ಪ್ರಸನ್ನಾನಂದ ಶ್ರೀಗಳು ಹಾಗೂ ಧರ್ಮದರ್ಶಿಗಳು ಸತ್ಕರಿಸಿದರು. ಜಾತ್ರಾ ಸಮಿತಿ ಅಧ್ಯಕ್ಷ ಸತೀಶ್‌ ಜಾರಕಿಹೊಳಿ, ಶಾಸಕರಾದ ಶ್ರೀರಾಮುಲು, ಡಾ| ಶಾಮನೂರು ಶಿವಶಂಕರಪ್ಪ, ಎಸ್‌.ರಾಮಪ್ಪ, ಎಸ್‌.ವಿ. ರಾಮಚಂದ್ರಪ್ಪ, ರೇಣುಕಾಚಾರ್ಯ, ಇತರರು ಇದ್ದರು.

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.