ಯುವಜನ ಮೇಳದಲ್ಲಿ ಜಾನಪದ ಪ್ರಕಾರಗಳ ಅನಾವರಣ


Team Udayavani, Feb 16, 2017, 1:10 PM IST

dvg3.jpg

ದಾವಣಗೆರೆ: ಕುವೆಂಪು ಕನ್ನಡ ಭವನದಲ್ಲಿ ಬುಧವಾರ ಜನಪದ ನೃತ್ಯ, ಗಾಯನ ಲೋಕವೇ ಅನಾವರಣಗೊಂಡು, ಭಾವಗೀತೆ, ಗೀಗೀ ಪದ, ಲಾವಣಿ, ಕೋಲಾಟ, ವೀರಗಾಸೆ, ಡೊಳ್ಳುಕುಣಿತ, ರಂಗಗೀತೆ, ಏಕಪಾತ್ರಾಭಿನಯ ಅಲ್ಲಿದ್ದವರ ಕಣ್ಮನ ಸೆಳೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳ ಕನ್ನಡದ ನೆಲ ಸಂಸ್ಕೃತಿಯಲ್ಲಿ ಹಾಸು ಹೊಕ್ಕಾಗಿರುವ ಅನೇಕ ಕಲಾ ಪ್ರಕಾರಗಳಿಗೆ ಸಾಕ್ಷಿಯಾಯಿತು. 

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಯುವಕ, ಯುವತಿ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮಲ್ಲಿನ ಕಲಾ ಪ್ರತಿಭೆ ಪ್ರದರ್ಶಿಸಿದರು. ಕನ್ನಡದ ಸಾರಸ್ವತ ಲೋಕದ ಖ್ಯಾತಿವೆತ್ತ ದರಾ ಬೇಂದ್ರೆ, ಕುವೆಂಪು, ಡಾ| ಎಚ್‌.ಎಸ್‌. ವೆಂಕಟೇಶಮೂರ್ತಿ, ಡಾ| ಕೆ.ಎಸ್‌. ನರಸಿಂಹಸ್ವಾಮಿ ಮುಂತಾದ ಮೇರು ಕವಿಗಳ ಕವನಗಳಿಗೆ ಮೇಳದಲ್ಲಿನ ಸ್ಪರ್ಧಿಗಳು ಧ್ವನಿಯಾದರು.  

ಕನ್ನಡ ನೆಲದ ಸಾಂಸ್ಕೃತಿಕ ಬೇರಿನ ಜನಪದ, ಗೀಗೀಪದ, ಧಾನ್ಯಗಳ ಕುಟ್ಟಿ, ಹಸನು ಮಾಡುವ ಹೊತ್ತನ್ನು ಕಳೆಯಲಿಕ್ಕೆ ಹಾಡಲ್ಪಡುತ್ತಿದ್ದ ಹಾಡುಗಳು, ಮದುವೆ ಮುಂತಾದ ಶುಭ ಸಂದರ್ಭದಲ್ಲಿನ ಸೋಬಾನೆ ಪದ…ಹೀಗೆ ವಿವಿಧ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ ಸ್ಪರ್ಧಿಗಳು ಗಮನ ಸೆಳೆದರು. ದಾವಣಗೆರೆಯ ದವನ ಫೋಕ್‌ ಆರ್ಟ್ಸ್ನ ವಿದ್ಯಾರ್ಥಿನಿಯ ಜಾನಪದ ನೃತ್ಯ ಸೊಗಸಾಗಿ ಮೂಡಿ ಬಂದಿತು.

ಧ್ವನಿಮುದ್ರಿತ ಹಾಡಿನ ಬದಲಾಗಿ ಕಲಾವಿದರು ಹಾಡಿದಂಥಹ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕುವ ಮೂಲಕ ಜಾನಪದ ಲೋಕವನ್ನೇ ತೆರೆದಿಟ್ಟರು. ವೇಷಭೂಷಣ ಒಪ್ಪಓರಣವಾಗಿತ್ತು. ಹರಪನಹಳ್ಳಿಯ ಸೇವಾಲಾಲ್‌ ಗ್ರಾಮೀಣ ಅಭಿವೃದ್ಧಿ ಸಂಘದ ಪದಾಧಿಕಾರಿಗಳ ಲಂಬಾಣಿ ನೃತ್ಯ ಆಕರ್ಷಕವಾಗಿತ್ತು.

ಲಂಬಾಣಿ ಸಮಾಜದ ಸಂಪ್ರದಾಯದ ಉಡುಪಿನೊಂದಿಗೆ ಕಂಗೊಳಿಸಿದ ಯುವತಿಯರು ಡುಂ ಡುಂ ಡುಮುಕಿ… ಹಾಡಿಗೆ ಅತ್ಯಾಕರ್ಷಕದ ನೃತ್ಯದ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು. ಇಲ್ಲಿಯೂ ಧ್ವನಿಮುದ್ರಿಯ ಹಾಡಿ ಇರಲಿಲ್ಲ ಎಂಬುದು ವಿಶೇಷ. ಯುವಜನ ಮೇಳದ ಸ್ಪರ್ಧಿಯಾಗಿರದಿದ್ದರೂ ಬಾಲಕಿ ಕೆ. ಸಿಂಚನಾ ತನ್ನ ತೊದಲು ನುಡಿಗಳಿಂದ ನಡೆಸಿಕೊಟ್ಟ ಬಬ್ರುವಾಹನ… ಏಕಪಾತ್ರಾಭಿನಯಕ್ಕೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದರು. 

ಎರಡು ದಿನಗಳ ಕಾಲ ನಡೆಯುವ ಯುವಜನ ಮೇಳದಲ್ಲಿ ಮೊದಲ ದಿನ ದಾವಣಗೆರೆ ತಾಲೂಕಿನ 82, ಹರಿಹರದ 25, ಹೊನ್ನಾಳಿಯ 39, ಹರಪನಹಳ್ಳಿಯ 20, ಚನ್ನಗಿರಿಯ 10 ಕಲಾವಿದರು ನೋಂದಣಿ ಮಾಡಿಕೊಂಡಿದ್ದರು. ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಳುಬಾಗಿಲಿನಲ್ಲಿ ಫೆ. 17 ರಿಂದ 19ರ ವರೆಗೆ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವರು. 

ಮಾರ್ಚ್‌ನಲ್ಲಿ ಉಡುಪಿಯಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್‌. ಶ್ರೀನಿವಾಸ್‌ ತಿಳಿಸಿದರು. ಯುವಜನ ಮೇಳದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ಮಾತ್ರವೇ ನೀಡಲಾಗುತ್ತದೆ. ಇತರೆ ವೆಚ್ಚವನ್ನು ತಗ್ಗಿಸಿ, ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು.

ತಾವು ಈವರೆಗೆ ಸೇವೆ ಸಲ್ಲಿಸಿರುವ ಕಡೆ ನಗದು ಬಹುಮಾನ ನೀಡಲಾಗುತ್ತಿತ್ತು. ನಗದು ಬಹುಮಾನ ನೀಡಿದಲ್ಲಿ  ಸ್ಪರ್ಧಿಗಳಿಗೆ ಉತ್ತೇಜನ ದೊರೆತಂತಾಗುತ್ತದೆ ಎಂದು ತಿಳಿಸಿದರು. ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಮಾಗಾನಹಳ್ಳಿ ಮಂಜುನಾಥ್‌, ರಾಜ್ಯ ಪ್ರಶಸ್ತಿ ಪಡೆದಿರುವ ಎಂ. ಯೋಗೇಶ್‌, ಡಿ.ಎಲ್‌. ಜಯರಾಜನಾಯ್ಕ, ಆರ್‌. ಶಿವಾನಂದನಾಯ್ಕ ಇತರರು ಇದ್ದರು.  

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.