ಸಮಾಜದ ಜಾಗೃತಿಗಾಗಿಯೇ ವಾಲ್ಮೀಕಿ ಜಾತ್ರೆ


Team Udayavani, Apr 10, 2021, 8:07 PM IST

ಬನಹಗಜಜಗಗಜಹಜ

ದಾವಣಗೆರೆ : ವಾಲ್ಮೀಕಿ ನಾಯಕ ಸಮಾಜದ ಜಾಗೃತಿಗಾಗಿಯೇ ಪ್ರತಿ ವರ್ಷ ವಾಲ್ಮೀಕಿ ಜಾತ್ರೆ ನಡೆಸಲಾಗುತ್ತಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.

ಶುಕ್ರವಾರ ನಗರದ ನಾಯಕ ಹಾಸ್ಟೆಲ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಾತ್ರೆಯ ಯಶಸ್ಸಿಗೆ ಕಾರಣರಾದವರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜಾತ್ರೆ ಎಂದರೆ ಸಂತೋಷ ಮತ್ತು ಸಂಭ್ರಮ ಪಡುವಂತದ್ದು. ವಾಲ್ಮೀಕಿ ಜಾತ್ರೆ ಬಹಳ ವಿಶೇಷವಾದುದು. ಸಂತೋಷ, ಸಂಭ್ರಮ ಪಡುವ ಜತೆಗೆ ಸಮಾಜ ಬಾಂಧವರು ಜಾಗೃತರಾಗಬೇಕು ಎನ್ನುವ ಕಾರಣಕ್ಕೆ ವಾಲ್ಮೀಕಿ ಜಾತ್ರೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಕೃತ, ತೇತ್ರಾ, ದ್ವಾಪುರ ಮತ್ತು ಕಲಿಯುಗದಲ್ಲೂ ನಾಯಕ ಸಮುದಾಯದ ಕೊಡುಗೆ ಇದೆ. ಭಾರತೀಯ ಸಂಸ್ಕೃತಿಗೆ ರಾಮಾಯಣ ನೀಡಿದ ಆದಿಕವಿ ವಾಲ್ಮೀಕಿ, ನಿಷ್ಕಲ್ಮಶ ಭಕ್ತಿಯಿಂದ ಶಿವನನ್ನೇ ಪ್ರತ್ಯಕ್ಷವಾಗುವಂತೆ ಮಾಡಿದ ಬೇಡರ ಕಣ್ಣಪ್ಪನ ವಂಶಸ್ಥರು. 28 ಜಿಲ್ಲೆಯಲ್ಲಿ ಇರುವಂತಹ ರಾಜ್ಯದ 4ನೇ ಅತಿ ದೊಡ್ಡ ಸಮುದಾಯ ದವರು ಒಗ್ಗಟ್ಟಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಭಾರತ ಜಾತ್ಯತೀತ ರಾಷ್ಟ್ರ, ಅಂತಹ ಜಾತ್ಯತೀತ ರಾಷ್ಟ್ರದಲ್ಲಿ ಜಾತಿಯೇ ಸತ್ಯ. ಯಾರಾದರೂ ನಾನು ಜಾತ್ಯತೀತ ಎಂಬುದಾಗಿ ಹೇಳಿಕೊಂಡರೆ ನಮ್ಮ ಅಭಿಪ್ರಾಯದಲ್ಲಿ ಅವನಂತಹ ಅವಿವೇಕಿ ಯಾರೂ ಇಲ್ಲ. ಜಾತಿಯೇ ಸತ್ಯ ಆಗಿದೆ ಎಂದು ತಿಳಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಸಮಾಜದ ಮುಖ್ಯವಾಹಿನಿಗೆ ತರುವುದಾಗಿ ಪಕ್ಷಗಳು ಪುಂಖಾನುಪುಂಖವಾಗಿ ಹೇಳುತ್ತವೆ. ಅಧಿಕಾರಕ್ಕೆ ಬಂದ ತಕ್ಷಣ ಮರೆತು ಹೋಗುತ್ತವೆ.

ವಾಲ್ಮೀಕಿ ನಾಯಕ ಸಮಾಜಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ.7.5 ಮೀಸಲಾತಿ ಒದಗಿಸುವ ಬಗ್ಗೆಯೂ ಇದೇ ಕೆಲಸ ಆಗುತ್ತಿದೆ. ನಮ್ಮ ಸಮಾಜದ ಮತ ಪಡೆದು ಆಯ್ಕೆಯಾದಂತಹ ಜನಪ್ರತಿನಿಧಿಗಳು ಬಂದಾಗ ವಿಧಾನಸಭೆಯಲ್ಲಿ ಶೇ.7.5 ಮೀಸಲಾತಿ ಬಗ್ಗೆ ಯಾಕೆ ಪ್ರಶ್ನೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಕೇಳಬೇಕು. ಪ್ರಶ್ನೆ ಮಾಡುವುದಿಲ್ಲ ಎನ್ನುವುದಾದರೆ ನಮ್ಮ ಬಳಿ ಬರಬೇಡಿ ಎಂದು ಖಡಾಖಂಡಿತವಾಗಿ ಹೇಳಬೇಕು ಎಂದು ತಿಳಿಸಿದರು.

ಸಮಾಜ ಬಾಂಧವರು ಯಾವುದೇ ಪಕ್ಷದಲ್ಲಿದ್ದರೂ ಮುಖಂಡರ ಅಭಿಮಾನಿಗಳಾಗಿರಬೇಕು. ಸಮಾಜದ ವಿಷಯ ಬಂದಾಗ ವಾಲ್ಮೀಕಿ ಮಹರ್ಷಿಯ ಅನುಯಾಯಿಗಳಾಗಬೇಕು. ಆದರೆ, ನಮ್ಮಲ್ಲಿ ತದ್ವಿರುದ್ಧವಾಗಿದೆ. ಪಕ್ಷದ ಲೀಡರ್‌ಗಳ ಆಭಿಮಾನಿಗಳಾದವರು ವಾಲ್ಮೀಕಿ ಮಹರ್ಷಿಯವರ ಆನುಯಾಯಿಗಳಾಗುತ್ತಿಲ್ಲ. ಇದು ಬದಲಾವಣೆ ಆಗಬೇಕು. ಪ್ರತಿಯೊಬ್ಬರು ಸಮಾಜದ ಮುಖ್ಯವಾಹಿನಿಗೆ ಬರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ತಿಳಿಸಿದರು. ವಾಲ್ಮೀಕಿ ನಾಯಕ ಸಮಾಜಕ್ಕೆ ಸಾಮಾಜಿಕ ನ್ಯಾಯ, ಸಾಂವಿಧಾನಿಕ ಹಕ್ಕು ಕೊಡದೇ ಇದ್ದರೆ ಬುದ್ಧಿ ಕಲಿಸಲಾ ಗುವುದು ಎಂದು ಹೇಳಿದರೆ ಎಲ್ಲರೂ ಬಂದು ಕೊಡಬೇಕಾದ ಸಾಮಾಜಿಕ ನ್ಯಾಯ, ಸಾಂವಿಧಾನಿಕ ಹಕ್ಕು ಕೊಡುತ್ತಾರೆ ಎಂದು ತಿಳಿಸಿದರು.

ವಾಲ್ಮೀಕಿ ಜಾತ್ರಾ ಸಂಚಾಲಕ ಹೊದಿಗೆರೆ ರಮೇಶ್‌ ಮಾತನಾಡಿ, ಸಮಾಜದ ಮುಂದೆ ಹಲವಾರು ಸವಾಲುಗಳಿವೆ. ಮೀಸಲಾತಿಗೆ ಒತ್ತಾಯಿಸಿ ಜನಪ್ರತಿನಿಧಿಗಳು ಹೋರಾಟಕ್ಕೆ ಇಳಿಯದ ಹಿನ್ನೆಲೆಯಲ್ಲಿ ಸ್ವಾಮೀಜಿಯವರೇ ಹೋರಾಟಕ್ಕೆ ಇಳಿದಿದ್ದಾರೆ. ಅವರ ಬೆನ್ನಿಗೆ ಎಲ್ಲರೂ ಪಕ್ಷಾತೀತವಾಗಿ ಪರಮಶಕ್ತಿಯಾಗಿ ನಿಲ್ಲಬೇಕು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ನಾಯಕ ಹಾಸ್ಟೆಲ್‌ ಅಧ್ಯಕ್ಷ ಬಿ. ವೀರಣ್ಣ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜಕ್ಕೆ ಮೀಸಲಾತಿಗಾಗಿ ಸ್ವಾಮೀಜಿ ತೆಗೆದುಕೊಳ್ಳುವಂತಹ ಯಾವುದೇ ರೀತಿಯ ತೀರ್ಮಾನಕ್ಕೆ ತಾವು ಬದ್ಧ ಎಂದು ತಿಳಿಸಿದರು. ಉಪನ್ಯಾಸಕ ಡಾ| ಎ.ಬಿ. ರಾಮಚಂದ್ರಪ್ಪ ಪ್ರಾಸ್ತಾವಿಕ ಮಾತುಗಳಾಡಿದರು. ವಕೀಲ ಎನ್‌.ಎಂ. ಆಂಜನೇಯ ಗುರೂಜಿ, ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯ ಅಧ್ಯಕ್ಷ ಜಿ.ಟಿ. ಚಂದ್ರಶೇಖರ್‌ ಇದ್ದರು. ರಾಘು ದೊಡಮನಿ ನಿರೂಪಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.