ಇಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ


Team Udayavani, Jan 25, 2019, 5:28 AM IST

dvg-2.jpg

ದಾವಣಗೆರೆ: ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಗುತ್ತಿಗೆದಾರರ ಸಂಘದಿಂದ ದೂರು ಬಂದಿವೆ. ಭ್ರಷ್ಟಾಚಾರಕ್ಕೆ ಇಲ್ಲಿ ಅವಕಾಶವೇ ಇಲ್ಲ. ಲೂಟಿ ಹೊಡೆಯಲು ಬಿಡುವುದಿಲ್ಲ. ನಿಮಗೆ ಎಲ್ಲಿ ಲೂಟಿ ಹೊಡೆಯಲು ಅವಕಾಶವಿದೆಯೋ ಅಲ್ಲಿಗೆ ಹೋಗಿ…

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಗುರುವಾರ ಸ್ಮಾರ್ಟ್‌ಸಿಟಿ ಸಲಹಾ ಸಮಿತಿ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿಯಿದು.

ಸ್ಮಾರ್ಟ್‌ಸಿಟಿ ಕಚೇರಿಯಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದರ ಬಗ್ಗೆ ದೂರು ಬಂದಿವೆ. ನಾವು ಇಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ನಿಮಗೆ ಎಲ್ಲಿ ಲೂಟಿ ಹೊಡೆಯಲು ಅವಕಾಶವಿದೆಯೋ ಅಲ್ಲಿಗೆ ಹೋಗಿ… ಎಂದು ಗರಂ ಆದರು.

ಶಾಸಕ ಶಾಮನೂರು ಶಿವಶಂಕರಪ್ಪ ಆರೋಪ, ಆಕ್ರೋಶಕ್ಕೆ ಧ್ವನಿಗೂಡಿಸಿದ ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕ ಎಸ್‌.ಎ. ರವೀಂದ್ರನಾಥ್‌, ಭ್ರಷ್ಟಾಚಾರ ಎಂಬುದು ಮಾಮೂಲು ಎಂಬಂತೆ ಆಗಿದೆ. ದಾವಣಗೆರೆಯಲ್ಲಿ ಭ್ರಷ್ಟಾಚಾರಕ್ಕೆ ಅಸ್ಪದ ಇಲ್ಲ ಎಂದರು. ಕೆಲವರು ನಮ್ಮ ಮೇಲೆ ಆ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಈಗಾಗಲೇ ಆರಂಭವಾಗಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು. ಆದರೆ, ಕಾಮಗಾರಿಗಳು ನಿಗದಿತ ಅವಧಿಯೊಳಗೆ ಮುಕ್ತಾಯವಾಗಿಲ್ಲ. ನಾಗರಿಕರು ಜನಪ್ರತಿನಿಧಿಗಳನ್ನು ದೂರುತ್ತಿದ್ದಾರೆ. ಹಾಗಾಗಿ ಜನಪ್ರತಿನಿಧಿಗಳು ಮುಜುಗರಕ್ಕೆ ಒಳಗಾಗುತ್ತಿದ್ದೇವೆ. ಅಧಿಕಾರಿಗಳು ಸಂಬಂಧಿತ ಗುತ್ತಿಗೆದಾರರ ಮೇಲೆ ಒತ್ತಡ ಹಾಕಿ ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್‌.ಎ.ರವೀಂದ್ರನಾಥ್‌ ಸೂಚಿಸಿದರು.

ಒಂದು ವರ್ಷದ ಹಿಂದೆ ಕಾಮಗಾರಿಗಳು ಆರಂಭಗೊಂಡಿದ್ದರೂ ದಾವಣಗೆರೆ ಹಳೇ ಭಾಗದ ಕಾಮಗಾರಿಗಳು ಮುಕ್ತಾಯಗೊಳ್ಳದಿರುವ ಬಗ್ಗೆ ಶಾಮನೂರು ಶಿವಶಂಕರಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಗದಿತ ಅವಧಿಯೊಳಗೆ ಮುಗಿಸಲು ವಿಳಂಬ ಏಕೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಪ್ರಶ್ನಿಸಿದರು.

ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅಸಡ್ಡೆಯಿಂದಾಗಿ ಕಾಮಗಾರಿಗಳನ್ನು ಗುತ್ತಿಗೆ ನೀಡುವ ವೇಳೆ ತಾಂತ್ರಿಕ ತೊಂದರೆ ನಿವಾರಿಸದೆ ಇರುವುದರಿಂದ ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಲಾಗುತ್ತಿಲ್ಲ ಎಂದು ಸ್ಮಾರ್ಟ್‌ಸಿಟಿ ಯೋಜನೆ ನಿರ್ದೇಶಕ ಶಿವನಹಳ್ಳಿ ರಮೇಶ್‌ ದೂರಿದರು.

ಏನೇ ಸಮಸ್ಯೆ ಇದ್ದರೂ ಇದೀಗ ಆರಂಭಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು. ಮುಂದೆ ಸ್ಮಾರ್ಟ್‌ಸಿಟಿಯ ಯಾವುದೇ ಕಾಮಗಾರಿಗಳು ವಿಳಂಬ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಮಿತಿ ಸೂಚಿಸಿತು.

ಮೇಯರ್‌ ಶೋಭಾ ಪಲ್ಲಾಗಟ್ಟೆ, ಮಾಜಿ ಮೇಯರ್‌ ಅನಿತಾ ಮಾಲತೇಶ್‌ ಜಾಧವ್‌, ದಿನೇಶ್‌ ಕೆ. ಶೆಟ್ಟಿ, ನಿರ್ದೇಶಕರಾದ ಅಥಣಿ ಎಸ್‌. ವೀರಣ್ಣ, ಡಾ| ಎಚ್. ಈರಮ್ಮ, ಅಜ್ಜಂಪುರಶೆಟ್ರಾ ಶಂಭುಲಿಂಗಪ್ಪ, ಮುರುಘರಾಜೇಂದ್ರ ಜೆ. ಚಿಗಟೇರಿ, ಡಾ| ಶಾಂತಾ ಭಟ್, ಮಂಜುಳಾ ಬಸವಲಿಂಗಪ್ಪ, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್‌ ಷರೀಫ್‌, ನಗರಪಾಲಿಕೆ ಆಯುಕ್ತ ಮಂಜುನಾಥ್‌ ಆರ್‌. ಬಳ್ಳಾರಿ, ಇಂಜಿನಿಯರ್‌ ಎಂ.ನಾಗರಾಜ್‌, ಹೈಡೆಕ್‌ ಸಂಸ್ಥೆಯವರು ಇದ್ದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.